ಕಲಬುರಗಿಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ ದರ್ಬಾರ್: ಪಿಎಂ ಆವಾಸ್ ಯೋಜನೆಯಲ್ಲಿ ಭಾರೀ ಅವ್ಯವಹಾರ !

ಕಲಬುರಗಿಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ ದರ್ಬಾರ್: ಪಿಎಂ ಆವಾಸ್ ಯೋಜನೆಯಲ್ಲಿ ಭಾರೀ ಅವ್ಯವಹಾರ !

Published : Jul 19, 2024, 04:32 PM IST

ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭಾರೀ ಗೋಲ್ಮಾಲ್
ಮನೆಗಳನ್ನ ನಿರ್ಮಿಸಿದೇ ಕೋಟಿ ಕೋಟಿ ಹಣ ಲೂಟಿ
256 ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭ್ರಷ್ಟಾಚಾರ
 


ಪಿಎಂ ಆವಾಸ್‌ ಯೋಜನೆಯಲ್ಲಿ(PM Awas project) ಭಾರೀ ಅವ್ಯವಹಾರ ನಡೆದಿರುವ ಘಟನೆ ಕಲಬುರಗಿಯಲ್ಲಿ(Kalaburagi) ನಡೆದಿದೆ. ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳದ್ದೇ (Corrupt officials) ದರ್ಬಾರ್‌ ಜೋರಾಗಿದ್ದು, ಅಫಜಲಪುರದಲ್ಲಿ ಪಿಎಂ  ಆವಾಸ್ ಯೋಜನೆ ಹಳ್ಳ ಹಿಡಿದಿದೆ. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭಾರೀ ಗೋಲ್‌ಮಾಲ್‌ ಮಾಡಲಾಗಿದೆ. ಮನೆಗಳನ್ನ(Houses) ನಿರ್ಮಿಸಿದೇ ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ. 256 ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಭ್ರಷ್ಟಾಚಾರ ನಡೆಸಲಾಗಿದೆ. 2019- 20ನೇ ಸಾಲಿನಲ್ಲಿ ನಕಲಿ ಫಲಾನುಭವಿಗಳ ಸೃಷ್ಟಿಸಿದ್ದು, ಒಂದೊಂದು ಮನೆಗೆ 1.5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಒಟ್ಟು 256 ಫಲಾನುಭವಿಗಳ ಹೆಸರಲ್ಲಿ 2 ಕೋಟಿ 65 ಲಕ್ಷ ಗುಳುಂ ಮಾಡಲಾಗಿದೆ. ಒಂದೇ ಒಂದೂ ಮನೆ ನಿರ್ಮಾಣ ಆಗದೆ ಹಣ ಗುಳುಂ ಮಾಡಲಾಗಿದ್ದು, ಪುರಸಭೆ ಅಧಿಕಾರಿಗಳು, ಮಧ್ಯವರ್ತಿಗಳಿಂದ ಹಣ ಲೂಟಿ ಮಾಡಲಾಗಿದೆ. ಕಲಬುರಗಿಯಲ್ಲಿ ಪಿಎಂ ಆವಾಸ್ ಯೋಜನೆಯೇ ಬುಡಮೇಲಾಗಿದೆ. ಲೋಕಾಯುಕ್ತ ತನಿಖೆಯಿಂದ ಅಕ್ರಮ ಬಯಲಾಗಿದ್ದು, ಮೂವರು ಮಧ್ಯವರ್ತಿಗಳ ವಿರುದ್ದ FIR ದಾಖಲಾಗಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಶೋಕ್ ಭೂತಿ, ನಾಗು ಗುಣಾರಿ , ಮಹಾದೇವಪ್ಪ ವಿರುದ್ಧ FIR ದಾಖಲಿಸಲಾಗಿದೆ. ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಹಣ ಲಪಟಾಯಿಸಿದ ಮೂವರು, ಹಣ ವಾಪಸ್ ಪಡೆಯಲು ಪುರಸಭೆ ಅಧಿಕಾರಿಗಳಿಂದ ಹರಸಾಹಸ ಪಡಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ಹುಬ್ಬಳ್ಳಿ ಧಾರವಾಡ ನಗರದಲ್ಲಿ ಹೆಚ್ಚಾದ ಸೈಬರ್ ಅಪರಾಧ: ದಿನಕ್ಕೊಂದು ವರಸೆ, ಮೋಸ..ಕ್ರಿಮಿನಲ್‌ಗಳ ನಾನಾ ವೇಷ!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more