ಚಿಕನ್‌ ರೋಲ್ ಇಲ್ಲ ಅಂದಿದಕ್ಕೆ ಹೋಟೆಲ್‌ಗೆ ಬೆಂಕಿ ಇಟ್ಟ ದುರುಳರು

ಚಿಕನ್‌ ರೋಲ್ ಇಲ್ಲ ಅಂದಿದಕ್ಕೆ ಹೋಟೆಲ್‌ಗೆ ಬೆಂಕಿ ಇಟ್ಟ ದುರುಳರು

Published : Dec 13, 2022, 06:07 PM IST

ಚಿಕನ್ ರೋಲ್ ಇಲ್ಲ ಎಂದು ಹೇಳಿದ್ದಕ್ಕೆ ಕುಪಿತಗೊಂಡ ಕಿಡಿಗೇಡಿಗಳ ಗುಂಪೊಂದು ಹೊಟೇಲ್ ಸಿಬ್ಬಂದಿ ಜೊತೆಗೆ ಜಗಳ ಮಾಡಿರುವುದು ಮಾತ್ರವಲ್ಲದೆ ಅವರು ತಂಗುವ  ಬಾಡಿಗೆ ಮನೆಯ ಕೊಠಡಿಗೆ ಬೆಂಕಿ ಹಚ್ಚಿ ದುಷ್ಕೃತ್ಯ  ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು (ಡಿ.13): ಚಿಕನ್ ರೋಲ್ ಇಲ್ಲ ಎಂದು ಹೇಳಿದ್ದಕ್ಕೆ ಕುಪಿತಗೊಂಡ ಕಿಡಿಗೇಡಿಗಳ ಗುಂಪೊಂದು ಹೊಟೇಲ್ ಸಿಬ್ಬಂದಿ ಜೊತೆಗೆ ಜಗಳ ಮಾಡಿರುವುದು ಮಾತ್ರವಲ್ಲದೆ ಅವರು ತಂಗುವ  ಬಾಡಿಗೆ ಮನೆಯ ಕೊಠಡಿಗೆ ಬೆಂಕಿ ಹಚ್ಚಿ ದುಷ್ಕೃತ್ಯ  ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ  ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿ ವಾಸವಿದ್ದ ಹೋಟೆಲ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೇವರಾಜ್ ಮತ್ತು ಗಣೇಶ ಎಂಬಾತನನ್ನು ಬಂಧಿಸಲಾಗಿದೆ. ಮತ್ತೋರ್ವ ತಲೆ ಮರೆಸಿಕೊಂಡಿದ್ದಾನೆ. ತಡರಾತ್ರಿ ಚಿಕನ್ ರೋಲ್ ತಿನ್ನಲು ಅರೋಪಿಗಳು  ಕುಮಾರ್ ಹೋಟೆಲ್ ಗೆ ಬಂದಿದ್ದರು. ಈ ವೇಳೆ  ಹೊಟೇಲ್ ಮುಚ್ಚುವ ಸಮಯವಾಗಿತ್ತು. ಹೀಗಾಗಿ ಹೋಟೆಲ್ ಸಿಬ್ಬಂದಿಗಳು ಮುಚ್ಚುವ ಸಮಯವಾಗಿದೆ ಹೀಗಾಗಿ ಚಿಕನ್ ರೋಲ್ ಇಲ್ಲ ಎಂದಿದ್ದಾರೆ. ಈ ವೇಳೆ ದೇವರಾಜ್ ಮತ್ತು ಗಣೇಶ  ಚಿಕನ್ ರೋಲ್​ಗಾಗಿ ಜಗಳ ಮಾಡಿದ್ದಾರೆ. ಗಲಾಟೆ ವೇಳೆ ಕುಡಿದ ಅಮಲಿನಲ್ಲಿದ್ದ ಮೂವರನ್ನು ಹೊಟೇಲ್ ಸಿಬ್ಬಂದಿ ಥಳಿಸಿ ಕಳುಹಿಸಿದ್ದಾರೆ. ಇದಕ್ಕೆ ಕೆರಳಿದ ಆರೋಪಿಗಳು ಪೆಟ್ರೋಲ್ ಪಂಪ್ ಗೆ ಹೋಗಿ ಎಂಟು ಲೀಟರ್ ಪೆಟ್ರೋಲ್ ಖರೀದಿ ಮಾಡಿ ಹೋಟೆಲ್ ಪಕ್ಕವೇ ಇದ್ದ ಸಿಬ್ಬಂದಿಯ ಬಾಡಿಗೆ  ಮನೆಗೆ ಬೆಂಕಿ ಇಟ್ಟಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಮತ್ತೋರ್ವ ಆರೋಪಿಯ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!