ಹಿಂದೂ-ಮುಸ್ಲಿಂ ಹುಡುಗ ಹುಡುಗಿಯರೇ ಹುಷಾರ್, ಎಗ್ಗಿಲ್ಲದೆ ನಡೀತಿದೆ ನೈತಿಕ ಪೊಲೀಸ್‌ಗಿರಿ..!

ಹಿಂದೂ-ಮುಸ್ಲಿಂ ಹುಡುಗ ಹುಡುಗಿಯರೇ ಹುಷಾರ್, ಎಗ್ಗಿಲ್ಲದೆ ನಡೀತಿದೆ ನೈತಿಕ ಪೊಲೀಸ್‌ಗಿರಿ..!

Published : Jan 11, 2024, 11:12 AM IST

ಕಿರಾತಕ ಕೃತ್ಯಗಳನ್ನ ಇಂತವರಿಂದಲೇ ನಮ್ಮ ಸಮಾಜದಲ್ಲಿ ಶಾಂತಿ ಸೌಹಾರ್ಧತೆ ಹದಗೆಡುತ್ತಿರೋದು. ಇನ್ನೂ ಇಂತಹ ಘಟನೆಗಳು ನಡೆಯುತ್ತಿದ್ದರೂ ಸರ್ಕಾರ ಯಾಕೋ ಮೌನವಹಿರೋದು ನಿಜಕ್ಕೂ ದುರಂತ. ಸರ್ಕಾರ ಇಂತವರ ಹೆಡೆಮುರಿ ಕಟ್ಟಬೇಕಿದೆ. ಸಮಾಜದಲ್ಲಿ ಶಾಂತಿ ನೆಲಸುವಂತಹ ಕ್ರಮಕೈಗೊಳ್ಳಬೇಕಿದೆ. 

ಬೆಳಗಾವಿ(ಜ.11):  ಇತ್ತೀಚೆಗೆ ಧರ್ಮ ಧರ್ಮಗಳ ನಡುವಿನ ಹೊಡೆದಾಟ, ಬಡಿದಾಟ ಹೆಚ್ಚಾಗಿದೆ. ಅದರಲ್ಲೂ ಕೆಲವರಂತೂ ಒಂದು ಹಿಂದು ಮುಸ್ಲಿಂ ಹುಡುಗ ಹುಡುಗಿ ಒಟ್ಟಿಗೆ ನೋಡಿದ್ರೆ ಮುಗೀತು. ತಮ್ಮ ಪೌರುಷವನ್ನ ತೋರಿಸಿಯೇ ಬಿಡ್ತಾರೆ. ಫ್ರೆಂಡ್ಸ್ ಅಂದ್ರೂ ಬಿಡಲ್ಲ, ಅಣ್ಣ ತಂಗಿ ಅಂದ್ರೂ ಬಿಡಲ್ಲ. ಅದರಲ್ಲೂ ಇತ್ತೀಚೆಗಂತೂ ಈ ನೈತಿಕ ಪೊಲೀಸ್‌ಗಿರಿ ಎಗ್ಗಿಲ್ಲದೆ ನಡೆಯುತ್ತಿದೆ. ಹೀಗೆ ಹಿಂದು ಮುಸ್ಲಿಂ ಯುವಕ ಯುವತಿಯರನ್ನೇ ಟಾರ್ಗೆಟ್ ಮಾಡಿಕೊಂಡು ಕೂತಿರುವ ಕೆಲ ಗ್ಯಾಂಗ್‌ಗಳ ಆಟೋಟಪದ ಪ್ರದರ್ಶನವೇ ಇವತ್ತಿನ ಎಫ್ಐಆರ್.

ತಮ್ಮ ಪಾಡಿಗೆ ಬಂದು ಹೋಗುತ್ತಿದ್ದವರ ಮೇಲೆ ಪುಂಡರು ತಮ್ಮ ಪೌರುಷ ತೋರಿಸಿದ್ದಾರೆ. ಆದ್ರೆ ಇದೇ ಮೊದಲೇನೂ ಅಲ್ಲ. ಮೊನ್ನೆಯಷ್ಟೇ ಬೆಳಗಾವಿ ಮತ್ತು ಚಿಕ್ಕಮಗಳೂರಿನಲ್ಲೂ ಇಂಥದ್ದೇ ಘಟನೆ ನಡೆದಿದೆ. ಪುಂಡರು ನೈತಿಕ ಪೊಲೀಸ್‌ಗಿರಿ ಪ್ರದರ್ಶಿಸಿದ್ದಾರೆ.

ಡಿಸಿಎಂ ದಂಗಲ್: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ದಾಯಾದಿ ಯುದ್ಧ, "ಲಕ್ಷ್ಮೀ" ಪಟಾಕಿ, ಸೀಕ್ರೆಟ್ ಆಪರೇಷನ್..!

ಈ ಕಿರಾತಕರು ಫ್ರೆಂಡ್ಸ್ ಅಂದ್ರೂ ಬಿಡಲ್ಲ ಅಕ್ಕ ತಮ್ಮ ಅಂದ್ರೂ ಬಿಡಲ್ಲ ಅನ್ನೋದಕ್ಕೆ ಬೆಳಗಾವಿಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ... ಅವರಿಬ್ಬರೂ ಸಂಬಂಧದಲ್ಲಿ ಅಕ್ಕ-ತಮ್ಮ. ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ತಮ್ಮೂರಿನಿಂದ ಬೆಳಗಾವಿಗೆ ಬಂದಿದ್ದರು. ಬಂದ ಕೆಲಸ ತಡವಾದ ಕಾರಣ ಕೋಟೆ ಕೆರೆಯ ದಡದಲ್ಲಿ ಕುಳಿತಿದ್ದರು. ಈ ಜೋಡಿಯನ್ನ ಗಮನಿಸಿದ ಗುಂಪೊಂದು ದಿಢೀರ್ ಅಟ್ಯಾಕ್ ಮಾಡಿದೆ. ಅಷ್ಟೇ ಅಲ್ಲ ಶೆಡ್ ಒಳಗೆ ಎಳೆದೊಯ್ದು ಯುವಕ-ಯುವತಿ ಮೇಲೆ ಹಲ್ಲೆ ಮಾಡಿದೆ.

ಕಿರಾತಕ ಕೃತ್ಯಗಳನ್ನ ಇಂತವರಿಂದಲೇ ನಮ್ಮ ಸಮಾಜದಲ್ಲಿ ಶಾಂತಿ ಸೌಹಾರ್ಧತೆ ಹದಗೆಡುತ್ತಿರೋದು. ಇನ್ನೂ ಇಂತಹ ಘಟನೆಗಳು ನಡೆಯುತ್ತಿದ್ದರೂ ಸರ್ಕಾರ ಯಾಕೋ ಮೌನವಹಿರೋದು ನಿಜಕ್ಕೂ ದುರಂತ. ಸರ್ಕಾರ ಇಂತವರ ಹೆಡೆಮುರಿ ಕಟ್ಟಬೇಕಿದೆ. ಸಮಾಜದಲ್ಲಿ ಶಾಂತಿ ನೆಲಸುವಂತಹ ಕ್ರಮಕೈಗೊಳ್ಳಬೇಕಿದೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!