Crime News: 2 ಎಕರೆ 10 ಗುಂಟೆ ಜಮೀನು ವಿಚಾರಕ್ಕೆ ಗಲಾಟೆ: ಬಡಿದಾಟದಲ್ಲಿ ಕಿರಿಯ ತಮ್ಮನ ಕೊಲೆ..!

Crime News: 2 ಎಕರೆ 10 ಗುಂಟೆ ಜಮೀನು ವಿಚಾರಕ್ಕೆ ಗಲಾಟೆ: ಬಡಿದಾಟದಲ್ಲಿ ಕಿರಿಯ ತಮ್ಮನ ಕೊಲೆ..!

Published : Apr 06, 2024, 05:38 PM IST

ರಾಜ್ಯದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ..!
ಪರೀಕ್ಷೆ ಬರೆದು ಮನೆಗೆ ಬಂದವನು ಹೆಣವಾದ..!
ಕುಡಿಯೋ ನೀರು ಕೇಳಿದ್ದೇ ತಪ್ಪಾಗಿ ಹೊಯ್ತು..!
 

ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಳು ಅಂತಾರೆ. ಇವತ್ತು ನಾವು ಇದನ್ನ ಪ್ರೂವ್ ಮಾಡುವಂಥಹ ಎರಡು ಸ್ಟೋರಿಗಳನ್ನ ಹೇಳಲಿದ್ದೇವೆ. ಅವರೆಲ್ಲಾ ಒಡಹುಟ್ಟಿದ್ದವರು. ಮೂವರು ಸಹೋದರರು, 7 ಸಹೋದರಿಯರು. ಅಪ್ಪನ ಆಸ್ತಿ(Property) ಇದ್ದಿದ್ದು 2 ಎಕರೆ. ಆದ್ರೆ ಈ ಆಸ್ತಿ ಕೊನೆ ತಮ್ಮನ ಸುಪರ್ದಿಯಲ್ಲಿತ್ತು. ಅಣ್ಣಂದಿರು ಆಸ್ತಿಯಲ್ಲಿ ಪಾಲು ಕೇಳಿದ್ರೆ ತಮ್ಮ ಮಾತ್ರ ಭಾಗ ಮಾಡೋದಕ್ಕೆ ರೆಡಿ ಇರಲೇ ಇಲ್ಲ ನೋಡೋ ವರೆಗೂ ನೋಡಿದ ಅಣ್ಣಂದಿರು ಆವತ್ತು ಒಂದು ನಿರ್ಧಾರ ಮಾಡಿಕೊಂಡೇ ಜಮೀನಿಗೆ ಎಂಟ್ರಿ ಕೊಟ್ಟಿದ್ರು. ಆದ್ರೆ ವೇಳೆ ಅಲ್ಲಿಗೆ ಬಂದ ತಮ್ಮ ಅಣ್ಣಂದಿರಿಂದಲೇ ಕೊಲೆಯಾಗಿ(Murder) ಹೋಗಿದ್ದ. ಆಸ್ತಿ ಭಾಗ ಮಾಡಲಿಲ್ಲ ಅಂತ ತಮ್ಮನನ್ನೇ ಅಣ್ಣಂದಿರು ಹೊಡೆದು ಕೊಂದು ಮುಗಿಸಿದ್ದಾರೆ. ಜಸ್ಟ್ 2 ಎಕೆರೆಗಾಗಿ ಇಲ್ಲಿ ಸಂಬಂಧವನ್ನೇ ಮರೆತುಬಿಟ್ಟಿದ್ದಾರೆ. ಈ ಘಟನೆ ರಾಯಚೂರಿನಲ್ಲಿ(Raichur) ನಡೆದಿದೆ. 

ಅವರಿಬ್ಬರು ಸಂಬಂಧದಲ್ಲಿ ಸಹೋದರರು. ಅಣ್ಣ-ತಮ್ಮಂದಿರ ಮಕ್ಕಳು. ಆದ್ರೆ ಇಬ್ಬರ ಮದ್ಯೆ ಕುಡಿಯುವ ನೀರಿಗಾಗಿ(Drinking Water) ಕಿರಿಕ್ ಆಗಿದೆ. ಆರಂಭದಲ್ಲಿ ದೊಡ್ಡಪ್ಪನ ಮಗ ಅಜ್ಜಿ ಜೊತೆ ಜಗಳ ಮಾಡಿಕೊಂಡಿದ್ದಾನೆ. ಇದೇ ವಿಚಾರಕ್ಕೆ ಕಾಲೇಜಿಗೆ ಹೋಗಿದ್ದ ಚಿಕ್ಕಪ್ಪನ ಮಗ ವಾಪಸ್ ಬಂದು ಅಣ್ಣನ ಬಳಿ ಕೇಳಲು ಹೋಗಿದ್ದಾನೆ. ಅಷ್ಟೇ ,ನನ್ನನ್ನೇ ಪ್ರಶ್ನೆ ಮಾಡ್ತೀಯ ಅಂತ ಸಹೋದರ ಹೊಟ್ಟೆಗೇ ಚಾಕು ನುಗ್ಗಿಸಿಬಿಟ್ಟಿದ್ದಾನೆ. ಕುಡಿಯುವ ಹನಿ‌ ನೀರನ್ನು ಹಿಡಿದುಕೊಳ್ಳುವ ವಿಚಾರಕ್ಕೆ ಸಹೋದರ ಸಂಬಂಧಿಗಳ ಮಧ್ಯೆ ಜಗಳವಾಗಿ(Conflict) ಕೊಲೆಯಲ್ಲಿ ಅಂತ್ಯವಾಗಿದೆ. ಕುಳಿತು ಮಾತಾಡಿಕೊಂಡು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಿತ್ತು. ಆದ್ರೆ ಕೋಪದ ಕೈಗೆ ಬುದ್ಧಿ ಕೊಟ್ಟು ಒಬ್ಬನ ಪ್ರಾಣ ತೆಗೆದು ಜೈಲಿಗೆ ಹೋಗುವ ಪರಿಸ್ಥಿತಿ ತಂದುಕೊಂಡಿದ್ದಾರೆ ಅಂತ ಹೇಳ್ತಾ ಇವತ್ತಿನ ಎಪಿಸೋಡ್ ಮುಗಿಸುತ್ತಿದ್ದೇನೆ.

ಇದನ್ನೂ ವೀಕ್ಷಿಸಿ:  Congress Manifesto: ಕರ್ನಾಟಕ, ತೆಲಂಗಾಣ ಮಾದರಿಯಲ್ಲೇ..ದೇಶಕ್ಕೂ ಪ್ರಣಾಳಿಕೆ: ಯುವ ಜನತೆಗೆ 5,000 ಕೋಟಿ ರೂ. ಸ್ಟಾರ್ಟಪ್ ಫಂಡ್!

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
Read more