ಅಪ್ರಾಪ್ತೆ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ: ಮಗಳ ತಂಟೆಗೆ ಬರಬೇಡ ಎಂದಿದ್ದಕ್ಕೆ ಮರ್ಡರ್‌ !

ಅಪ್ರಾಪ್ತೆ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿ: ಮಗಳ ತಂಟೆಗೆ ಬರಬೇಡ ಎಂದಿದ್ದಕ್ಕೆ ಮರ್ಡರ್‌ !

Published : Sep 03, 2023, 10:47 AM IST

ನನ್ನ ಮಗಳ ತಂಟೆಗೆ ಬರಬೇಡ ಎಂದು ತಂದೆ ಹೇಳಿದ್ದಕ್ಕೆ ಪಾಗಲ್‌ ಪ್ರೇಮಿಯೊಬ್ಬ ಆತನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 

ಬೆಂಗಳೂರು: ಮಗಳ ತಂಟೆಗೆ  ಬರಬೇಡ ಅಂದಿದಕ್ಕೆ ಸಿಲಿಕಾನ್ ಸಿಟಿಯಲ್ಲಿ ಪಾಗಲ್‌ ಪ್ರೇಮಿಯೊಬ್ಬ ಹುಡುಗಿಯ ತಂದೆಯನ್ನೇ ಮರ್ಡರ್(Murder) ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅನ್ವರ್ ಹುಸೇನ್ ಎಂಬಾತನ ಕುತ್ತಿಗೆಗೆ ಚಾಕು ಇರಿದು ಹತ್ಯೆ ಮಾಡಲಾಗಿದೆ. ಝಹೀದ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಶಾಂತಿನಗರದ ನಂಜಪ್ಪ ಸರ್ಕಲ್ ಬಳಿ ಈ ಘಟನೆ ನಡೆದಿದೆ. ಪ್ರೀತಿಸುವಂತೆ 15 ವರ್ಷದ ಅಪ್ರಾಪ್ತೆ(Minor) ಬೆನ್ನ ಹಿಂದೆ ಆರೋಪಿ ಬಿದ್ದಿದ್ದ. ಈ ವಿಚಾರವನ್ನ ತನ್ನ ತಂದೆ ಮೃತ ಅನ್ವರ್ ಹುಸೇನ್‌ಗೆ ಬಾಲಕಿ ತಿಳಿಸಿದ್ದಳು. ಕಳೆದ ಮೂರು ತಿಂಗಳ ಹಿಂದೆ ಆರೋಪಿ ಝಹೀದ್‌ಗೆ ಮೃತ ಅನ್ವರ್ ಬುದ್ಧಿ ಹೇಳಿದ್ದರು. ಶನಿವಾರ ಮತ್ತೆ ಅಪ್ರಾಪ್ತೆಯನ್ನ ಹಿಂಬಾಲಿಸಿ ಪ್ರೀತಿಸುವಂತೆ ಆರೋಪಿ ಪೀಡಿಸಿದ್ದ. ಹಾಗಾಗಿ ಮತ್ತೆ ರಾತ್ರಿ  ಮಗಳ ವಿಚಾರಕ್ಕೆ ಬರಬೇಡ ಎಂದು ಹೇಳಲು ಬಂದಾಗ ಚಾಕು ಇರಿದಿದ್ದಾನೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಹುಡಕಾಟ ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮಾಜಿ ಸಚಿವರೊಬ್ಬರ ಗನ್‌ ಮ್ಯಾನ್‌ನಿಂದ ವಂಚನೆ: 30 ಕೋಟಿಯ ಕಾಮಗಾರಿಗೆ ಹಣ ಕೇಳಿದ ಆರೋಪ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more