10 ಎಕರೆ ಜಮೀನು	ಕೊಲೆಗೆ ಕಾರಣವಾಯ್ತಾ..? ನಾಯ್ಕೋಡಿ VS ಪಾಟೀಲ್ ದ್ವೇಷದ ಕಿಚ್ಚು..!

10 ಎಕರೆ ಜಮೀನು ಕೊಲೆಗೆ ಕಾರಣವಾಯ್ತಾ..? ನಾಯ್ಕೋಡಿ VS ಪಾಟೀಲ್ ದ್ವೇಷದ ಕಿಚ್ಚು..!

Published : Dec 10, 2023, 12:26 PM IST

ನಡುರಸ್ತೆಯಲ್ಲೇ ವಕೀಲನನ್ನ ಕೊಚ್ಚಿ ಕೊಚ್ಚಿ ಕೊಂದರು..!
2 ಕುಟುಂಬದ ನಡುವಿನ ವೈಷಮ್ಯ ಎಂಥದ್ದು  ಗೊತ್ತಾ..?
ಮೂರು ಹೆಣ ಹಾಕಿದಕ್ಕೆ ಜಮೀನನ್ನೇ ಕಬ್ಜ ಮಾಡಿದ್ರು..!

ಆತ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಜಮೀನಿನ ಒಡೆಯ. ಮೇಲಾಗಿ ವೃತ್ತಿಯಲ್ಲಿ ವಕೀಲ(Lawyer). ಆದ್ರೆ ಆವತ್ತು ತನ್ನ ಮನೆಯಿಂದ ಕೋರ್ಟ್ಗೆ ಹೋಗುವಾಗ್ಲೇ ಅವರನ್ನ ಹಂತಕರು ಕೊಚ್ಚಿ ಕೊಚ್ಚಿ ಕೊಲೆ(Murder) ಮಾಡಿಬಿಡ್ತಾರೆ. ಹಾಡಹಗಲಲ್ಲಿ, ನಡುರಸ್ತೆಯಲ್ಲಿ ಆದ ಆ ಕೊಲೆಯನ್ನ ಕಂಡು ಅಲ್ಲಿನ ಜನ ಒಂದು ಕ್ಷಣ ಶಾಕ್ ಆಗಿದ್ರು. ಇನ್ನೂ ವಕೀಲರ ಕೊಲೆ ಕೇಸ್ ಬೆನ್ನುಬಿದ್ದ ಪೊಲೀಸರು(Police) ಕೊಲೆಗಾರರನ್ನ ಘಟಅನೆ ನಡೆದ ಕೆಲವೇ ಗಂಟೆಗಳಲ್ಲಿ ಅರೆಸ್ಟ್ ಮಾಡಿದ್ರು. ನಂತರ ವಿಚಾರಣೆ ಶುರು ಮಾಡಿದ್ರು. ಯಾವಾಗ ಆರೋಪಿಗಳ ವಿಚಾರಣೆ ಮಾಡಿದ್ರೋ ಅಲ್ಲಿ 30 ವರ್ಷದ ಹಿಂದಿನ ದ್ವೇಷದ ಕಥೆ ತೆರೆದುಕೊಂಡಿತ್ತು. ಲೋಡೆಡ್ ಗನ್ ಈರಣ್ಣಗೌಡನ ಜೇಬಿನಲ್ಲಿದೆ ಅನ್ನೋ ಸಣ್ಣ ಸುಳಿವು ಇದ್ದಿದ್ರು ಹಂತಕರು ಅವರನ್ನ ಮಚ್ಚಿನಲ್ಲಿ ಕೊಲ್ಲೋ ಧೈರ್ಯ ಮಾಡುತ್ತಿರಲಿಲ್ಲ. ಆದ್ರೆ ಹಂತಕರು ಮೀಟರ್ ಗಟ್ಟಲೆ ಅಟ್ಟಾಡಿಸಿಕೊಂಡು ಬಂದ್ರೂ ಈರಣ್ಣ ಗನ್ ಅನ್ನ ಯಾಕೆ ಹೊರತಗೆಯಲಿಲ್ಲ ಅನ್ನೋದೇ ಯಕ್ಷಪ್ರಶ್ನೆ. ಅದು ಬರೊಬ್ಬರಿ 30 ವರ್ಷದ ಹಿಂದಿನ ದ್ವೇಷ. ಆಗ ಈರಣ್ಣ ಗೌಡನ ಅಪ್ಪ ಮತ್ತು ಚಿಕ್ಕಪ್ಪಂದಿರು ಸೇರಿ ಎದುರಾಳಿ ನಾಯ್ಕೋಡಿ ಕುಟುಂಬದ ಮೂವರನ್ನ ಕೊಂದು ಮುಗಿಸಿದ್ರು. ಇದೇ ಕೊಲೆ ಕೇಸ್ನಲ್ಲಿ ಈರಣ್ಣಗೌಡ ತಂದೆ ಸೇರಿದಂತೆ ಇಡೀ ಕುಟುಂಬ ಜೈಲು ಸೇರಿತ್ತು.ಆಗ ನಾಯ್ಕೋಡಿ ಕುಟುಂಬ ಈರಣ್ಣಗೌಡ ಕುಟುಂಬದ 10 ಎಕರೆ ಜಮೀನನ್ನ ಕಬ್ಜ ಮಾಡಿಕೊಂಡಿತ್ತು. ಆದ್ರೆ ಯಾವಾಗ ಈರಣ್ಣಗೌಡ ಲಾಯರ್ ಆದ್ನೋ ಕಬ್ಜವಾಗಿದ್ದ ಆಸ್ತಿಯನ್ನ ಮರಳಿ ಪಡೆಯೋಕೆ ನಿರ್ಧರಿಸಿದ್ದ. ಒಂದು ದಶಕದಿಂದ ಕೋರ್ಟ್ನಲ್ಲಿ ತಾನೇ ವಾದ ಮಂಡಿಸುತ್ತಿದ್ದ. ಇನ್ನೇನು ಕೆಲ ಸಮಯದಲ್ಲಿ ಆ ಕೇಸ್ನ ತೀರ್ಪು ಬರಬೇಕಿತ್ತು. ಆದ್ರೆ ತೀರ್ಪು ಬರುವ ಮುಂಚೆಯೇ ಎದುರಾಳಿಗಳು ರಕ್ತದೋಕುಳಿ ಆಡಿದ್ದಾರೆ.

ಇದನ್ನೂ ವೀಕ್ಷಿಸಿ:  ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರ ಸಾವು

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more