10 ಎಕರೆ ಜಮೀನು	ಕೊಲೆಗೆ ಕಾರಣವಾಯ್ತಾ..? ನಾಯ್ಕೋಡಿ VS ಪಾಟೀಲ್ ದ್ವೇಷದ ಕಿಚ್ಚು..!

10 ಎಕರೆ ಜಮೀನು ಕೊಲೆಗೆ ಕಾರಣವಾಯ್ತಾ..? ನಾಯ್ಕೋಡಿ VS ಪಾಟೀಲ್ ದ್ವೇಷದ ಕಿಚ್ಚು..!

Published : Dec 10, 2023, 12:26 PM IST

ನಡುರಸ್ತೆಯಲ್ಲೇ ವಕೀಲನನ್ನ ಕೊಚ್ಚಿ ಕೊಚ್ಚಿ ಕೊಂದರು..!
2 ಕುಟುಂಬದ ನಡುವಿನ ವೈಷಮ್ಯ ಎಂಥದ್ದು  ಗೊತ್ತಾ..?
ಮೂರು ಹೆಣ ಹಾಕಿದಕ್ಕೆ ಜಮೀನನ್ನೇ ಕಬ್ಜ ಮಾಡಿದ್ರು..!

ಆತ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಜಮೀನಿನ ಒಡೆಯ. ಮೇಲಾಗಿ ವೃತ್ತಿಯಲ್ಲಿ ವಕೀಲ(Lawyer). ಆದ್ರೆ ಆವತ್ತು ತನ್ನ ಮನೆಯಿಂದ ಕೋರ್ಟ್ಗೆ ಹೋಗುವಾಗ್ಲೇ ಅವರನ್ನ ಹಂತಕರು ಕೊಚ್ಚಿ ಕೊಚ್ಚಿ ಕೊಲೆ(Murder) ಮಾಡಿಬಿಡ್ತಾರೆ. ಹಾಡಹಗಲಲ್ಲಿ, ನಡುರಸ್ತೆಯಲ್ಲಿ ಆದ ಆ ಕೊಲೆಯನ್ನ ಕಂಡು ಅಲ್ಲಿನ ಜನ ಒಂದು ಕ್ಷಣ ಶಾಕ್ ಆಗಿದ್ರು. ಇನ್ನೂ ವಕೀಲರ ಕೊಲೆ ಕೇಸ್ ಬೆನ್ನುಬಿದ್ದ ಪೊಲೀಸರು(Police) ಕೊಲೆಗಾರರನ್ನ ಘಟಅನೆ ನಡೆದ ಕೆಲವೇ ಗಂಟೆಗಳಲ್ಲಿ ಅರೆಸ್ಟ್ ಮಾಡಿದ್ರು. ನಂತರ ವಿಚಾರಣೆ ಶುರು ಮಾಡಿದ್ರು. ಯಾವಾಗ ಆರೋಪಿಗಳ ವಿಚಾರಣೆ ಮಾಡಿದ್ರೋ ಅಲ್ಲಿ 30 ವರ್ಷದ ಹಿಂದಿನ ದ್ವೇಷದ ಕಥೆ ತೆರೆದುಕೊಂಡಿತ್ತು. ಲೋಡೆಡ್ ಗನ್ ಈರಣ್ಣಗೌಡನ ಜೇಬಿನಲ್ಲಿದೆ ಅನ್ನೋ ಸಣ್ಣ ಸುಳಿವು ಇದ್ದಿದ್ರು ಹಂತಕರು ಅವರನ್ನ ಮಚ್ಚಿನಲ್ಲಿ ಕೊಲ್ಲೋ ಧೈರ್ಯ ಮಾಡುತ್ತಿರಲಿಲ್ಲ. ಆದ್ರೆ ಹಂತಕರು ಮೀಟರ್ ಗಟ್ಟಲೆ ಅಟ್ಟಾಡಿಸಿಕೊಂಡು ಬಂದ್ರೂ ಈರಣ್ಣ ಗನ್ ಅನ್ನ ಯಾಕೆ ಹೊರತಗೆಯಲಿಲ್ಲ ಅನ್ನೋದೇ ಯಕ್ಷಪ್ರಶ್ನೆ. ಅದು ಬರೊಬ್ಬರಿ 30 ವರ್ಷದ ಹಿಂದಿನ ದ್ವೇಷ. ಆಗ ಈರಣ್ಣ ಗೌಡನ ಅಪ್ಪ ಮತ್ತು ಚಿಕ್ಕಪ್ಪಂದಿರು ಸೇರಿ ಎದುರಾಳಿ ನಾಯ್ಕೋಡಿ ಕುಟುಂಬದ ಮೂವರನ್ನ ಕೊಂದು ಮುಗಿಸಿದ್ರು. ಇದೇ ಕೊಲೆ ಕೇಸ್ನಲ್ಲಿ ಈರಣ್ಣಗೌಡ ತಂದೆ ಸೇರಿದಂತೆ ಇಡೀ ಕುಟುಂಬ ಜೈಲು ಸೇರಿತ್ತು.ಆಗ ನಾಯ್ಕೋಡಿ ಕುಟುಂಬ ಈರಣ್ಣಗೌಡ ಕುಟುಂಬದ 10 ಎಕರೆ ಜಮೀನನ್ನ ಕಬ್ಜ ಮಾಡಿಕೊಂಡಿತ್ತು. ಆದ್ರೆ ಯಾವಾಗ ಈರಣ್ಣಗೌಡ ಲಾಯರ್ ಆದ್ನೋ ಕಬ್ಜವಾಗಿದ್ದ ಆಸ್ತಿಯನ್ನ ಮರಳಿ ಪಡೆಯೋಕೆ ನಿರ್ಧರಿಸಿದ್ದ. ಒಂದು ದಶಕದಿಂದ ಕೋರ್ಟ್ನಲ್ಲಿ ತಾನೇ ವಾದ ಮಂಡಿಸುತ್ತಿದ್ದ. ಇನ್ನೇನು ಕೆಲ ಸಮಯದಲ್ಲಿ ಆ ಕೇಸ್ನ ತೀರ್ಪು ಬರಬೇಕಿತ್ತು. ಆದ್ರೆ ತೀರ್ಪು ಬರುವ ಮುಂಚೆಯೇ ಎದುರಾಳಿಗಳು ರಕ್ತದೋಕುಳಿ ಆಡಿದ್ದಾರೆ.

ಇದನ್ನೂ ವೀಕ್ಷಿಸಿ:  ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರ ಸಾವು

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more