ಮೈಸೂರಲ್ಲಿ ಮಗನ ಬೈಕ್‌ ವ್ಹೀಲಿಂಗ್ ಶೋಕಿಗೆ ವೃದ್ಧನ ಬಲಿ: ಪಿಎಸ್‌ಐ ಯಾಸ್ಮೀನ್ ತಾಜ್ ಎತ್ತಂಗಡಿ!

ಮೈಸೂರಲ್ಲಿ ಮಗನ ಬೈಕ್‌ ವ್ಹೀಲಿಂಗ್ ಶೋಕಿಗೆ ವೃದ್ಧನ ಬಲಿ: ಪಿಎಸ್‌ಐ ಯಾಸ್ಮೀನ್ ತಾಜ್ ಎತ್ತಂಗಡಿ!

Published : Sep 17, 2023, 05:27 PM IST

ಮಗನ ಶೋಕಿಗೆ ಕುಮ್ಮಕ್ಕು ನೀಡಿದ ಐಪಿಎಸ್ ಎತ್ತಂಗಡಿ ಮಾಡಲಾಗಿದೆ. ನಂಜನಗೂಡು ಸಂಚಾರ ವಿಭಾಗದ ಪಿಎಸ್‌ಐ ಆಗಿದ್ದ ಯಾಸ್ಮಿನ್ ತಾಜ್ ಅವರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ.

ಮೈಸೂರು (ಸೆ.17):  ಮಗನ ಶೋಕಿಗೆ ಕುಮ್ಮಕ್ಕು ನೀಡಿದ ಐಪಿಎಸ್ ಎತ್ತಂಗಡಿ ಮಾಡಲಾಗಿದೆ. ನಂಜನಗೂಡು ಸಂಚಾರ ವಿಭಾಗದ ಪಿಎಸ್‌ಐ ಆಗಿದ್ದ ಯಾಸ್ಮಿನ್ ತಾಜ್ ಅವರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಇನ್ನು ಯಾಸ್ಮಿನ್ ತಾಜ್ ಅವರ ಪುತ್ರ ಸೈಯದ್ ಐಮಾನ್ ಬೈಕ್‌ ವ್ಹೀಲಿಂಗ್‌ ಶೋಕಿಗೆ ನಿನ್ನೆ ರೈತ ಗುರುಸ್ವಾಮಿ (68) ಸಾವನ್ನಪ್ಪಿದ್ದರು. ಆದರೆ, ಮಹಿಳಾ ಪಿಎಸ್‌ಐ ಪುತ್ರನ ವಿರುದ್ಧ ಈಗಾಗಲೇ ಬೈಕ್‌ ವ್ಹೀಲಿಂಗ್‌ ಮತ್ತು ಬೈಕ್‌ ಕಳ್ಳತನದ ದೂರು ದಾಖಲಾಗಿದ್ದರೂ ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ.

ನಂಜನಗೂಡು ಪಿಎಸ್‌ಐ ಪುತ್ರನ ಬೈಕ್‌ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಬಲಿ, ಅಧಿಕಾರಿ ಅಮಾನತ್ತಿಗೆ ಆಗ್ರಹ

ಇದಕ್ಕಾಗಿ ತಮ್ಮ ಅಧಿಕಾರದ ಪ್ರಭಾವವನ್ನು ಬಳಕೆ ಮಾಡಿದ್ದರು. ಇಷ್ಟಾದ ಮೇಲೂ ಮಗನಿಗೆ ಬುದ್ಧಿ ಹೇಳದೇ ಸಾರ್ವಜನಿಕರ ಮೇಲೆ ಉಡಾಫೆಯ ವರ್ತನೆ ತೋರಿದ್ದರು. ಈಗ ಮಗನ ಪುಂಡಾಟಕ್ಕೆ ಅಮಾಯಕ ವೃದ್ಧ ರೈತ ಬಲಿಯಾಗಿದ್ದಾರೆ. ಅವರ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ದೂರು ದಾಖಲು ಮಾಡಿದಾಗಲೂ, ತನ್ನ ಮಗನ ಓದು ಮತ್ತು ಭವಿಷ್ಯಕ್ಕೆ ಸಮಸ್ಯೆ ಆಗಲಿದೆ ಎಂದು ಕ್ರಮ ಕೈಗೊಳ್ಳದಂತೆ ಒತ್ತಡ ಹೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಇದೆಲ್ಲದರ ಮಾಹಿತಿ ಪಡೆದ ಸರ್ಕಾರ, ಪಿಎಸ್‌ಐ ಯಾಸ್ಮೀನ್‌ ತಾಜ್‌ ಅವರಿಗೆ ವರ್ಗಾವಣೆ ಶಿಕ್ಷೆಯನ್ನು ನೀಡಿದೆ. ನಂಜನಗೂಡು ಸಂಚಾರಿ ವಿಭಾಗದ ಪಿಎಸ್‌ಐ ಹುದ್ದೆಯಿಂದ ಮೈಸೂರು ಜಿಲ್ಲಾ ಅಪರಾಧ ದಾಖಲೆಗಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ, ಇಂದೇ ಡಿಸಿಆರ್‌ಬಿ ಡಿವೈಎಸ್ಪಿ ಬಳಿ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more