ಮೈಸೂರಲ್ಲಿ ಮಗನ ಬೈಕ್‌ ವ್ಹೀಲಿಂಗ್ ಶೋಕಿಗೆ ವೃದ್ಧನ ಬಲಿ: ಪಿಎಸ್‌ಐ ಯಾಸ್ಮೀನ್ ತಾಜ್ ಎತ್ತಂಗಡಿ!

ಮೈಸೂರಲ್ಲಿ ಮಗನ ಬೈಕ್‌ ವ್ಹೀಲಿಂಗ್ ಶೋಕಿಗೆ ವೃದ್ಧನ ಬಲಿ: ಪಿಎಸ್‌ಐ ಯಾಸ್ಮೀನ್ ತಾಜ್ ಎತ್ತಂಗಡಿ!

Published : Sep 17, 2023, 05:27 PM IST

ಮಗನ ಶೋಕಿಗೆ ಕುಮ್ಮಕ್ಕು ನೀಡಿದ ಐಪಿಎಸ್ ಎತ್ತಂಗಡಿ ಮಾಡಲಾಗಿದೆ. ನಂಜನಗೂಡು ಸಂಚಾರ ವಿಭಾಗದ ಪಿಎಸ್‌ಐ ಆಗಿದ್ದ ಯಾಸ್ಮಿನ್ ತಾಜ್ ಅವರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ.

ಮೈಸೂರು (ಸೆ.17):  ಮಗನ ಶೋಕಿಗೆ ಕುಮ್ಮಕ್ಕು ನೀಡಿದ ಐಪಿಎಸ್ ಎತ್ತಂಗಡಿ ಮಾಡಲಾಗಿದೆ. ನಂಜನಗೂಡು ಸಂಚಾರ ವಿಭಾಗದ ಪಿಎಸ್‌ಐ ಆಗಿದ್ದ ಯಾಸ್ಮಿನ್ ತಾಜ್ ಅವರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಇನ್ನು ಯಾಸ್ಮಿನ್ ತಾಜ್ ಅವರ ಪುತ್ರ ಸೈಯದ್ ಐಮಾನ್ ಬೈಕ್‌ ವ್ಹೀಲಿಂಗ್‌ ಶೋಕಿಗೆ ನಿನ್ನೆ ರೈತ ಗುರುಸ್ವಾಮಿ (68) ಸಾವನ್ನಪ್ಪಿದ್ದರು. ಆದರೆ, ಮಹಿಳಾ ಪಿಎಸ್‌ಐ ಪುತ್ರನ ವಿರುದ್ಧ ಈಗಾಗಲೇ ಬೈಕ್‌ ವ್ಹೀಲಿಂಗ್‌ ಮತ್ತು ಬೈಕ್‌ ಕಳ್ಳತನದ ದೂರು ದಾಖಲಾಗಿದ್ದರೂ ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ.

ನಂಜನಗೂಡು ಪಿಎಸ್‌ಐ ಪುತ್ರನ ಬೈಕ್‌ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಬಲಿ, ಅಧಿಕಾರಿ ಅಮಾನತ್ತಿಗೆ ಆಗ್ರಹ

ಇದಕ್ಕಾಗಿ ತಮ್ಮ ಅಧಿಕಾರದ ಪ್ರಭಾವವನ್ನು ಬಳಕೆ ಮಾಡಿದ್ದರು. ಇಷ್ಟಾದ ಮೇಲೂ ಮಗನಿಗೆ ಬುದ್ಧಿ ಹೇಳದೇ ಸಾರ್ವಜನಿಕರ ಮೇಲೆ ಉಡಾಫೆಯ ವರ್ತನೆ ತೋರಿದ್ದರು. ಈಗ ಮಗನ ಪುಂಡಾಟಕ್ಕೆ ಅಮಾಯಕ ವೃದ್ಧ ರೈತ ಬಲಿಯಾಗಿದ್ದಾರೆ. ಅವರ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ದೂರು ದಾಖಲು ಮಾಡಿದಾಗಲೂ, ತನ್ನ ಮಗನ ಓದು ಮತ್ತು ಭವಿಷ್ಯಕ್ಕೆ ಸಮಸ್ಯೆ ಆಗಲಿದೆ ಎಂದು ಕ್ರಮ ಕೈಗೊಳ್ಳದಂತೆ ಒತ್ತಡ ಹೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಇದೆಲ್ಲದರ ಮಾಹಿತಿ ಪಡೆದ ಸರ್ಕಾರ, ಪಿಎಸ್‌ಐ ಯಾಸ್ಮೀನ್‌ ತಾಜ್‌ ಅವರಿಗೆ ವರ್ಗಾವಣೆ ಶಿಕ್ಷೆಯನ್ನು ನೀಡಿದೆ. ನಂಜನಗೂಡು ಸಂಚಾರಿ ವಿಭಾಗದ ಪಿಎಸ್‌ಐ ಹುದ್ದೆಯಿಂದ ಮೈಸೂರು ಜಿಲ್ಲಾ ಅಪರಾಧ ದಾಖಲೆಗಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ, ಇಂದೇ ಡಿಸಿಆರ್‌ಬಿ ಡಿವೈಎಸ್ಪಿ ಬಳಿ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more