ಮೈಸೂರಲ್ಲಿ ಮಗನ ಬೈಕ್‌ ವ್ಹೀಲಿಂಗ್ ಶೋಕಿಗೆ ವೃದ್ಧನ ಬಲಿ: ಪಿಎಸ್‌ಐ ಯಾಸ್ಮೀನ್ ತಾಜ್ ಎತ್ತಂಗಡಿ!

ಮೈಸೂರಲ್ಲಿ ಮಗನ ಬೈಕ್‌ ವ್ಹೀಲಿಂಗ್ ಶೋಕಿಗೆ ವೃದ್ಧನ ಬಲಿ: ಪಿಎಸ್‌ಐ ಯಾಸ್ಮೀನ್ ತಾಜ್ ಎತ್ತಂಗಡಿ!

Published : Sep 17, 2023, 05:27 PM IST

ಮಗನ ಶೋಕಿಗೆ ಕುಮ್ಮಕ್ಕು ನೀಡಿದ ಐಪಿಎಸ್ ಎತ್ತಂಗಡಿ ಮಾಡಲಾಗಿದೆ. ನಂಜನಗೂಡು ಸಂಚಾರ ವಿಭಾಗದ ಪಿಎಸ್‌ಐ ಆಗಿದ್ದ ಯಾಸ್ಮಿನ್ ತಾಜ್ ಅವರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ.

ಮೈಸೂರು (ಸೆ.17):  ಮಗನ ಶೋಕಿಗೆ ಕುಮ್ಮಕ್ಕು ನೀಡಿದ ಐಪಿಎಸ್ ಎತ್ತಂಗಡಿ ಮಾಡಲಾಗಿದೆ. ನಂಜನಗೂಡು ಸಂಚಾರ ವಿಭಾಗದ ಪಿಎಸ್‌ಐ ಆಗಿದ್ದ ಯಾಸ್ಮಿನ್ ತಾಜ್ ಅವರಿಗೆ ವರ್ಗಾವಣೆ ಶಿಕ್ಷೆ ನೀಡಲಾಗಿದೆ. ಇನ್ನು ಯಾಸ್ಮಿನ್ ತಾಜ್ ಅವರ ಪುತ್ರ ಸೈಯದ್ ಐಮಾನ್ ಬೈಕ್‌ ವ್ಹೀಲಿಂಗ್‌ ಶೋಕಿಗೆ ನಿನ್ನೆ ರೈತ ಗುರುಸ್ವಾಮಿ (68) ಸಾವನ್ನಪ್ಪಿದ್ದರು. ಆದರೆ, ಮಹಿಳಾ ಪಿಎಸ್‌ಐ ಪುತ್ರನ ವಿರುದ್ಧ ಈಗಾಗಲೇ ಬೈಕ್‌ ವ್ಹೀಲಿಂಗ್‌ ಮತ್ತು ಬೈಕ್‌ ಕಳ್ಳತನದ ದೂರು ದಾಖಲಾಗಿದ್ದರೂ ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ.

ನಂಜನಗೂಡು ಪಿಎಸ್‌ಐ ಪುತ್ರನ ಬೈಕ್‌ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಬಲಿ, ಅಧಿಕಾರಿ ಅಮಾನತ್ತಿಗೆ ಆಗ್ರಹ

ಇದಕ್ಕಾಗಿ ತಮ್ಮ ಅಧಿಕಾರದ ಪ್ರಭಾವವನ್ನು ಬಳಕೆ ಮಾಡಿದ್ದರು. ಇಷ್ಟಾದ ಮೇಲೂ ಮಗನಿಗೆ ಬುದ್ಧಿ ಹೇಳದೇ ಸಾರ್ವಜನಿಕರ ಮೇಲೆ ಉಡಾಫೆಯ ವರ್ತನೆ ತೋರಿದ್ದರು. ಈಗ ಮಗನ ಪುಂಡಾಟಕ್ಕೆ ಅಮಾಯಕ ವೃದ್ಧ ರೈತ ಬಲಿಯಾಗಿದ್ದಾರೆ. ಅವರ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ದೂರು ದಾಖಲು ಮಾಡಿದಾಗಲೂ, ತನ್ನ ಮಗನ ಓದು ಮತ್ತು ಭವಿಷ್ಯಕ್ಕೆ ಸಮಸ್ಯೆ ಆಗಲಿದೆ ಎಂದು ಕ್ರಮ ಕೈಗೊಳ್ಳದಂತೆ ಒತ್ತಡ ಹೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಇದೆಲ್ಲದರ ಮಾಹಿತಿ ಪಡೆದ ಸರ್ಕಾರ, ಪಿಎಸ್‌ಐ ಯಾಸ್ಮೀನ್‌ ತಾಜ್‌ ಅವರಿಗೆ ವರ್ಗಾವಣೆ ಶಿಕ್ಷೆಯನ್ನು ನೀಡಿದೆ. ನಂಜನಗೂಡು ಸಂಚಾರಿ ವಿಭಾಗದ ಪಿಎಸ್‌ಐ ಹುದ್ದೆಯಿಂದ ಮೈಸೂರು ಜಿಲ್ಲಾ ಅಪರಾಧ ದಾಖಲೆಗಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ, ಇಂದೇ ಡಿಸಿಆರ್‌ಬಿ ಡಿವೈಎಸ್ಪಿ ಬಳಿ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more