ನಂಜನಗೂಡು ಪಿಎಸ್‌ಐ ಪುತ್ರನ ಬೈಕ್‌ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಬಲಿ, ಅಧಿಕಾರಿ ಅಮಾನತ್ತಿಗೆ ಆಗ್ರಹ

ನಂಜನಗೂಡು ಪಿಎಸ್‌ಐ ಪುತ್ರನ ಬೈಕ್‌ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಬಲಿ, ಅಧಿಕಾರಿ ಅಮಾನತ್ತಿಗೆ ಆಗ್ರಹ

Published : Sep 17, 2023, 04:29 PM ISTUpdated : Sep 17, 2023, 04:31 PM IST

ನಂಜನಗೂಡಿನ ಮಹಿಳಾ ಪಿಎಸ್ಐ ಯಾಸ್ಮಿನ್‌ ತಾಜ್‌ ಅವರ ಪುತ್ರನ ಪುಂಡಾಟಕ್ಕೆ ಅಮಾಯಕ ವೃದ್ಧವ್ಯಕ್ತಿ ಬಲಿಯಾಗಿದ್ದಾರೆ. ಕೂಡಲೇ ಪಿಎಸ್‌ಐ ಅಮಾನತ್ತುಗೊಳಿಸಿ ಬಂಧಿಸುವಂತೆ ಮೃತ ವ್ಯಕ್ತಿಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೈಸೂರು (ಸೆ.17): ನಂಜನಗೂಡಿನ ಮಹಿಳಾ ಪಿಎಸ್ಐ ಪುತ್ರನ ಪುಂಡಾಟಕ್ಕೆ ಅಮಾಯಕ ವೃದ್ಧವ್ಯಕ್ತಿ ಬಲಿಯಾಗಿದ್ದಾರೆ. ಈಗಾಗಲೇ ಬೈಕ್‌ ಕಳ್ಳತನ ಹಾಗೂ ವ್ಹೀಲಿಂಗ್‌ ಮಾಡಿದ ಆರೋಪದಡಿ ಜೈಲಿಗೆ ಕಳಿಸಿ ಬುದ್ಧಿ ಕಲಿಸುವಂತೆ ಎಫ್‌ಐಆರ್‌ ದಾಖಲಿಸಿದರೂ ಪಿಎಸ್‌ಐ ಮಗನೆಂಬ ಕಾರಣಕ್ಕೆ ಉಡಾಫೆ ಮಾಡಲಾಗಿತ್ತು. ಆದರೆ, ಈಗ ಪತ್ತದೇ ಬೈಕ್‌ ವ್ಹೀಲಿಂಗ್‌ ಮಾಡಿ ವೃದ್ಧನೊಬ್ಬನ ಸಾವಿಗೆ ಕಾರಣವಾದರೂ ಪುಂಡನನ್ನು ಬಂಧಿಸಿಲ್ಲ. ಹೀಗಾಗಿ, ನಮ್ಮ ತಂದೆಯ ಸಾವಿಗೆ ಕಾರಣವಾದ ಆರೋಪಿ ಸೇರಿದಂತೆ, ಮಗನ ವಿಚಾರಕ್ಕೆ ಉಡಾಫೆಯ ವರ್ತನೆ ತೋರುತ್ತಿರುವ ನಂಜನಗೂಡಿನ ಮಹಿಳಾ ಪಿಎಸ್‌ಐ ಯಾಸ್ಮಿನ್‌ ತಾಜ್‌ ಅವರನ್ನೂ ಬಂಧಿಸಿ ಜೈಲಿಗಟ್ಟಬೇಕು ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಇನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರದ ಬಳಿ, ಮೃತ ವೃದ್ಧನ ಶವವನ್ನಿಟ್ಟು ಪ್ರತಿಭಟನೆ ಆರಂಭಿಸಿದ್ದಾರೆ. ನಾವು ಯಾವುದೇ ಕಾರಣಕ್ಕೂ ಶವ ತೆಗೆದುಕೊಂಡು‌ ಹೋಗಲ್ಲ. ಪಿಎಸ್ಐ ಯಾಸ್ಮಿನ್ ತಾಜ್ ಅವರನ್ನೂ ಅಮಾನತ್ತು ಮಾಡಿ. ಜೊತೆಗೆ, ಯಾಸ್ಮಿತ್ ತಾಜ್ ಅವರನ್ನೂ‌ ಬಂಧಿಸಬೇಕು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more