ನಂಜನಗೂಡು ಪಿಎಸ್‌ಐ ಪುತ್ರನ ಬೈಕ್‌ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಬಲಿ, ಅಧಿಕಾರಿ ಅಮಾನತ್ತಿಗೆ ಆಗ್ರಹ

ನಂಜನಗೂಡು ಪಿಎಸ್‌ಐ ಪುತ್ರನ ಬೈಕ್‌ ವ್ಹೀಲಿಂಗ್ ಹುಚ್ಚಾಟಕ್ಕೆ ವೃದ್ಧ ಬಲಿ, ಅಧಿಕಾರಿ ಅಮಾನತ್ತಿಗೆ ಆಗ್ರಹ

Published : Sep 17, 2023, 04:29 PM ISTUpdated : Sep 17, 2023, 04:31 PM IST

ನಂಜನಗೂಡಿನ ಮಹಿಳಾ ಪಿಎಸ್ಐ ಯಾಸ್ಮಿನ್‌ ತಾಜ್‌ ಅವರ ಪುತ್ರನ ಪುಂಡಾಟಕ್ಕೆ ಅಮಾಯಕ ವೃದ್ಧವ್ಯಕ್ತಿ ಬಲಿಯಾಗಿದ್ದಾರೆ. ಕೂಡಲೇ ಪಿಎಸ್‌ಐ ಅಮಾನತ್ತುಗೊಳಿಸಿ ಬಂಧಿಸುವಂತೆ ಮೃತ ವ್ಯಕ್ತಿಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೈಸೂರು (ಸೆ.17): ನಂಜನಗೂಡಿನ ಮಹಿಳಾ ಪಿಎಸ್ಐ ಪುತ್ರನ ಪುಂಡಾಟಕ್ಕೆ ಅಮಾಯಕ ವೃದ್ಧವ್ಯಕ್ತಿ ಬಲಿಯಾಗಿದ್ದಾರೆ. ಈಗಾಗಲೇ ಬೈಕ್‌ ಕಳ್ಳತನ ಹಾಗೂ ವ್ಹೀಲಿಂಗ್‌ ಮಾಡಿದ ಆರೋಪದಡಿ ಜೈಲಿಗೆ ಕಳಿಸಿ ಬುದ್ಧಿ ಕಲಿಸುವಂತೆ ಎಫ್‌ಐಆರ್‌ ದಾಖಲಿಸಿದರೂ ಪಿಎಸ್‌ಐ ಮಗನೆಂಬ ಕಾರಣಕ್ಕೆ ಉಡಾಫೆ ಮಾಡಲಾಗಿತ್ತು. ಆದರೆ, ಈಗ ಪತ್ತದೇ ಬೈಕ್‌ ವ್ಹೀಲಿಂಗ್‌ ಮಾಡಿ ವೃದ್ಧನೊಬ್ಬನ ಸಾವಿಗೆ ಕಾರಣವಾದರೂ ಪುಂಡನನ್ನು ಬಂಧಿಸಿಲ್ಲ. ಹೀಗಾಗಿ, ನಮ್ಮ ತಂದೆಯ ಸಾವಿಗೆ ಕಾರಣವಾದ ಆರೋಪಿ ಸೇರಿದಂತೆ, ಮಗನ ವಿಚಾರಕ್ಕೆ ಉಡಾಫೆಯ ವರ್ತನೆ ತೋರುತ್ತಿರುವ ನಂಜನಗೂಡಿನ ಮಹಿಳಾ ಪಿಎಸ್‌ಐ ಯಾಸ್ಮಿನ್‌ ತಾಜ್‌ ಅವರನ್ನೂ ಬಂಧಿಸಿ ಜೈಲಿಗಟ್ಟಬೇಕು ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಇನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರದ ಬಳಿ, ಮೃತ ವೃದ್ಧನ ಶವವನ್ನಿಟ್ಟು ಪ್ರತಿಭಟನೆ ಆರಂಭಿಸಿದ್ದಾರೆ. ನಾವು ಯಾವುದೇ ಕಾರಣಕ್ಕೂ ಶವ ತೆಗೆದುಕೊಂಡು‌ ಹೋಗಲ್ಲ. ಪಿಎಸ್ಐ ಯಾಸ್ಮಿನ್ ತಾಜ್ ಅವರನ್ನೂ ಅಮಾನತ್ತು ಮಾಡಿ. ಜೊತೆಗೆ, ಯಾಸ್ಮಿತ್ ತಾಜ್ ಅವರನ್ನೂ‌ ಬಂಧಿಸಬೇಕು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more