Drug Case: ಮಗಳನ್ನು ರಕ್ಷಿಸುವಂತೆ VHP ಗೆ ಕ್ರಿಶ್ಚಿಯನ್ ಮಹಿಳೆ ದೂರು, ಆರೋಪಿ ಸೆರೆ

Drug Case: ಮಗಳನ್ನು ರಕ್ಷಿಸುವಂತೆ VHP ಗೆ ಕ್ರಿಶ್ಚಿಯನ್ ಮಹಿಳೆ ದೂರು, ಆರೋಪಿ ಸೆರೆ

Published : Dec 27, 2021, 04:07 PM ISTUpdated : Dec 27, 2021, 05:11 PM IST

ಡ್ರಗ್ (Drugs) ದಂಧೆಯಿಂದ ಮಗಳನ್ನು ರಕ್ಷಿಸಲು ತಾಯಿಯೊಬ್ಬರು ವಿಶ್ವ ಹಿಂದೂ ಪರಿಷತ್ ಗೆ  (VHP) ಪತ್ರ (Letter) ಬರೆದಿರುವ ಘಟನೆ ಮಂಗಳೂರಿನಲ್ಲಿ (Mangaluru)  ನಡೆದಿದೆ. 

ಬೆಂಗಳೂರು (ಡಿ. 27):  ಡ್ರಗ್ (Drugs) ದಂಧೆಯಿಂದ ಮಗಳನ್ನು ರಕ್ಷಿಸಲು ತಾಯಿಯೊಬ್ಬರು ವಿಶ್ವ ಹಿಂದೂ ಪರಿಷತ್ ಗೆ  (VHP) ಪತ್ರ (Letter) ಬರೆದಿರುವ ಘಟನೆ ಮಂಗಳೂರಿನಲ್ಲಿ (Mangaluru)  ನಡೆದಿದೆ.  ಮಂಗಳೂರಿನ ಕ್ರೈಸ್ತ ಮಹಿಳೆ ವಿಶ್ವ ಹಿಂದೂ ಪರಿಷತ್ ಮುಖಂಡರ ಮೊರೆ ಹೋಗಿದ್ದು ತಮ್ಮ ಮಗಳನ್ನು  ಡ್ರಗ್ಸ್ ಕೂಪದಿಂದ ಕರೆತರಲು ಕೋರಿದ್ದಾರೆ.  ಮಂಗಳೂರಿನ ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬ ಮಹಿಳೆ ಪತ್ರ ಬರೆದಿದ್ದು,  ಸುರತ್ಕಲ್ ನಿವಾಸಿ ಶರೀಫ್ ಸಿದ್ದಿಕಿ ಎಂಬಾತನ ಡ್ರಗ್ ದಂಧೆಯಲ್ಲಿ ತಮ್ಮ ಮಗಳು  ಸಿಲುಕಿದ್ದಾಳೆ.  ಕಳೆದ ಮೂರು ವರ್ಷಗಳಿಂದ ಡ್ರಗ್ ದಾಸಳಾಗಿರುವ ಮಗಳನ್ನು  ಸರಿಪಡಿಸಿ ತನಗೆ ನೀಡಬೇಕೆಂದು  ಪತ್ರದಲ್ಲಿ ತಿಳಿಸಿದ್ದಾರೆ. 

ಮಗಳಿಗೆ ನಿರಂತರ ಲೈಂಗಿಕ ದೌರ್ಜನ್ಯ (Sexual Harassment) , ಡ್ರಗ್ ಪೂರೈಕೆ ಮಾಡುತ್ತಿದ್ದು ಮಗಳು ಡ್ರಗ್ (Drug) ಚಟಕ್ಕೆ ಬಿದ್ದು ಮಾನಸಿಕವಾಗಿ ಕುಗ್ಗಿ ಅಸ್ವಸ್ಥತೆ ‌ಒಳಗಾಗಿದ್ದಾಳೆ.  ಸಿದ್ದಿಕಿ ಮತ್ತು ಅವನ ಸ್ನೇಹಿತರಿಂದ ನಿರಂತರ ಡ್ರಗ್ ಪೂರೈಕೆ ಮತ್ತು ದೌರ್ಜನ್ಯ ನಡೆಯುತ್ತಿದ್ದು  ಪೊಲೀಸ್ ಠಾಣೆ (Police Station) ಮತ್ತು ಸಮುದಾಯದ ಗುರುಗಳಿಗೆ ದೂರು ಕೊಟ್ಟರೂ ನ್ಯಾಯ ಸಿಕ್ಕಿಲ್ಲ.   ನನ್ನ ಮಗಳನ್ನ ರಕ್ಷಣೆ ಮಾಡಿ ಎಂದು ವಿಎಚ್ ಪಿಗೆ ಪತ್ರ ಬರೆದು ಮಹಿಳೆ ದಂಧೆಯಿಂದ ಮುಕ್ತಿ ಕೋರಿದ್ದಾರೆ. ಇದೀಗ ಸಿದ್ದಿಕಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಬಿಗ್ ಇಂಪ್ಯಾಕ್ಟ್ ಇದು. 

 

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more