ಹೋಟೆಲ್ ಉದ್ಯಮಿಯ 8 ಬ್ಯಾಂಕ್ ಅಕೌಂಟ್‌ಗಳ ಹಣಕ್ಕೆ ಕನ್ನ !

ಹೋಟೆಲ್ ಉದ್ಯಮಿಯ 8 ಬ್ಯಾಂಕ್ ಅಕೌಂಟ್‌ಗಳ ಹಣಕ್ಕೆ ಕನ್ನ !

Published : Sep 04, 2023, 09:40 AM IST

ಟೆಕ್ನಾಲಜಿ ಬೆಳೆದಂತೆಲ್ಲ ಆನ್‌ ಲೈನ್‌ ವಂಚನೆಗಳು ಜಾಸ್ತಿಯಾಗ್ತಿವೆ. ದಿನಕ್ಕೊಂದು ವೇಶದಲ್ಲಿ ಆನ್‌ ಲೈನ್‌ ವಂಚಕರು ಜನರಿಗೆ ಮಕ್ಮಲ್‌ ಟೋಪಿ ಹಾಕ್ತಿದ್ದಾರೆ. ವಿಜಯಪುರ ಜಿಲ್ಲೆಯ ಹೊಟೇಲ್‌ ಉದ್ಯಮಿಗೆ ಅಕೌಂಟ್‌ ಬ್ಲಾಕ್‌ ಆಗಿದೆ ಸರಿಮಾಡಿ ಕೊಡ್ತೀವಿ ಎಂದು ನಂಬಿಸಿ ಬರೊಬ್ಬರಿ 8 ಅಕೌಂಟಗಳಿಂದ ಹಣ ಲಪಟಾಯಿಸಿದ್ದಾರೆ. 
 

ವಿಜಯಪುರ ನಗರದ ಹೊಟೇಲ್‌ ಉದ್ಯಮಿ ಬಸಯ್ಯ ವಿಭೂತಿ ಮಠ ಸೈಬರ್ ವಂಚಕರ ಜಾಲಕ್ಕೆ ಬಿದ್ದ ಇವರು ಈಗ ಹಣ ಕಳೆದುಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸೈಬರ್‌ ವಂಚಕರು ಬಸಯ್ಯಗೆ ಖತರ್ನಾಕ್ ಕತೆ ಕಟ್ಟಿ ಮಕ್ಮಲ್ ಟೋಪಿ ಹಾಕಿದ್ದಾರೆ. ಕೆನರಾ ಬ್ಯಾಂಕ್‌ ಅಕೌಂಟ್‌(Account) ಬ್ಲಾಕ್‌ ಆಗಿದೆ ಕೆವೈಸಿ ಮಾಡಿಸಿ ಎಂದು ವಂಚಕರಿಂದ ಕರೆ ಬಂದಿದೆ. ಇದನ್ನ ನಂಬಿದ ಬಸಯ್ಯ ಬ್ಯಾಂಕ್‌ ಅಕೌಂಟ್‌ ನಂಬರ್‌, ಓಟಿಪಿ ಹಾಗೂ ಎಟಿಎಂ ನಂಬರ್‌ ಶೇರ್‌ ಮಾಡಿದ್ದಾರೆ. ಬಳಿಕ ವಂಚಕರು(Fraud) ಅಕೌಂಟ್‌ನಲ್ಲಿದ್ದ ಹಣವನ್ನೆಲ್ಲ ದೋಚಿದ್ದಾರೆ. ಕೆವೈಸಿ ಮಾಡಿಸದಿದ್ದರೆ ನಿಮ್ಮ ಎಲ್ಲ ಬ್ಯಾಂಕ್‌ ಅಕೌಂಟ್‌ ಗಳು ಬಂದ್‌ ಆಗುತ್ತೆ ಎಂದು ಭಯಬೀಳಿಸಿದ್ದಾರೆ. ಮೊದಲೇ ಹೊಟೇಲ್‌ ಉದ್ಯಮಿಯಾಗಿರೋ(Hotel Businessman) ಬಸಯ್ಯ ಅಕೌಂಟ್‌ಗಳೇ ಬಂದಾದ್ರೆ ಮುಂದೇನು ಅಂತಾ ವಂಚಕರು ಹೇಳಿದಂತೆ ಕೇಳಿದ್ದಾರೆ. ಅಲ್ಲದೆ ತಮ್ಮ ಬಳಿಯಿದ್ದ ಎಲ್ಲ ಬ್ಯಾಂಕ್‌ ಅಕೌಂಟ್‌ ನಂಬರ್‌, ಒಟಿಪಿ ಸಹಿತ ವಂಚಕರೊಂದಿಗೆ ಹಂಚಿಕೊಂಡಿದ್ದಾರೆ. ಒಟ್ಟು 8 ಅಕೌಂಟ್‌ಗಳಿಂದ ಬರೋಬ್ಬರಿ 90 ಸಾವಿರ ಹಣ ಲಪಟಾಯಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಟಾಲಿವುಡ್ 'ಡಾರ್ಲಿಂಗ್' ಫ್ಯಾನ್ಸ್‌ಗೆ ಬಿಗ್ ಶಾಕ್: ಸೆಪ್ಟೆಂಬರ್ 28ಕ್ಕೆ ಬಿಡುಗಡೆ ಆಗ್ತಿಲ್ಲ ಸಲಾರ್..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more