ಹೋಟೆಲ್ ಉದ್ಯಮಿಯ 8 ಬ್ಯಾಂಕ್ ಅಕೌಂಟ್‌ಗಳ ಹಣಕ್ಕೆ ಕನ್ನ !

ಹೋಟೆಲ್ ಉದ್ಯಮಿಯ 8 ಬ್ಯಾಂಕ್ ಅಕೌಂಟ್‌ಗಳ ಹಣಕ್ಕೆ ಕನ್ನ !

Published : Sep 04, 2023, 09:40 AM IST

ಟೆಕ್ನಾಲಜಿ ಬೆಳೆದಂತೆಲ್ಲ ಆನ್‌ ಲೈನ್‌ ವಂಚನೆಗಳು ಜಾಸ್ತಿಯಾಗ್ತಿವೆ. ದಿನಕ್ಕೊಂದು ವೇಶದಲ್ಲಿ ಆನ್‌ ಲೈನ್‌ ವಂಚಕರು ಜನರಿಗೆ ಮಕ್ಮಲ್‌ ಟೋಪಿ ಹಾಕ್ತಿದ್ದಾರೆ. ವಿಜಯಪುರ ಜಿಲ್ಲೆಯ ಹೊಟೇಲ್‌ ಉದ್ಯಮಿಗೆ ಅಕೌಂಟ್‌ ಬ್ಲಾಕ್‌ ಆಗಿದೆ ಸರಿಮಾಡಿ ಕೊಡ್ತೀವಿ ಎಂದು ನಂಬಿಸಿ ಬರೊಬ್ಬರಿ 8 ಅಕೌಂಟಗಳಿಂದ ಹಣ ಲಪಟಾಯಿಸಿದ್ದಾರೆ. 
 

ವಿಜಯಪುರ ನಗರದ ಹೊಟೇಲ್‌ ಉದ್ಯಮಿ ಬಸಯ್ಯ ವಿಭೂತಿ ಮಠ ಸೈಬರ್ ವಂಚಕರ ಜಾಲಕ್ಕೆ ಬಿದ್ದ ಇವರು ಈಗ ಹಣ ಕಳೆದುಕೊಂಡು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸೈಬರ್‌ ವಂಚಕರು ಬಸಯ್ಯಗೆ ಖತರ್ನಾಕ್ ಕತೆ ಕಟ್ಟಿ ಮಕ್ಮಲ್ ಟೋಪಿ ಹಾಕಿದ್ದಾರೆ. ಕೆನರಾ ಬ್ಯಾಂಕ್‌ ಅಕೌಂಟ್‌(Account) ಬ್ಲಾಕ್‌ ಆಗಿದೆ ಕೆವೈಸಿ ಮಾಡಿಸಿ ಎಂದು ವಂಚಕರಿಂದ ಕರೆ ಬಂದಿದೆ. ಇದನ್ನ ನಂಬಿದ ಬಸಯ್ಯ ಬ್ಯಾಂಕ್‌ ಅಕೌಂಟ್‌ ನಂಬರ್‌, ಓಟಿಪಿ ಹಾಗೂ ಎಟಿಎಂ ನಂಬರ್‌ ಶೇರ್‌ ಮಾಡಿದ್ದಾರೆ. ಬಳಿಕ ವಂಚಕರು(Fraud) ಅಕೌಂಟ್‌ನಲ್ಲಿದ್ದ ಹಣವನ್ನೆಲ್ಲ ದೋಚಿದ್ದಾರೆ. ಕೆವೈಸಿ ಮಾಡಿಸದಿದ್ದರೆ ನಿಮ್ಮ ಎಲ್ಲ ಬ್ಯಾಂಕ್‌ ಅಕೌಂಟ್‌ ಗಳು ಬಂದ್‌ ಆಗುತ್ತೆ ಎಂದು ಭಯಬೀಳಿಸಿದ್ದಾರೆ. ಮೊದಲೇ ಹೊಟೇಲ್‌ ಉದ್ಯಮಿಯಾಗಿರೋ(Hotel Businessman) ಬಸಯ್ಯ ಅಕೌಂಟ್‌ಗಳೇ ಬಂದಾದ್ರೆ ಮುಂದೇನು ಅಂತಾ ವಂಚಕರು ಹೇಳಿದಂತೆ ಕೇಳಿದ್ದಾರೆ. ಅಲ್ಲದೆ ತಮ್ಮ ಬಳಿಯಿದ್ದ ಎಲ್ಲ ಬ್ಯಾಂಕ್‌ ಅಕೌಂಟ್‌ ನಂಬರ್‌, ಒಟಿಪಿ ಸಹಿತ ವಂಚಕರೊಂದಿಗೆ ಹಂಚಿಕೊಂಡಿದ್ದಾರೆ. ಒಟ್ಟು 8 ಅಕೌಂಟ್‌ಗಳಿಂದ ಬರೋಬ್ಬರಿ 90 ಸಾವಿರ ಹಣ ಲಪಟಾಯಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಟಾಲಿವುಡ್ 'ಡಾರ್ಲಿಂಗ್' ಫ್ಯಾನ್ಸ್‌ಗೆ ಬಿಗ್ ಶಾಕ್: ಸೆಪ್ಟೆಂಬರ್ 28ಕ್ಕೆ ಬಿಡುಗಡೆ ಆಗ್ತಿಲ್ಲ ಸಲಾರ್..!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more