ಕಾನ್‌ಸ್ಟೇಬಲ್‌ ಶಿವರಾಜ್‌ ಆತ್ಮಹತ್ಯೆ ಕೇಸ್‌: ಮೃತದೇಹ ಪತ್ತೆಗೆ ಪೊಲೀಸರಿಂದ 250 ಸಿಸಿಟಿವಿ ತಲಾಶ್‌!

ಕಾನ್‌ಸ್ಟೇಬಲ್‌ ಶಿವರಾಜ್‌ ಆತ್ಮಹತ್ಯೆ ಕೇಸ್‌: ಮೃತದೇಹ ಪತ್ತೆಗೆ ಪೊಲೀಸರಿಂದ 250 ಸಿಸಿಟಿವಿ ತಲಾಶ್‌!

Published : Jul 02, 2024, 11:47 AM IST

ಶಿವರಾಜ್‌ದು ಕೊಲೆಯಲ್ಲ ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಬಂದ ಪೊಲೀಸರು
ವಿವಿ ಆವರಣದೊಳಗೆ ಒಬ್ಬೊಂಟಿಯಾಗಿ ಬಂದಿದ್ದ ಕಾನ್‌ಸ್ಟೇಬಲ್ ಶಿವರಾಜ್ 
ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿರುವ ಕಾನ್‌ಸ್ಟೇಬಲ್ ಶಿವರಾಜ್

ಮಡಿವಾಳ ಪೊಲೀಸ್ ಕಾನ್‌ಸ್ಟೇಬಲ್ ಶಿವರಾಜ್(Constable Shivaraj) ಆತ್ಮಹತ್ಯೆ ಪ್ರಕರಣಕ್ಕೆ(Suicide case) ಸಂಬಂಧಿಸಿದಂತೆ ಅವರ ಮೃತದೇಹ ಪತ್ತೆ ಮಾಡಿದ್ದೇ ಒಂದು ರೋಚಕ ಕಥೆಯಾಗಿದೆ. ಶಿವರಾಜ್ ಮೃತದೇಹ(Dead Body) ಪತ್ತೆಗೆ ಬರೋಬ್ಬರಿ 250 ಸಿಸಿಟಿವಿ ತಲಾಶ್ ನಡೆಸಲಾಗಿದೆ. ಮಡಿವಾಳ ಪೊಲೀಸರಿಂದಲೇ ಶಿವರಾಜ್ ಮೃತದೇಹಕ್ಕೆ  ಹುಡುಕಾಟ ನಡೆಸಿದ್ದು, ಸುಬ್ರಮಣ್ಯಪುರದಿಂದ ಜ್ಞಾನಭಾರತಿ ಮೆಟ್ರೊ ಸ್ಟೇಷನ್‌ವರೆಗೂ ಪರಿಶೀಲನೆ ನಡೆಸಲಾಗಿದೆ. ಐದು ದಿನಗಳಿಂದ ನಿರಂತರವಾಗಿ ಪೊಲೀಸರು(Police) ಹುಡುಕಾಟ ನಡೆಸಿದ್ದರು. ಮೆಟ್ರೊ ಸ್ಟೇಷನ್ ಪಾರ್ಕಿಂಗ್‌ನಲ್ಲಿ ಬೈಕ್ ನಿಲ್ಲಿಸಿದ್ದ ಶಿವರಾಜ್, ಬಳಿಕ ನೀರಿನ ಬಾಟಲಿ ಹಿಡಿದು ಬೆಂಗಳೂರು ವಿವಿ ಒಳಗೆ ನಡೆದು ಬಂದಿದ್ದರು. ಶಿವರಾಜ್ ವಿವಿ ಒಳಗೆ ನಡೆದು ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ವಿವಿ ಆವರಣದಲ್ಲಿ ಹುಡುಕಾಡಿದ್ದ ಮಡಿವಾಳ ಪೊಲೀಸರು, ವಿವಿ ಆವರಣದಲ್ಲಿ ಪಾಳು ಬಿದ್ದ ಬಾವಿಯಲ್ಲಿ ಶಿವರಾಜ್ ಮೃತದೇಹ ಪತ್ತೆಯಾಗಿದೆ. ಜ್ಞಾನಭಾರತಿ ಪೊಲೀಸರಿಗೆ ಮಾಹಿತಿ ನೀಡಿದ್ದ ಮಡಿವಾಳ ಪೊಲೀಸರು. ಮೃತದೇಹ ಹೊರತೆಗೆಸಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಮೃತದೇಹ ಹೊರತೆಗೆದಾಗ ಬೆನ್ನಿಗೆ ಕಲ್ಲು ಕಟ್ಟಿರೋದು ಬೆಳಕಿಗೆ ಬಂದಿದೆ. ಶಿವರಾಜ್ ಸಾವು ಕೊಲೆ ಎಂಬುದಾಗಿ ಅನುಮಾನ ವ್ಯಕ್ತವಾಗಿತ್ತು. ಆದ್ರೆ ಸಿಸಿಟಿವಿಯಲ್ಲಿ ಒಬ್ಬನೇ ಬಂದಿರೋದ್ರಿಂದ ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ. 

ಇದನ್ನೂ ವೀಕ್ಷಿಸಿ:  15 ನೂತನ ಪುಸ್ತಕಗಳ ಲೋಕಾರ್ಪಣೆ: ಖ್ಯಾತ ಬರಹಗಾರ ಜೋಗಿಯಿಂದ ಪುಸ್ತಕ ರಿಲೀಸ್‌

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more