ಕಾನ್‌ಸ್ಟೇಬಲ್‌ ಶಿವರಾಜ್‌ ಆತ್ಮಹತ್ಯೆ ಕೇಸ್‌: ಮೃತದೇಹ ಪತ್ತೆಗೆ ಪೊಲೀಸರಿಂದ 250 ಸಿಸಿಟಿವಿ ತಲಾಶ್‌!

ಕಾನ್‌ಸ್ಟೇಬಲ್‌ ಶಿವರಾಜ್‌ ಆತ್ಮಹತ್ಯೆ ಕೇಸ್‌: ಮೃತದೇಹ ಪತ್ತೆಗೆ ಪೊಲೀಸರಿಂದ 250 ಸಿಸಿಟಿವಿ ತಲಾಶ್‌!

Published : Jul 02, 2024, 11:47 AM IST

ಶಿವರಾಜ್‌ದು ಕೊಲೆಯಲ್ಲ ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಬಂದ ಪೊಲೀಸರು
ವಿವಿ ಆವರಣದೊಳಗೆ ಒಬ್ಬೊಂಟಿಯಾಗಿ ಬಂದಿದ್ದ ಕಾನ್‌ಸ್ಟೇಬಲ್ ಶಿವರಾಜ್ 
ಬೆನ್ನಿಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿರುವ ಕಾನ್‌ಸ್ಟೇಬಲ್ ಶಿವರಾಜ್

ಮಡಿವಾಳ ಪೊಲೀಸ್ ಕಾನ್‌ಸ್ಟೇಬಲ್ ಶಿವರಾಜ್(Constable Shivaraj) ಆತ್ಮಹತ್ಯೆ ಪ್ರಕರಣಕ್ಕೆ(Suicide case) ಸಂಬಂಧಿಸಿದಂತೆ ಅವರ ಮೃತದೇಹ ಪತ್ತೆ ಮಾಡಿದ್ದೇ ಒಂದು ರೋಚಕ ಕಥೆಯಾಗಿದೆ. ಶಿವರಾಜ್ ಮೃತದೇಹ(Dead Body) ಪತ್ತೆಗೆ ಬರೋಬ್ಬರಿ 250 ಸಿಸಿಟಿವಿ ತಲಾಶ್ ನಡೆಸಲಾಗಿದೆ. ಮಡಿವಾಳ ಪೊಲೀಸರಿಂದಲೇ ಶಿವರಾಜ್ ಮೃತದೇಹಕ್ಕೆ  ಹುಡುಕಾಟ ನಡೆಸಿದ್ದು, ಸುಬ್ರಮಣ್ಯಪುರದಿಂದ ಜ್ಞಾನಭಾರತಿ ಮೆಟ್ರೊ ಸ್ಟೇಷನ್‌ವರೆಗೂ ಪರಿಶೀಲನೆ ನಡೆಸಲಾಗಿದೆ. ಐದು ದಿನಗಳಿಂದ ನಿರಂತರವಾಗಿ ಪೊಲೀಸರು(Police) ಹುಡುಕಾಟ ನಡೆಸಿದ್ದರು. ಮೆಟ್ರೊ ಸ್ಟೇಷನ್ ಪಾರ್ಕಿಂಗ್‌ನಲ್ಲಿ ಬೈಕ್ ನಿಲ್ಲಿಸಿದ್ದ ಶಿವರಾಜ್, ಬಳಿಕ ನೀರಿನ ಬಾಟಲಿ ಹಿಡಿದು ಬೆಂಗಳೂರು ವಿವಿ ಒಳಗೆ ನಡೆದು ಬಂದಿದ್ದರು. ಶಿವರಾಜ್ ವಿವಿ ಒಳಗೆ ನಡೆದು ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ವಿವಿ ಆವರಣದಲ್ಲಿ ಹುಡುಕಾಡಿದ್ದ ಮಡಿವಾಳ ಪೊಲೀಸರು, ವಿವಿ ಆವರಣದಲ್ಲಿ ಪಾಳು ಬಿದ್ದ ಬಾವಿಯಲ್ಲಿ ಶಿವರಾಜ್ ಮೃತದೇಹ ಪತ್ತೆಯಾಗಿದೆ. ಜ್ಞಾನಭಾರತಿ ಪೊಲೀಸರಿಗೆ ಮಾಹಿತಿ ನೀಡಿದ್ದ ಮಡಿವಾಳ ಪೊಲೀಸರು. ಮೃತದೇಹ ಹೊರತೆಗೆಸಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಮೃತದೇಹ ಹೊರತೆಗೆದಾಗ ಬೆನ್ನಿಗೆ ಕಲ್ಲು ಕಟ್ಟಿರೋದು ಬೆಳಕಿಗೆ ಬಂದಿದೆ. ಶಿವರಾಜ್ ಸಾವು ಕೊಲೆ ಎಂಬುದಾಗಿ ಅನುಮಾನ ವ್ಯಕ್ತವಾಗಿತ್ತು. ಆದ್ರೆ ಸಿಸಿಟಿವಿಯಲ್ಲಿ ಒಬ್ಬನೇ ಬಂದಿರೋದ್ರಿಂದ ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ. 

ಇದನ್ನೂ ವೀಕ್ಷಿಸಿ:  15 ನೂತನ ಪುಸ್ತಕಗಳ ಲೋಕಾರ್ಪಣೆ: ಖ್ಯಾತ ಬರಹಗಾರ ಜೋಗಿಯಿಂದ ಪುಸ್ತಕ ರಿಲೀಸ್‌

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more