ಡಿಜೆ ಹಳ್ಳಿ ಗಲಭೆ ಹೊಣೆಯನ್ನು ಪೊಲೀಸರ ತಲೆಗೆ ಕಟ್ಟಿದ SDPI

Aug 12, 2020, 10:21 PM IST

ಬೆಂಗಳೂರು, (ಆ.12):  ಫೇಸ್‌ಬುಕ್‌ನಲ್ಲಿ ಹಾಕಲಾದ ವಿವಾದಿತ ಪೋಸ್ಟ್‌ಗೆ ಸಂಬಂಧಪಟ್ಟಂತೆ ಪುಲಿಕೇಶಿ ನಗರ ರಣರಂಗವಾಗಿದೆ. ಡಿ.ಜಿ.ಹಳ್ಳಿ ಪೊಲೀಸ್‌ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಬಲಗೊಳ್ಳುತ್ತಿದೆ ಒಂದು ಗುಂಪು, ಈಗಲೇ ಎಚ್ಚೆತ್ತುಕೊಳ್ಳದಿದ್ರೆ ಕೈಮೀರುತ್ತೆ ಪರಿಸ್ಥಿತಿ

ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ಸಂಭವಿಸಿದ ಇಡೀ ದಾಂಧಲೆಯ ಹೊಣೆಯನ್ನು ಪೊಲೀಸರೇ ಕಾರಣ ಎಂದು ಎಸ್‌ಡಿಪಿ ಹೇಳುತ್ತಿದೆ.