ಸುರತ್ಕಲ್ ನೈತಿಕ ಪೊಲೀಸ್‌ಗಿರಿ ಆರೋಪಿಗಳು ಕೆಲವೇ ಗಂಟೆಯಲ್ಲಿ ರಿಲೀಸ್!

ಸುರತ್ಕಲ್ ನೈತಿಕ ಪೊಲೀಸ್‌ಗಿರಿ ಆರೋಪಿಗಳು ಕೆಲವೇ ಗಂಟೆಯಲ್ಲಿ ರಿಲೀಸ್!

Published : Sep 28, 2021, 05:31 PM IST

* ಮಂಗಳೂರಿನ ಸುರತ್ಕಲ್ ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ

* ಪೊಲೀಸ್ ಅಧಿಕಾರಿ ಸಮ್ಮುಖದಲ್ಲೇ ಗೂಂಡಾಗಿರಿ ನಡೆದ್ರೂ ಮೃಧು ಧೋರಣೆ ತಳೆದ್ರಾ ಮಂಗಳೂರು ಪೊಲೀಸರು?

* ಮಂಗಳೂರಿನ ನೈತಿಕ ಪೊಲೀಸ್ ಗೂಂಡಾಗಳ ಬಗ್ಗೆ ಪೊಲೀಸರ ಸಾಫ್ಟ್ ಕಾರ್ನರ್

* ಬಂಧಿತ ಐವರು ಆರೋಪಿಗಳು ಠಾಣಾ ಜಾಮೀನಿನಲ್ಲಿ ಬಿಡುಗಡೆ

ಮಂಗಳೂರು(ಸೆ. 28)  ಮಂಗಳೂರಿನ (Mangaluru) ಸುರತ್ಕಲ್ ನಲ್ಲಿ ನೈತಿಕ ಪೊಲೀಸ್ ಗಿರಿ(Moral policing) ಪ್ರಕರಣಕ್ಕೆ ಸಂಬಂದಿಸಿ ಒಂದಷ್ಟು ಪ್ರಶ್ನೆಗಳು ಎದ್ದಿವೆ ಪೊಲೀಸ್ ಅಧಿಕಾರಿ ಸಮ್ಮುಖದಲ್ಲೇ ಗೂಂಡಾಗಿರಿ ನಡೆದ್ರೂ ಮೃಧು ಧೋರಣೆ ತಾಳಿದ್ರಾ ಪೊಲೀಸರು ಎಂಬ ಪ್ರಶ್ನೆ  ಎದ್ದಿದೆ. ಮಂಗಳೂರಿನ ಪೊಲೀಸರು ಸಾಫ್ಟ್ ಕಾರ್ನರ್ ತೋರಿದ್ರಾ?

ಬಂಧಿತ ಐವರು ಆರೋಪಿಗಳು ಠಾಣಾ ಜಾಮೀನಿನಲ್ಲಿ ಬಿಡುಗಡೆಯಾಗಿದ್ದಾರೆ. ಬಂಧನವಾದ ಕೆಲವೇ ಗಂಟೆಗಳಲ್ಲಿ ಆರೋಪಗಳನ್ನು ಬಂಧಮುಕ್ತಗೊಳಿಸಲಾಗಿದೆ. ಆರೋಪಿಗಳಾದ ಪ್ರೀತಂ ಶೆಟ್ಟಿ, ಅರ್ಶಿತ್, ಶ್ರೀನಿವಾಸ, ರಾಕೇಶ್, ಅಭಿಷೇಕ್ ಬಿಡುಗಡೆಯಾಗಿದ್ದಾರೆ. ಐಪಿಸಿ 341, 323, 504ರಡಿ ಪ್ರಕರಣ ದಾಖಲಿಸಿ ಠಾಣಾ ಜಾಮೀನಿನಡಿ ಬಿಡುಗಡೆ ಮಾಡಲಾಗಿದೆ.

ಮಂಗಳೂರಿನಲ್ಲಿ ಇರೋದು ತಾಲೀಬಾನಿ ಸರ್ಕಾರವಾ?

ನೈತಿಕ ಪೊಲೀಸ್ ಗಿರಿ ವಿಡಿಯೋ ಸಾಕ್ಷ್ಯ ಇದ್ದರೂ ದುರ್ಬಲ ಸೆಕ್ಷನ್ ನಡಿ ಕೇಸು ದಾಖಲು? ಮಾಡಿದ್ದು ಏಕೆ ಎಂಬ ಪ್ರಶ್ನೆ ಎದ್ದಿದೆ. ಐವರು ಆರೋಪಿಗಳು ಹಿಂದೂ ಪರ ಸಂಘಟನೆ ಕಾರ್ಯಕರ್ತರಾಗಿದ್ದಾರೆ. ದೇರಳಕಟ್ಟೆ ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಕೇರಳದ ಕೊಲ್ಲಂ ನಿವಾಸಿ ಸವಿಯೋ.ಟಿ.ಆಲ್ಫೋನ್ಸಾ ದೂರಿನಡಿ ಪ್ರಕರಣ ದಾಖಲಾಗಿತ್ತು ಪೊಲೀಸ್ ಅಧಿಕಾರಿ ಅಂಗಲಾಚಿದರೂ ವಿದ್ಯಾರ್ಥಿಗಳಿದ್ದ ವಾಹನದ ಮೇಲೆ ದಾಳಿ ನಡೆದಿತ್ತು.

ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ ಗೇಟ್ ಬಳಿ ನೈತಿಕ ಪೊಲೀಸಗಿರಿ ನಡೆದ ಪ್ರಕರಣ ಉಡುಪಿಯ ಮಲ್ಪೆ ಬೀಚ್ ಗೆ ತೆರಳಿ ವಾಪಾಸ್ ಆಗ್ತಿದ್ದ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳು ಮುಗಿಬಿದ್ದಿದ್ದರು. ಅನ್ಯಕೋಮಿನ ವಿದ್ಯಾರ್ಥಿಗಳು ಅನ್ನೋ ಮಾಹಿತಿ ಹಿನ್ನೆಲೆ ಹಿಂದೂ ಕಾರ್ಯಕರ್ತರು ದಾಳಿ ನಡೆಸಿದ್ದರು ಎನ್ನಲಾಗಿದೆ. ಸಿವಿಲ್ ಡ್ರೆಸ್ ನಲ್ಲಿದ್ದ ಪೊಲೀಸ್ ಅಂಗಲಾಚಿದರೂ ಕೇಳದೇ ದಾಳಿ ಮಾಡಿದ್ದರು. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!