ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ತನಿಖೆ ದಾರಿ ತಪ್ಪಿದೆಯಾ? ಎಸ್‌ಐಟಿ ಅಧಿಕಾರಿಗಳು ಯಾಕೆ ಹೀಗೆ ಮಾಡ್ತಿದ್ದಾರೆ?

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ತನಿಖೆ ದಾರಿ ತಪ್ಪಿದೆಯಾ? ಎಸ್‌ಐಟಿ ಅಧಿಕಾರಿಗಳು ಯಾಕೆ ಹೀಗೆ ಮಾಡ್ತಿದ್ದಾರೆ?

Published : May 04, 2024, 05:00 PM IST

ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ಕೆ.ಆರ್ ನಗರದಲ್ಲಿ ದಾಖಲಾದ ಕೇಸ್‌ನಲ್ಲಿ ರೇವಣ್ಣ ಆರೋಪಿ ನಂ.1 ಆಗಿದ್ದಾರೆ. ಬೆಂಗಳೂರಿನಲ್ಲೇ ಇದ್ದರೂ ಎಸ್ಐಟಿ ಮುಂದೆ ರೇವಣ್ಣ ಹಾಜರಾಗುತ್ತಿಲ್ಲ ಎನ್ನಲಾಗಿದೆ. 

ಪ್ರಜ್ವಲ್ ರೇವಣ್ಣ (Prajwal Revanna) ಅವರು ಭಾಗಿಯಾಗಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯಕ್ಕೆ (Sexual assault) ಸಂಬಂಧ ಪಟ್ಟ ಪೆನ್‌ಡ್ರೈವ್‌ (Pen drive) ಕೇಸ್‌ನ ತನಿಖೆ ದಾರಿ ತಪ್ಪಿದೆಯಾ ಎನ್ನುವ ಪ್ರಶ್ನೆ ಕಾಡತೊಡಗಿದೆ. ಎಸ್ಐಟಿ ಅಧಿಕಾರಿಗಳ ತನಿಖೆ ಮೇಲೆ ಹಲವು ಅನುಮಾನ ಉಂಟಾಗಿದ್ದು, ಎಸ್ಐಟಿ ಮೇಲೆ ಒತ್ತಡ ಹಾಕಲಾಗುತ್ತಿದೆಯಾ ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಕೆಲವು ಘಟನೆಗಳು ಇದಕ್ಕೆ ನಿದರ್ಶನ ಎಂಬಂತೆ ಇವೆ. ಅತ್ಯಾಚಾರ ಸಂತ್ರಸ್ತೆ ಕಿಡ್ನಾಪ್ ಆಗಿದ್ದಾರೆ ಎನ್ನಲಾಗಿದೆ. ಅಲ್ಲದೆ ಕಿಡ್ನಾಪ್ ಕೇಸ್‌ನಲ್ಲಿ(Kidnapping case) 2ನೇ ಆರೋಪಿಯನ್ನು ಬಂಧನ ಮಾಡಲಾಗಿದೆಯಾದರೂ ಆರೋಪಿ ನಂ.1 ಹೆಚ್‌ ಡಿ ರೇವಣ್ಣರನ್ನು (HD Revanna) ಮಾತ್ರ ಈವರೆಗೂ ಬಂಧಿಸಿಲ್ಲ ಯಾಕೆ ಎನ್ನುವ ಅನುಮಾನ ಕಾಡತೊಡಗಿದೆ. 
 
ಕೆ.ಆರ್ ನಗರದಲ್ಲಿ ದಾಖಲಾದ ಕೇಸ್‌ನಲ್ಲಿ ರೇವಣ್ಣ ಆರೋಪಿ ನಂ.1 ಆಗಿದ್ದಾರೆ. ಬೆಂಗಳೂರಿನಲ್ಲೇ ಇದ್ದರೂ ಎಸ್ಐಟಿ ಮುಂದೆ ರೇವಣ್ಣ ಹಾಜರಾಗುತ್ತಿಲ್ಲ ಎನ್ನಲಾಗಿದೆ. ಇದರ ಜೊತೆಗೆ ಕಿಡ್ನಾಪ್ ಮಾಡಿದವ ಅರೆಸ್ಟ್ ಆಗಿದ್ದು, ಮಾಡಿಸಿದ ಆರೋಪಿ ಅರೆಸ್ಟ್ ಆಗಿಲ್ಲ ಅನ್ನೋದು ಗೊಂದಲಕ್ಕೆ ಕಾರಣವಾಗಿದೆ. ಬಂಧನವಾಗಿರುವ ಆರೋಪಿ ಭವಾನಿ ರೇವಣ್ಣ (Bhavani Revanna) ಸಂಬಂಧಿ ಸತೀಶ್ ಬಾಬು. ಈ ನಡುವೆ ರೇವಣ್ಣ ಅವರು ವಿಚಾರಣೆಗೂ ಬರದೇ ಜಾಮೀನಿಗೆ ಅರ್ಜಿ ಸಲ್ಲಿಕೆ ಸಹ ಮಾಡಿದ್ದಾರೆ. 

ಇದರ ಜೊತೆಗೆ ಎಲ್ಲಾ ಕಡೆ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್‌ನ(Prajwal Revanna Sex scandal) 3ನೇ ಸಂತ್ರಸ್ತೆ ಎಲ್ಲಿ ಎನ್ನುವ ಪ್ರಶ್ನೆ ಹರಿದಾಡುತ್ತಿದ್ದು, ಸಂತ್ರಸ್ತೆ ಮಗ ಕೆ.ಆರ್ ನಗರ ಪೊಲೀಸರಿಗೆ ಅಪಹರಣದ  ಸಂಬಂಧ ದೂರು ದಾಖಲು ಮಾಡಿದ್ದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ. ಅಪಹರಣ ಆಗಿ 5 ದಿನ ಕಳೆದರೂ ಮಹಿಳೆ ಪತ್ತೆಯಾಗಿಲ್ಲ. ಅದಾಗ್ಯೂ ಆರೋಪಿ ಸತೀಶ್ ಬಾಬು  ಸಹ ಆಕೆ ಎಲ್ಲಿದ್ದಾರೆ ಅನ್ನೋದನ್ನು ಅಧಿಕಾರಿಗಳಿಗೆ ತಿಳಿಸಿಲ್ಲವಂತೆ.

ಇದನ್ನೂ ವೀಕ್ಷಿಸಿ:  ಸಂತ್ರಸ್ತೆ ಕಿಡ್ಯ್ನಾಪ್ ಕೇಸ್‌ನಲ್ಲಿ ಅರೆಸ್ಟ್ ಆಗ್ತಾರಾ ರೇವಣ್ಣ? ಹಾಸನದಿಂದ ಮೈಸೂರಿಗೂ ವ್ಯಾಪಿಸಿದ ಪ್ರಜ್ವಲ್ ಪ್ರಹಸನ!

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more