ಪ್ರವೀಣ್ ಕೊಲೆ ಪ್ರಕರಣ: ತನಿಖೆ ಮತ್ತಷ್ಟು ಚುರುಕು, ದೊಡ್ಡ ದೊಡ್ಡ ಕುಳಗಳಿಗೆ ಎನ್‌ಐಎ ಖೆಡ್ಡಾ!

ಪ್ರವೀಣ್ ಕೊಲೆ ಪ್ರಕರಣ: ತನಿಖೆ ಮತ್ತಷ್ಟು ಚುರುಕು, ದೊಡ್ಡ ದೊಡ್ಡ ಕುಳಗಳಿಗೆ ಎನ್‌ಐಎ ಖೆಡ್ಡಾ!

Published : Aug 12, 2022, 10:07 AM IST

ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.  ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಎನ್‌ಐಎ, ದೊಡ್ಡ ದೊಡ್ಡ ಕುಳಗಳಿಗೆ ಖೆಡ್ಡಾ ತೋಡಿದೆ
 

ಬೆಂಗಳೂರು (ಆ.12): ಹಿಂದೂ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ತನ್ನ ತನಿಖೆಯನ್ನು ಇನ್ನಷ್ಟು ಚುರುಕು ಮಾಡಿದ್ದು, ರಾಜ್ಯ ಮತ್ತು ಜಿಲ್ಲಾ ಮಟ್ಟದ ಕೆಲವವರ ಮೇಲೆ ಎನ್‌ಐಎ ಕೆಂಗಣ್ಣು ಬಿಟ್ಟಿದೆ. ಪ್ರವೀಣ್‌ ಹತ್ಯೆ ಹಿಂದೆ ದೊಡ್ಡ ಕೈಗಳಿರುವ ಬಗ್ಗೆ ಸಾಕ್ಷಿ ಸಂಗ್ರಹ ಮಾಡಲಾಗುತ್ತಿದೆ.

ಪ್ರವೀಣ್‌ ಹಂತಕರಿಗೆ ಹಣ ಎಲ್ಲಿಂದ ಬಂತು ಎನ್ನುವ ಮಾಹಿತಿಯನ್ನು ಎನ್‌ಐಎ  ಕಲೆಹಾಕುತ್ತಿದೆ. ದೊಡ್ಡ ದೊಡ್ಡ ಕುಳಗಳನ್ನು ಖೆಡ್ಡಾಗೆ ಕೆಡವೋದಕ್ಕೆ ಸಜ್ಜಾಗಿದೆ. ಈಗ ಸಿಕ್ಕಿರೋದು ಪ್ರವೀಣ್‌ ಹತ್ಯೆ ಮಾಡಿದ್ದ ನೇರ ಆರೋಪಿಗಳು. ಆದರೆ, ಇವರಿಗೆ ಬೆಂಬಲ ನೀಡಿದ ದೊಡ್ಡ ದೊಡ್ಡ ಕುಳಗಳ ಮೇಲೆ ಎನ್‌ಐಎ ಕಣ್ಣಿಟ್ಟಿದೆ. ಎಸ್‌ಡಿಪಿಐ ಹಾಗೂ ಪಿಎಫ್‌ಐನ ನಾಯಕರ ಮೇಲೆ ಎನ್‌ಐಎ ಅನುಮಾನ ಆರಂಭವಾಗಿದ್ದು, ಈ ಹತ್ಯೆಗೂ ಹಾಗೂ ಅವರಿಗೂ ಇರುವ ಲಿಂಕ್‌ನ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಜಂಟಿ ಆಕ್ಷನ್‌ ಟೀಮ್‌ ರಚನೆ, ವಿಧಾನಸಭೆ ಚುನಾವಣೆಗೂ ಮುನ್ನ ಪಿಎಫ್‌ಐ ಬ್ಯಾನ್‌?

ಕರ್ನಾಟಕ ಪೊಲೀಸರ ಕೆಲಸ ಮುಗಿಯುತ್ತಿದ್ದಂತೆ, ಎನ್‌ಐಎ ಕೆಲಸ ಆರಂಭವಾಗಿದೆ. ಪ್ರವೀಣ್‌ ಹತ್ಯೆಯಾದ ಮೂರೇ ದಿನಕ್ಕೆ ಬೆಳ್ಳಾರೆಗೆ ಎನ್‌ಐಎ ಪ್ರವೇಶ ಪಡೆದಿತ್ತು. ರಾಜ್ಯ ಪೊಲೀಸರ ಮಾಹಿತಿಯ ಜೊತೆಗೆ ಸ್ವತಂತ್ರ ತನಿಖೆಯನ್ನೂ ನಡೆಸಿದ್ದು, ದೊಡ್ಡ ದೊಡ್ಡ ನಾಯಕರ ಲಿಂಕ್‌ಅನ್ನು ಪರಿಶೀಲಿಸಲು ಆರಂಭಿಸಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more