ಗೋ ರಕ್ಷಣೆ ಮಾಡ್ತೀನಿ ಅಂತ ಹೆಣ ಬೀಳಿಸಿದನಾ ಪುನೀತ್ ಕೆರೆಹಳ್ಳಿ? ರಾಜಸ್ಥಾನದಲ್ಲಿ ಸಿಕ್ಕಿಬಿದ್ದ ಕಥೆ ಗೊತ್ತಾ..?

ಗೋ ರಕ್ಷಣೆ ಮಾಡ್ತೀನಿ ಅಂತ ಹೆಣ ಬೀಳಿಸಿದನಾ ಪುನೀತ್ ಕೆರೆಹಳ್ಳಿ? ರಾಜಸ್ಥಾನದಲ್ಲಿ ಸಿಕ್ಕಿಬಿದ್ದ ಕಥೆ ಗೊತ್ತಾ..?

Published : Apr 06, 2023, 06:56 PM ISTUpdated : Apr 06, 2023, 06:57 PM IST

ಕನಕಪುರದಲ್ಲಿ ಗೋರಕ್ಷಣೆ ಹೆಸರಿನಲ್ಲಿ..!
ದನದ ವ್ಯಾಪಾರಿಯನ್ನ ಕೊಂದಿತಾ ಪುನೀತ್ ಗ್ಯಾಂಗ್..?
ರಾಜಸ್ಥಾನದಲ್ಲಿ ತಗ್ಲಾಕಿಕೊಂಡ ಪುನೀತ್ ಗ್ಯಾಂಗ್..!

ನಾನು ಹಿಂದೂ ಕಾರ್ಯಕರ್ತ.. ಗೋರಕ್ಷಕ.. ಅಂತ ಅವನೊಬ್ಬ ಹೆಳಿಕೊಂಡು ತಿರುಗಾಡುತ್ತಿದ್ದ.. ಪ್ರತೀ ದಿನ ಸೋಷಿಯಲ್ ಮಿಡಿಯಾದಲ್ಲಿ ಲೈವ್ ಬರೋದು.. ನಾನು ಹಿಂದೂ ಕಾರ್ಯಕರ್ತ.. ಗೋ ರಕ್ಷಕ ಅಂತ ಹೇಳಿಕೊಂಡು ಸುಖಾಸುಮ್ಮನೆ ಟಾರ್ಚರ್ ಕೊಡ್ತಿದ್ದ.. ಅವನೇ ಪುನೀತ್ ಕೇರೆಹಳ್ಳಿ..  

ಫೇಸ್ಬುಕ್ನಲ್ಲೇ ಆರ್ಭಟಿಸುತ್ತಿದ್ದ ಈ ಡೋಂಗಿ ಗೋರಕ್ಷಕ.. ಅವತ್ತು ಏನಾಯ್ತೋ ಏನೋ ಫೀಲ್ಡ್‌ಗೆ ಇಳಿದುಬಿಟ್ಟಿದ್ದ. ಫೇಸ್ಬುಕ್ ಲೈವ್ನಲ್ಲೇ ಹಸುಗಳನ್ನ ಸಾಗಿಸುತ್ತಿದ್ದ ಕ್ಯಾಂಟರ್ನ ಹಿಡಿದುಬಿಟ್ಟಿದ್ದ.. ಲೈವ್ನಲ್ಲೇ ಫುಲ್ ಪೋಸ್ ಕೊಟ್ಟಿದ್ದ.. ಆದ್ರೆ ಇವನ ಬ್ಯಾಡ್ ಲಕ್.. ಈತ ರೈಡ್ ಮಾಡಿದ ಕ್ಯಾಂಟರ್ನಲ್ಲಿದ್ದ ಒಬ್ಬ ವ್ಯಕ್ತಿ ಮೃತಪಟ್ಟ.. ಅಷ್ಟೇ.. ಈ ವಿಷ್ಯ ಗೊತ್ತಾಗ್ತಿದ್ದಂತೆ ಆಸಾಮಿ ಎಸ್ಕೇಪ್... ಆದ್ರೆ ಪೊಲೀಸರು ಸುಮ್ಮನೆ ಬಿಡ್ತಾರೆ. ತಲೆತಪ್ಪಿಸಿಕೊಂಡು ಊರೂರು ತಿರುಗುತ್ತಿದ್ದ ಸೋಷಿಯಲ್ ಮಿಡಿಯಾ ಹೀರೋನನ್ನ ಪೊಲೀಸರು ಎತ್ತಾಕೊಂಡು ಬಂದಿದ್ದಾರೆ.. ಹೀಗೆ ಗೋರಕ್ಷಣೆ ಮಾಡ್ತೀನಿ ಅಂತ ಹೋಗಿ ಒಬ್ಬನ ಹೆಣ ಹಾಕಿದ ಡೋಗಿ ಗೋ ರಕ್ಷಕನ ಕಥೆಯೇ ಇವತ್ತಿನ ಎಫ್.ಐ.ಆರ್..

ಮಂಡ್ಯದಿಂದ ಬರ್ತಿದ್ದ ವಾಹನವನ್ನ ಅಡ್ಡಗಟ್ಟಿ ಅದರಲ್ಲಿದ್ದ ಗೋವುಗಳನ್ನ ರಕ್ಷಣೆ ಮಾಡಿ ಇದೇ ಪುನೀತ್ ಕೇರೆಹಳ್ಳಿ ಆ್ಯಂಡ್ ಗ್ಯಾಂಗ್ ಅವತ್ತು ಫೇಸ್ಬುಕ್ನಲ್ಲಿ ಲೈವ್ ಮಾಡಿ ಬಿಲ್ಡ್ ಅಪ್ ಕೊಟ್ಟಿತ್ತು.. ಸಾತನೂರು ಪೊಲೀಸರು ಇವರಿಗೆ ಶಹಬಾಸ್ ಅಂತ ಹೇಳಿ ಅವನ ಕೈನಲ್ಲೇ ಒಂದು ಕಂಪ್ಲೆಂಟ್ ದಾಖಲಸಿಕೊಂಡು ಅವರನ್ನ ಕಳಹುಹಿಸಿದ್ದರು. ಆದ್ರೆ ಕಹಾನಿ ಮೇ ಟ್ವಿಸ್ಟ್ ಎಂಬಂತೆ ಅವತ್ತು ರಾತ್ರಿ ಕಳೆದು ಬೆಳಗಾಗುವಷ್ಟರಲ್ಲೇ ಇದೇ ಠಾಣೆಗೆ ಒಂದು ಕಾಲ್ ಬಂದಿತ್ತು.. ಪುನೀತ್ ಆ್ಯಂಡ್ ಗ್ಯಾಂಗ್ ರೈಡ್ ಮಾಡಿದ ಜಾಗದಲ್ಲೇ ಒಂದು ಡೆಡ್ ಬಾಡಿ ಸಿಕ್ಕಿತ್ತು. ಸದ್ಯ ಪೊಲೀಸರು ಪುನೀತ್ ಆ್ಯಂಡ್ ಗ್ಯಾಂಗ್ನ ಬಂಧಿಸಿ ರಾಜಸ್ಥಾನದ ಕೋರ್ಟ್ಗೆ ಹಾಜರುಪಡಿಸಿದ್ದಾರೆ. ಇನ್ನೆರಡು ದಿನದಲ್ಲಿ ರಾಮನಗರಕ್ಕೆ ಕರೆದುಕೊಂಡು ಬರ್ತಾರೆ.. ಅಷ್ಟರಲ್ಲಿ ಅವತ್ತು ಮೃತನಾದವನ ಪೋಸ್ಟ್ ಮಾರ್ಟಮ್ ರಿಪೋರ್ಟ್ ಕೂಡ ಬರುತ್ತೆ.. ಆಗ ಈ ಕೇಸ್ ಒಂದು ಹಂತಕ್ಕೆ ತಲುಪುತ್ತದೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more