Kodagu Crime: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡ್ತಿರುವ ದರೋಡೆಕೋರರು..!

Kodagu Crime: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡ್ತಿರುವ ದರೋಡೆಕೋರರು..!

Suvarna News   | Asianet News
Published : Feb 16, 2022, 01:04 PM IST

*  ಮಹಿಳೆಯರನ್ನು ಕಟ್ಟಿ ಹಾಕಿ ಚಿನ್ನಾಭರಣ, ನಗದು ದರೋಡೆ
*  ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲು
*  ರಕ್ಷಣೆ ಕೊಡಿ ಎಂದು ಗ್ರಾಮಸ್ಥರಿಂದ ಪೊಲೀಸ್ ಇಲಾಖೆಗೆ ಮನವಿ 
 

ಕೊಡಗು(ಫೆ.16):  ಕೊಡಗು ಜಿಲ್ಲೆಯಲ್ಲಿ ಮಹಿಳೆಯರು ವಾಸ ಮಾಡುವ ಒಂಟಿ ಮನೆಗಳನ್ನು ದರೋಡೆಕೋರರು ಟಾರ್ಗೆಟ್ ಮಾಡುತ್ತಿದ್ದಾರೆ. ಇದೀಗ ಮತ್ತೊಂದು ಬೆಚ್ಚಿ ಬೀಳುವ ಘಟನೆ ನಡದಿದ್ದು, ಸಹೋದರಿಯರನ್ನು ಕಟ್ಟಿ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ. 

ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಇಬ್ಬರು ಸಹೋದರಿಯರಾದ ಜಾನಕ್ಕಿ ಹಾಗೂ ಅಮ್ಮಕ್ಕಿ ವಾಸಮಾಡುತ್ತಿದ್ದ ಮನೆಗೆ ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಒಳ ಬಂದ ಕಳ್ಳರು ಇಬ್ಬರನ್ನೂ ಕಟ್ಟಿಹಾಕಿ ಹಣ ಚಿನ್ನಾಭರಣಗಳನ್ನು ದೋಚಿದ್ದಾರೆ. ಎರಡೂವರೆ ಲಕ್ಷ ನಗದು ಹಾಗೂ ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯ ಮೂಲೆ ಮೂಲೆಯನ್ನು ತಡಕಾಡಿದ ದುಷ್ಕರ್ಮಿಗಳು ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಇನ್ನತರ ವಸ್ತುಗಳನ್ನು ತೆಗೆದುಕೊಂಡು ಎಸ್ಕೇಪ್ ಆಗಿದ್ದಾರೆ. ಬೆಳಗ್ಗಿನ ವೇಳೆಗೆ ಇಬ್ಬರು ಮಹಿಳೆಯರು ಕೈಕಾಲಿಗೆ ಕಟ್ಟಿದ್ದನ್ನು ಬಿಡಿಸಿಕೊಂಡು‌ ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗಿದೆ.

ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

ಇನ್ನೂ ಈ ಮಹಿಳೆಯರು ನಮ್ಮ ಜೀವಕ್ಕ ಏನು ಮಾಡಬೇಡಿ. ಎಲ್ಲಾ ಹಣ, ಚಿನ್ನಾಭರಣ ತೆಗೆದುಕೊಂಡು ಹೋಗಿ ಎಂದು ಬೇಡಿಕೊಂಡ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ದುಷ್ಕರ್ಮಿಗಳು ಮನೆಯಲ್ಲಿದ್ದ ಮದ್ಯ ಸೇವನೆ ಮಾಡಿ ಟಿವಿ ವೀಕ್ಷಣೆ ಮಾಡಿದ್ದಾರೆ. ಇವರಿಬ್ಬರು ನಿವೃತ್ತ ನ್ಯಾಯಾಧೀಶರಾದ ಬೋಪಯ್ಯ ಅವರ ಸಹೋದರಿಯರಾಗಿದ್ದಾರೆ. ಬೋಪಯ್ಯ ಅವರು ಬೆಂಗಳೂರಿನಲ್ಲಿ ‌ನೆಲಸಿದ್ದು ಸಹೋದರಿಯರು ತೋಟ‌ ನೋಡಿಕೊಂಡು ಈ ಮನೆಯಲ್ಲಿ ವಾಸವಾಗಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯಲ್ಲಿ ಸ್ಥಳೀಯರ ಕೈವಾಡ ವಿರಬಹುದು. ಈ ಹಿಂದೆ ಇಂತಹ ಘಟನೆ ನಡೆದಿದ್ದು ದರೋಡೆಕೋರರನ್ನು ಇನ್ನೂ ಬಂಧಿಸಲಾಗಿಲ್ಲ. ಆದ್ದರಿಂದ ನಮಗೆ ರಕ್ಷಣೆ ಕೊಡಿ ಎಂದು ಗ್ರಾಮಸ್ಥರು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more