Kodagu Crime: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡ್ತಿರುವ ದರೋಡೆಕೋರರು..!

Kodagu Crime: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡ್ತಿರುವ ದರೋಡೆಕೋರರು..!

Published : Feb 16, 2022, 01:04 PM IST

*  ಮಹಿಳೆಯರನ್ನು ಕಟ್ಟಿ ಹಾಕಿ ಚಿನ್ನಾಭರಣ, ನಗದು ದರೋಡೆ
*  ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲು
*  ರಕ್ಷಣೆ ಕೊಡಿ ಎಂದು ಗ್ರಾಮಸ್ಥರಿಂದ ಪೊಲೀಸ್ ಇಲಾಖೆಗೆ ಮನವಿ 
 

ಕೊಡಗು(ಫೆ.16):  ಕೊಡಗು ಜಿಲ್ಲೆಯಲ್ಲಿ ಮಹಿಳೆಯರು ವಾಸ ಮಾಡುವ ಒಂಟಿ ಮನೆಗಳನ್ನು ದರೋಡೆಕೋರರು ಟಾರ್ಗೆಟ್ ಮಾಡುತ್ತಿದ್ದಾರೆ. ಇದೀಗ ಮತ್ತೊಂದು ಬೆಚ್ಚಿ ಬೀಳುವ ಘಟನೆ ನಡದಿದ್ದು, ಸಹೋದರಿಯರನ್ನು ಕಟ್ಟಿ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ. 

ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಇಬ್ಬರು ಸಹೋದರಿಯರಾದ ಜಾನಕ್ಕಿ ಹಾಗೂ ಅಮ್ಮಕ್ಕಿ ವಾಸಮಾಡುತ್ತಿದ್ದ ಮನೆಗೆ ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಒಳ ಬಂದ ಕಳ್ಳರು ಇಬ್ಬರನ್ನೂ ಕಟ್ಟಿಹಾಕಿ ಹಣ ಚಿನ್ನಾಭರಣಗಳನ್ನು ದೋಚಿದ್ದಾರೆ. ಎರಡೂವರೆ ಲಕ್ಷ ನಗದು ಹಾಗೂ ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯ ಮೂಲೆ ಮೂಲೆಯನ್ನು ತಡಕಾಡಿದ ದುಷ್ಕರ್ಮಿಗಳು ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಇನ್ನತರ ವಸ್ತುಗಳನ್ನು ತೆಗೆದುಕೊಂಡು ಎಸ್ಕೇಪ್ ಆಗಿದ್ದಾರೆ. ಬೆಳಗ್ಗಿನ ವೇಳೆಗೆ ಇಬ್ಬರು ಮಹಿಳೆಯರು ಕೈಕಾಲಿಗೆ ಕಟ್ಟಿದ್ದನ್ನು ಬಿಡಿಸಿಕೊಂಡು‌ ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗಿದೆ.

ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

ಇನ್ನೂ ಈ ಮಹಿಳೆಯರು ನಮ್ಮ ಜೀವಕ್ಕ ಏನು ಮಾಡಬೇಡಿ. ಎಲ್ಲಾ ಹಣ, ಚಿನ್ನಾಭರಣ ತೆಗೆದುಕೊಂಡು ಹೋಗಿ ಎಂದು ಬೇಡಿಕೊಂಡ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ದುಷ್ಕರ್ಮಿಗಳು ಮನೆಯಲ್ಲಿದ್ದ ಮದ್ಯ ಸೇವನೆ ಮಾಡಿ ಟಿವಿ ವೀಕ್ಷಣೆ ಮಾಡಿದ್ದಾರೆ. ಇವರಿಬ್ಬರು ನಿವೃತ್ತ ನ್ಯಾಯಾಧೀಶರಾದ ಬೋಪಯ್ಯ ಅವರ ಸಹೋದರಿಯರಾಗಿದ್ದಾರೆ. ಬೋಪಯ್ಯ ಅವರು ಬೆಂಗಳೂರಿನಲ್ಲಿ ‌ನೆಲಸಿದ್ದು ಸಹೋದರಿಯರು ತೋಟ‌ ನೋಡಿಕೊಂಡು ಈ ಮನೆಯಲ್ಲಿ ವಾಸವಾಗಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯಲ್ಲಿ ಸ್ಥಳೀಯರ ಕೈವಾಡ ವಿರಬಹುದು. ಈ ಹಿಂದೆ ಇಂತಹ ಘಟನೆ ನಡೆದಿದ್ದು ದರೋಡೆಕೋರರನ್ನು ಇನ್ನೂ ಬಂಧಿಸಲಾಗಿಲ್ಲ. ಆದ್ದರಿಂದ ನಮಗೆ ರಕ್ಷಣೆ ಕೊಡಿ ಎಂದು ಗ್ರಾಮಸ್ಥರು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more