Kodagu Crime: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡ್ತಿರುವ ದರೋಡೆಕೋರರು..!

Kodagu Crime: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡ್ತಿರುವ ದರೋಡೆಕೋರರು..!

Suvarna News   | Asianet News
Published : Feb 16, 2022, 01:04 PM IST

*  ಮಹಿಳೆಯರನ್ನು ಕಟ್ಟಿ ಹಾಕಿ ಚಿನ್ನಾಭರಣ, ನಗದು ದರೋಡೆ
*  ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲು
*  ರಕ್ಷಣೆ ಕೊಡಿ ಎಂದು ಗ್ರಾಮಸ್ಥರಿಂದ ಪೊಲೀಸ್ ಇಲಾಖೆಗೆ ಮನವಿ 
 

ಕೊಡಗು(ಫೆ.16):  ಕೊಡಗು ಜಿಲ್ಲೆಯಲ್ಲಿ ಮಹಿಳೆಯರು ವಾಸ ಮಾಡುವ ಒಂಟಿ ಮನೆಗಳನ್ನು ದರೋಡೆಕೋರರು ಟಾರ್ಗೆಟ್ ಮಾಡುತ್ತಿದ್ದಾರೆ. ಇದೀಗ ಮತ್ತೊಂದು ಬೆಚ್ಚಿ ಬೀಳುವ ಘಟನೆ ನಡದಿದ್ದು, ಸಹೋದರಿಯರನ್ನು ಕಟ್ಟಿ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ. 

ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಇಬ್ಬರು ಸಹೋದರಿಯರಾದ ಜಾನಕ್ಕಿ ಹಾಗೂ ಅಮ್ಮಕ್ಕಿ ವಾಸಮಾಡುತ್ತಿದ್ದ ಮನೆಗೆ ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಒಳ ಬಂದ ಕಳ್ಳರು ಇಬ್ಬರನ್ನೂ ಕಟ್ಟಿಹಾಕಿ ಹಣ ಚಿನ್ನಾಭರಣಗಳನ್ನು ದೋಚಿದ್ದಾರೆ. ಎರಡೂವರೆ ಲಕ್ಷ ನಗದು ಹಾಗೂ ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯ ಮೂಲೆ ಮೂಲೆಯನ್ನು ತಡಕಾಡಿದ ದುಷ್ಕರ್ಮಿಗಳು ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಇನ್ನತರ ವಸ್ತುಗಳನ್ನು ತೆಗೆದುಕೊಂಡು ಎಸ್ಕೇಪ್ ಆಗಿದ್ದಾರೆ. ಬೆಳಗ್ಗಿನ ವೇಳೆಗೆ ಇಬ್ಬರು ಮಹಿಳೆಯರು ಕೈಕಾಲಿಗೆ ಕಟ್ಟಿದ್ದನ್ನು ಬಿಡಿಸಿಕೊಂಡು‌ ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗಿದೆ.

ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

ಇನ್ನೂ ಈ ಮಹಿಳೆಯರು ನಮ್ಮ ಜೀವಕ್ಕ ಏನು ಮಾಡಬೇಡಿ. ಎಲ್ಲಾ ಹಣ, ಚಿನ್ನಾಭರಣ ತೆಗೆದುಕೊಂಡು ಹೋಗಿ ಎಂದು ಬೇಡಿಕೊಂಡ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ದುಷ್ಕರ್ಮಿಗಳು ಮನೆಯಲ್ಲಿದ್ದ ಮದ್ಯ ಸೇವನೆ ಮಾಡಿ ಟಿವಿ ವೀಕ್ಷಣೆ ಮಾಡಿದ್ದಾರೆ. ಇವರಿಬ್ಬರು ನಿವೃತ್ತ ನ್ಯಾಯಾಧೀಶರಾದ ಬೋಪಯ್ಯ ಅವರ ಸಹೋದರಿಯರಾಗಿದ್ದಾರೆ. ಬೋಪಯ್ಯ ಅವರು ಬೆಂಗಳೂರಿನಲ್ಲಿ ‌ನೆಲಸಿದ್ದು ಸಹೋದರಿಯರು ತೋಟ‌ ನೋಡಿಕೊಂಡು ಈ ಮನೆಯಲ್ಲಿ ವಾಸವಾಗಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯಲ್ಲಿ ಸ್ಥಳೀಯರ ಕೈವಾಡ ವಿರಬಹುದು. ಈ ಹಿಂದೆ ಇಂತಹ ಘಟನೆ ನಡೆದಿದ್ದು ದರೋಡೆಕೋರರನ್ನು ಇನ್ನೂ ಬಂಧಿಸಲಾಗಿಲ್ಲ. ಆದ್ದರಿಂದ ನಮಗೆ ರಕ್ಷಣೆ ಕೊಡಿ ಎಂದು ಗ್ರಾಮಸ್ಥರು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more