Kodagu Crime: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡ್ತಿರುವ ದರೋಡೆಕೋರರು..!

Kodagu Crime: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡ್ತಿರುವ ದರೋಡೆಕೋರರು..!

Suvarna News   | Asianet News
Published : Feb 16, 2022, 01:04 PM IST

*  ಮಹಿಳೆಯರನ್ನು ಕಟ್ಟಿ ಹಾಕಿ ಚಿನ್ನಾಭರಣ, ನಗದು ದರೋಡೆ
*  ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲು
*  ರಕ್ಷಣೆ ಕೊಡಿ ಎಂದು ಗ್ರಾಮಸ್ಥರಿಂದ ಪೊಲೀಸ್ ಇಲಾಖೆಗೆ ಮನವಿ 
 

ಕೊಡಗು(ಫೆ.16):  ಕೊಡಗು ಜಿಲ್ಲೆಯಲ್ಲಿ ಮಹಿಳೆಯರು ವಾಸ ಮಾಡುವ ಒಂಟಿ ಮನೆಗಳನ್ನು ದರೋಡೆಕೋರರು ಟಾರ್ಗೆಟ್ ಮಾಡುತ್ತಿದ್ದಾರೆ. ಇದೀಗ ಮತ್ತೊಂದು ಬೆಚ್ಚಿ ಬೀಳುವ ಘಟನೆ ನಡದಿದ್ದು, ಸಹೋದರಿಯರನ್ನು ಕಟ್ಟಿ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ. 

ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಇಬ್ಬರು ಸಹೋದರಿಯರಾದ ಜಾನಕ್ಕಿ ಹಾಗೂ ಅಮ್ಮಕ್ಕಿ ವಾಸಮಾಡುತ್ತಿದ್ದ ಮನೆಗೆ ಮಧ್ಯರಾತ್ರಿ ಮನೆಯ ಬಾಗಿಲು ಮುರಿದು ಒಳ ಬಂದ ಕಳ್ಳರು ಇಬ್ಬರನ್ನೂ ಕಟ್ಟಿಹಾಕಿ ಹಣ ಚಿನ್ನಾಭರಣಗಳನ್ನು ದೋಚಿದ್ದಾರೆ. ಎರಡೂವರೆ ಲಕ್ಷ ನಗದು ಹಾಗೂ ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯ ಮೂಲೆ ಮೂಲೆಯನ್ನು ತಡಕಾಡಿದ ದುಷ್ಕರ್ಮಿಗಳು ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಇನ್ನತರ ವಸ್ತುಗಳನ್ನು ತೆಗೆದುಕೊಂಡು ಎಸ್ಕೇಪ್ ಆಗಿದ್ದಾರೆ. ಬೆಳಗ್ಗಿನ ವೇಳೆಗೆ ಇಬ್ಬರು ಮಹಿಳೆಯರು ಕೈಕಾಲಿಗೆ ಕಟ್ಟಿದ್ದನ್ನು ಬಿಡಿಸಿಕೊಂಡು‌ ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗಿದೆ.

ಕೋರ್ಟ್‌ ಆದೇಶಕ್ಕೂ ಡೋಂಟ್‌ ಕೇರ್‌: 'ಹಿಜಾಬ್‌, ಬುರ್ಕಾ ಧರಿಸಿಯೇ ಕ್ಲಾಸ್‌ನಲ್ಲಿ ಕೂರ್ತಿವಿ'

ಇನ್ನೂ ಈ ಮಹಿಳೆಯರು ನಮ್ಮ ಜೀವಕ್ಕ ಏನು ಮಾಡಬೇಡಿ. ಎಲ್ಲಾ ಹಣ, ಚಿನ್ನಾಭರಣ ತೆಗೆದುಕೊಂಡು ಹೋಗಿ ಎಂದು ಬೇಡಿಕೊಂಡ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ದುಷ್ಕರ್ಮಿಗಳು ಮನೆಯಲ್ಲಿದ್ದ ಮದ್ಯ ಸೇವನೆ ಮಾಡಿ ಟಿವಿ ವೀಕ್ಷಣೆ ಮಾಡಿದ್ದಾರೆ. ಇವರಿಬ್ಬರು ನಿವೃತ್ತ ನ್ಯಾಯಾಧೀಶರಾದ ಬೋಪಯ್ಯ ಅವರ ಸಹೋದರಿಯರಾಗಿದ್ದಾರೆ. ಬೋಪಯ್ಯ ಅವರು ಬೆಂಗಳೂರಿನಲ್ಲಿ ‌ನೆಲಸಿದ್ದು ಸಹೋದರಿಯರು ತೋಟ‌ ನೋಡಿಕೊಂಡು ಈ ಮನೆಯಲ್ಲಿ ವಾಸವಾಗಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯಲ್ಲಿ ಸ್ಥಳೀಯರ ಕೈವಾಡ ವಿರಬಹುದು. ಈ ಹಿಂದೆ ಇಂತಹ ಘಟನೆ ನಡೆದಿದ್ದು ದರೋಡೆಕೋರರನ್ನು ಇನ್ನೂ ಬಂಧಿಸಲಾಗಿಲ್ಲ. ಆದ್ದರಿಂದ ನಮಗೆ ರಕ್ಷಣೆ ಕೊಡಿ ಎಂದು ಗ್ರಾಮಸ್ಥರು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more