ಬಡವರಿಗೆ ಕೇರಳದ ಕಂಪನಿಯಿಂದ ಪಂಗನಾಮ.. ಬಡ್ಡಿ ಆಸೆಯಲ್ಲಿದ್ದ ಕಾರ್ಮಿಕರಿಗೆ ಅಸಲೂ ಹೋಯ್ತು..!

ಬಡವರಿಗೆ ಕೇರಳದ ಕಂಪನಿಯಿಂದ ಪಂಗನಾಮ.. ಬಡ್ಡಿ ಆಸೆಯಲ್ಲಿದ್ದ ಕಾರ್ಮಿಕರಿಗೆ ಅಸಲೂ ಹೋಯ್ತು..!

Published : Dec 10, 2023, 10:39 AM IST

ದೇಶದಲ್ಲಿ ಸುಮಾರು 85 ಶಾಖೆ ಹೊಂದಿರೋ ಕೇರಳ ಮೂಲದ ಫೈನಾನ್ಸ್ ಕಂಪೆನಿ. ಸದ್ಯ ಕೆಲ ದಿನಗಳಿಂದ ಫೈನಾನ್ಸ್ ಬಾಗಿಲು ಹಾಕಿದ್ದು, ಬಡವರು ಫೈನಾನ್ಸ್ ಬಾಗಿಲು ಓಪನ್ ಆಗುತ್ತಾ ಅಂತ ಕಾಯುತ್ತಿದ್ದಾರೆ. ಕೂಲಿ ಮಾಡಿ ಹೊಟ್ಟೆ ಬಟ್ಟೆ ಕಟ್ಟಿ ಹೆಚ್ಚಿನ ಬಡ್ಡಿ ಸಿಗುತ್ತೆ ಅಂತ  ಫೈನಾನ್ಸ್ನಲ್ಲಿ ಹಣ ಹೂಡಿಕೆ ಮಾಡಿದ್ದವರು ಇದೀಗ ಬೀದಿಗೆ ಇಳಿದ್ದಿದ್ದಾರೆ.

ನಮಗೆ ನ್ಯಾಯ ಕೊಡಿ ಅಂತ ಅಂಗಲಾಚುತ್ತಿರೋ ಇವರೆಲ್ಲಾ ಬಡ ಕೂಲಿ ಕಾರ್ಮಿಕರು. ಹಳ್ಳಿಗಳಿಂದ ಮಂಗಳೂರಿಗೆ(Mangalore) ಬಂದು ಕೂಲಿ ನಾಲಿ ಮಾಡಿ ಬದುಕು ಕಟ್ಟಿಕೊಂಡವರು. ಸಂಪಾದನೆ ಮಾಡಿದ್ರಲ್ಲಿ ಒಂದಿಷ್ಟು ಉಳಿಸಬೇಕೆಂದು ರಾಷ್ಟ್ರೀಕೃತ್ ಬ್ಯಾಂಕ್ ಬಿಟ್ಟು ಫೈನಾನ್ಸ್ ಕಂಪೆನಿಯಲ್ಲಿ(Finance Company) ಹೂಡಿಕೆ ಮಾಡಿದ್ರು. ಆದ್ರೆ ಸದ್ಯ ಇವರಿಗೆ ಬಡ್ಡಿ ಸಿಗೋದಿರಲಿ ಹಾಕಿರೋ ಅಸಲು ಹಣ ಸಿಗೋದೇ ಡೌಟ್ ಆಗಿದೆ. ಯಾಕಂದ್ರೆ ಇವರು ಹೂಡಿಕೆ ಮಾಡಿರೋ ರಾಯಲ್ ಟ್ರಾವಂಕೂರ್ ಅನ್ನೋ ಫೈನಾನ್ಸ್ ಕಂಪೆನಿ ಸದ್ದಿಲ್ಲದೆ ಬಾಗಿಲು ಹಾಕಿದ್ದಾರೆ. ರಾಯಲ್ ಟ್ರಾವಂಕೂರ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪೆನಿ(Royal Travancore Farmers Producer Company) ಅನ್ನೋ ಫೈನಾನ್ಸ್ ಕಂಪೆನಿ ಸದ್ಯ ಮಂಗಳೂರಿನ ಒಂದು ಬ್ರಾಂಚ್ನಲ್ಲೇ ಸರಿ ಸುಮಾರು 65 ಲಕ್ಷ ವಂಚನೆ ಮಾಡಿದೆ . ಕೇರಳ ಮೂಲದ ಈ ಫೈನಾನ್ಸ್ ಕಂಪೆನಿ ಬಡವರನ್ನೇ ಟಾರ್ಗೆಟ್ ಮಾಡಿ ಹೆಚ್ಚಿನ ಬಡ್ಡಿಯ ಆಮಿಷ ನೀಡಿತ್ತು. ಹೀಗಾಗಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ಇಲ್ಲಿ ಹಣ ಹೂಡಿಕೆ ಮಾಡಿ ಈಗ ಕೈ ಸುಟ್ಟುಕೊಂಡಿದ್ದಾರೆ. ರಾಯಲ್ ಟ್ರವಾಂಕೂರ್ ಫೈನಾನ್ಸ್ ಕಂಪೆನಿ ದೇಶದ ಎಲ್ಲೆಡೆ ಸುಮಾರು 85 ಬ್ರಾಂಚ್ ಹೊಂದಿದೆ. ಕರ್ನಾಟಕದ ಹಲವೆಡೆ ಈ ಫೈನಾನ್ಸ್ ಕಂಪೆನಿ  ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸ್ತಿದೆ. ಸದ್ಯ ರಾಜ್ಯದಲ್ಲಿ ಎಲ್ಲಾ ಕಡೆಯಲ್ಲೂ ಈ ಫೈನಾನ್ಸ್ ಕಂಪೆನಿ ತನ್ನ ಕಚೇರಿಯನ್ನು ಬಂದ್ ಮಾಡಿದ್ದು, ಸಿಬ್ಬಂದಿ ಸದ್ದಿಲ್ಲದ್ದೇ ಪರಾರಿಯಾಗಿದ್ದಾರೆ. ಕಾರ್ಮಿಕರು ಹಾಗೂ ದಿನಗೂಲಿ ನೌಕರರು ಹಾಗೂ ಒಂದಿಷ್ಟು ಅಂಗಡಿಯವರು ಈ ಫೈನಾನ್ಸ್ನಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಸರ್ಕಾರ ನಮ್ಮ ಹಣ ವಾಪಾಸ್ ಹಿಂದಿರುಗಿಸುವಂತೆ ಮಾಡಬೇಕೆಂದು ಗೋಳಾಡ್ತಿದ್ದಾರೆ. ಫೈನಾನ್ಸ್ ಬಂದ್ ಆಗಲಿದೆ ಅನ್ನೋ ಸೂಚನೆ ಸಿಕ್ಕಾಗಲೇ ಜಿಲ್ಲಾಧಿಕಾರಿಗಳಿಗೂ ದೂರು ನೀಡಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  Weekly Horoscope: ಕರ್ಕಟಕ ರಾಶಿಯವರಿಗೆ ಈ ವಾರ ಮಾನಸಿಕ ಖಿನ್ನತೆ ಕಾಡಲಿದ್ದು, ಪರಿಹಾರಕ್ಕೆ ಏನು ಮಾಡಬೇಕು ?

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more