ಬಡವರಿಗೆ ಕೇರಳದ ಕಂಪನಿಯಿಂದ ಪಂಗನಾಮ.. ಬಡ್ಡಿ ಆಸೆಯಲ್ಲಿದ್ದ ಕಾರ್ಮಿಕರಿಗೆ ಅಸಲೂ ಹೋಯ್ತು..!

ಬಡವರಿಗೆ ಕೇರಳದ ಕಂಪನಿಯಿಂದ ಪಂಗನಾಮ.. ಬಡ್ಡಿ ಆಸೆಯಲ್ಲಿದ್ದ ಕಾರ್ಮಿಕರಿಗೆ ಅಸಲೂ ಹೋಯ್ತು..!

Published : Dec 10, 2023, 10:39 AM IST

ದೇಶದಲ್ಲಿ ಸುಮಾರು 85 ಶಾಖೆ ಹೊಂದಿರೋ ಕೇರಳ ಮೂಲದ ಫೈನಾನ್ಸ್ ಕಂಪೆನಿ. ಸದ್ಯ ಕೆಲ ದಿನಗಳಿಂದ ಫೈನಾನ್ಸ್ ಬಾಗಿಲು ಹಾಕಿದ್ದು, ಬಡವರು ಫೈನಾನ್ಸ್ ಬಾಗಿಲು ಓಪನ್ ಆಗುತ್ತಾ ಅಂತ ಕಾಯುತ್ತಿದ್ದಾರೆ. ಕೂಲಿ ಮಾಡಿ ಹೊಟ್ಟೆ ಬಟ್ಟೆ ಕಟ್ಟಿ ಹೆಚ್ಚಿನ ಬಡ್ಡಿ ಸಿಗುತ್ತೆ ಅಂತ  ಫೈನಾನ್ಸ್ನಲ್ಲಿ ಹಣ ಹೂಡಿಕೆ ಮಾಡಿದ್ದವರು ಇದೀಗ ಬೀದಿಗೆ ಇಳಿದ್ದಿದ್ದಾರೆ.

ನಮಗೆ ನ್ಯಾಯ ಕೊಡಿ ಅಂತ ಅಂಗಲಾಚುತ್ತಿರೋ ಇವರೆಲ್ಲಾ ಬಡ ಕೂಲಿ ಕಾರ್ಮಿಕರು. ಹಳ್ಳಿಗಳಿಂದ ಮಂಗಳೂರಿಗೆ(Mangalore) ಬಂದು ಕೂಲಿ ನಾಲಿ ಮಾಡಿ ಬದುಕು ಕಟ್ಟಿಕೊಂಡವರು. ಸಂಪಾದನೆ ಮಾಡಿದ್ರಲ್ಲಿ ಒಂದಿಷ್ಟು ಉಳಿಸಬೇಕೆಂದು ರಾಷ್ಟ್ರೀಕೃತ್ ಬ್ಯಾಂಕ್ ಬಿಟ್ಟು ಫೈನಾನ್ಸ್ ಕಂಪೆನಿಯಲ್ಲಿ(Finance Company) ಹೂಡಿಕೆ ಮಾಡಿದ್ರು. ಆದ್ರೆ ಸದ್ಯ ಇವರಿಗೆ ಬಡ್ಡಿ ಸಿಗೋದಿರಲಿ ಹಾಕಿರೋ ಅಸಲು ಹಣ ಸಿಗೋದೇ ಡೌಟ್ ಆಗಿದೆ. ಯಾಕಂದ್ರೆ ಇವರು ಹೂಡಿಕೆ ಮಾಡಿರೋ ರಾಯಲ್ ಟ್ರಾವಂಕೂರ್ ಅನ್ನೋ ಫೈನಾನ್ಸ್ ಕಂಪೆನಿ ಸದ್ದಿಲ್ಲದೆ ಬಾಗಿಲು ಹಾಕಿದ್ದಾರೆ. ರಾಯಲ್ ಟ್ರಾವಂಕೂರ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪೆನಿ(Royal Travancore Farmers Producer Company) ಅನ್ನೋ ಫೈನಾನ್ಸ್ ಕಂಪೆನಿ ಸದ್ಯ ಮಂಗಳೂರಿನ ಒಂದು ಬ್ರಾಂಚ್ನಲ್ಲೇ ಸರಿ ಸುಮಾರು 65 ಲಕ್ಷ ವಂಚನೆ ಮಾಡಿದೆ . ಕೇರಳ ಮೂಲದ ಈ ಫೈನಾನ್ಸ್ ಕಂಪೆನಿ ಬಡವರನ್ನೇ ಟಾರ್ಗೆಟ್ ಮಾಡಿ ಹೆಚ್ಚಿನ ಬಡ್ಡಿಯ ಆಮಿಷ ನೀಡಿತ್ತು. ಹೀಗಾಗಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ಇಲ್ಲಿ ಹಣ ಹೂಡಿಕೆ ಮಾಡಿ ಈಗ ಕೈ ಸುಟ್ಟುಕೊಂಡಿದ್ದಾರೆ. ರಾಯಲ್ ಟ್ರವಾಂಕೂರ್ ಫೈನಾನ್ಸ್ ಕಂಪೆನಿ ದೇಶದ ಎಲ್ಲೆಡೆ ಸುಮಾರು 85 ಬ್ರಾಂಚ್ ಹೊಂದಿದೆ. ಕರ್ನಾಟಕದ ಹಲವೆಡೆ ಈ ಫೈನಾನ್ಸ್ ಕಂಪೆನಿ  ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸ್ತಿದೆ. ಸದ್ಯ ರಾಜ್ಯದಲ್ಲಿ ಎಲ್ಲಾ ಕಡೆಯಲ್ಲೂ ಈ ಫೈನಾನ್ಸ್ ಕಂಪೆನಿ ತನ್ನ ಕಚೇರಿಯನ್ನು ಬಂದ್ ಮಾಡಿದ್ದು, ಸಿಬ್ಬಂದಿ ಸದ್ದಿಲ್ಲದ್ದೇ ಪರಾರಿಯಾಗಿದ್ದಾರೆ. ಕಾರ್ಮಿಕರು ಹಾಗೂ ದಿನಗೂಲಿ ನೌಕರರು ಹಾಗೂ ಒಂದಿಷ್ಟು ಅಂಗಡಿಯವರು ಈ ಫೈನಾನ್ಸ್ನಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಸರ್ಕಾರ ನಮ್ಮ ಹಣ ವಾಪಾಸ್ ಹಿಂದಿರುಗಿಸುವಂತೆ ಮಾಡಬೇಕೆಂದು ಗೋಳಾಡ್ತಿದ್ದಾರೆ. ಫೈನಾನ್ಸ್ ಬಂದ್ ಆಗಲಿದೆ ಅನ್ನೋ ಸೂಚನೆ ಸಿಕ್ಕಾಗಲೇ ಜಿಲ್ಲಾಧಿಕಾರಿಗಳಿಗೂ ದೂರು ನೀಡಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  Weekly Horoscope: ಕರ್ಕಟಕ ರಾಶಿಯವರಿಗೆ ಈ ವಾರ ಮಾನಸಿಕ ಖಿನ್ನತೆ ಕಾಡಲಿದ್ದು, ಪರಿಹಾರಕ್ಕೆ ಏನು ಮಾಡಬೇಕು ?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more