ಬಡವರಿಗೆ ಕೇರಳದ ಕಂಪನಿಯಿಂದ ಪಂಗನಾಮ.. ಬಡ್ಡಿ ಆಸೆಯಲ್ಲಿದ್ದ ಕಾರ್ಮಿಕರಿಗೆ ಅಸಲೂ ಹೋಯ್ತು..!

ಬಡವರಿಗೆ ಕೇರಳದ ಕಂಪನಿಯಿಂದ ಪಂಗನಾಮ.. ಬಡ್ಡಿ ಆಸೆಯಲ್ಲಿದ್ದ ಕಾರ್ಮಿಕರಿಗೆ ಅಸಲೂ ಹೋಯ್ತು..!

Published : Dec 10, 2023, 10:39 AM IST

ದೇಶದಲ್ಲಿ ಸುಮಾರು 85 ಶಾಖೆ ಹೊಂದಿರೋ ಕೇರಳ ಮೂಲದ ಫೈನಾನ್ಸ್ ಕಂಪೆನಿ. ಸದ್ಯ ಕೆಲ ದಿನಗಳಿಂದ ಫೈನಾನ್ಸ್ ಬಾಗಿಲು ಹಾಕಿದ್ದು, ಬಡವರು ಫೈನಾನ್ಸ್ ಬಾಗಿಲು ಓಪನ್ ಆಗುತ್ತಾ ಅಂತ ಕಾಯುತ್ತಿದ್ದಾರೆ. ಕೂಲಿ ಮಾಡಿ ಹೊಟ್ಟೆ ಬಟ್ಟೆ ಕಟ್ಟಿ ಹೆಚ್ಚಿನ ಬಡ್ಡಿ ಸಿಗುತ್ತೆ ಅಂತ  ಫೈನಾನ್ಸ್ನಲ್ಲಿ ಹಣ ಹೂಡಿಕೆ ಮಾಡಿದ್ದವರು ಇದೀಗ ಬೀದಿಗೆ ಇಳಿದ್ದಿದ್ದಾರೆ.

ನಮಗೆ ನ್ಯಾಯ ಕೊಡಿ ಅಂತ ಅಂಗಲಾಚುತ್ತಿರೋ ಇವರೆಲ್ಲಾ ಬಡ ಕೂಲಿ ಕಾರ್ಮಿಕರು. ಹಳ್ಳಿಗಳಿಂದ ಮಂಗಳೂರಿಗೆ(Mangalore) ಬಂದು ಕೂಲಿ ನಾಲಿ ಮಾಡಿ ಬದುಕು ಕಟ್ಟಿಕೊಂಡವರು. ಸಂಪಾದನೆ ಮಾಡಿದ್ರಲ್ಲಿ ಒಂದಿಷ್ಟು ಉಳಿಸಬೇಕೆಂದು ರಾಷ್ಟ್ರೀಕೃತ್ ಬ್ಯಾಂಕ್ ಬಿಟ್ಟು ಫೈನಾನ್ಸ್ ಕಂಪೆನಿಯಲ್ಲಿ(Finance Company) ಹೂಡಿಕೆ ಮಾಡಿದ್ರು. ಆದ್ರೆ ಸದ್ಯ ಇವರಿಗೆ ಬಡ್ಡಿ ಸಿಗೋದಿರಲಿ ಹಾಕಿರೋ ಅಸಲು ಹಣ ಸಿಗೋದೇ ಡೌಟ್ ಆಗಿದೆ. ಯಾಕಂದ್ರೆ ಇವರು ಹೂಡಿಕೆ ಮಾಡಿರೋ ರಾಯಲ್ ಟ್ರಾವಂಕೂರ್ ಅನ್ನೋ ಫೈನಾನ್ಸ್ ಕಂಪೆನಿ ಸದ್ದಿಲ್ಲದೆ ಬಾಗಿಲು ಹಾಕಿದ್ದಾರೆ. ರಾಯಲ್ ಟ್ರಾವಂಕೂರ್ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪೆನಿ(Royal Travancore Farmers Producer Company) ಅನ್ನೋ ಫೈನಾನ್ಸ್ ಕಂಪೆನಿ ಸದ್ಯ ಮಂಗಳೂರಿನ ಒಂದು ಬ್ರಾಂಚ್ನಲ್ಲೇ ಸರಿ ಸುಮಾರು 65 ಲಕ್ಷ ವಂಚನೆ ಮಾಡಿದೆ . ಕೇರಳ ಮೂಲದ ಈ ಫೈನಾನ್ಸ್ ಕಂಪೆನಿ ಬಡವರನ್ನೇ ಟಾರ್ಗೆಟ್ ಮಾಡಿ ಹೆಚ್ಚಿನ ಬಡ್ಡಿಯ ಆಮಿಷ ನೀಡಿತ್ತು. ಹೀಗಾಗಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ಇಲ್ಲಿ ಹಣ ಹೂಡಿಕೆ ಮಾಡಿ ಈಗ ಕೈ ಸುಟ್ಟುಕೊಂಡಿದ್ದಾರೆ. ರಾಯಲ್ ಟ್ರವಾಂಕೂರ್ ಫೈನಾನ್ಸ್ ಕಂಪೆನಿ ದೇಶದ ಎಲ್ಲೆಡೆ ಸುಮಾರು 85 ಬ್ರಾಂಚ್ ಹೊಂದಿದೆ. ಕರ್ನಾಟಕದ ಹಲವೆಡೆ ಈ ಫೈನಾನ್ಸ್ ಕಂಪೆನಿ  ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸ್ತಿದೆ. ಸದ್ಯ ರಾಜ್ಯದಲ್ಲಿ ಎಲ್ಲಾ ಕಡೆಯಲ್ಲೂ ಈ ಫೈನಾನ್ಸ್ ಕಂಪೆನಿ ತನ್ನ ಕಚೇರಿಯನ್ನು ಬಂದ್ ಮಾಡಿದ್ದು, ಸಿಬ್ಬಂದಿ ಸದ್ದಿಲ್ಲದ್ದೇ ಪರಾರಿಯಾಗಿದ್ದಾರೆ. ಕಾರ್ಮಿಕರು ಹಾಗೂ ದಿನಗೂಲಿ ನೌಕರರು ಹಾಗೂ ಒಂದಿಷ್ಟು ಅಂಗಡಿಯವರು ಈ ಫೈನಾನ್ಸ್ನಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಸರ್ಕಾರ ನಮ್ಮ ಹಣ ವಾಪಾಸ್ ಹಿಂದಿರುಗಿಸುವಂತೆ ಮಾಡಬೇಕೆಂದು ಗೋಳಾಡ್ತಿದ್ದಾರೆ. ಫೈನಾನ್ಸ್ ಬಂದ್ ಆಗಲಿದೆ ಅನ್ನೋ ಸೂಚನೆ ಸಿಕ್ಕಾಗಲೇ ಜಿಲ್ಲಾಧಿಕಾರಿಗಳಿಗೂ ದೂರು ನೀಡಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  Weekly Horoscope: ಕರ್ಕಟಕ ರಾಶಿಯವರಿಗೆ ಈ ವಾರ ಮಾನಸಿಕ ಖಿನ್ನತೆ ಕಾಡಲಿದ್ದು, ಪರಿಹಾರಕ್ಕೆ ಏನು ಮಾಡಬೇಕು ?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more