ವಿಧಾನಸೌಧ ಸಮೀಪದಲ್ಲೇ ಶ್ರೀಗಂಧ ಕಳ್ಳರ ಕೈಚಳಕ: ರಾತ್ರೋ ರಾತ್ರಿ ಮರ ಹೊತ್ತೊಯ್ದ ಖದೀಮರು !

ವಿಧಾನಸೌಧ ಸಮೀಪದಲ್ಲೇ ಶ್ರೀಗಂಧ ಕಳ್ಳರ ಕೈಚಳಕ: ರಾತ್ರೋ ರಾತ್ರಿ ಮರ ಹೊತ್ತೊಯ್ದ ಖದೀಮರು !

Published : Nov 21, 2023, 10:09 AM IST

ವಿಧಾನಸೌಧ ಸಮೀಪದಲ್ಲೇ ಶ್ರೀಗಂಧ ಮರ ಕಳ್ಳತನವಾಗಿರೋ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಕಾದು ಕುಳಿತು ಎಸ್.ಜೆ.ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಆವರಣದಲ್ಲಿ ಶ್ರೀಗಂಧ ಮರ ಕಳವು ಮಾಡಿ ಕದ್ದು ಪರಾರಿಯಾಗಿದ್ದಾರೆ.ಪೊಲೀಸರು ಶ್ರೀಗಂಧ ಕಳ್ಳರಿಗಾಗಿ ಹುಡುಕಾಟ ನಡೆಸಿದ್ದಾರೆ.
 

ರಾತ್ರೋ ರಾತ್ರಿ ಶ್ರೀಗಂಧ ಮರಕ್ಕೆ ಕೊಡಲಿ. ಮೂರರಲ್ಲಿ ಒಂದು ಇಡೀ ಮರ ಕತ್ತರಿಸಿ ಹೊತ್ತೊಯ್ದ ಖದೀಮರು. ಇದು ಶಕ್ತಿ ಕೇಂದ್ರ ವಿಧಾನಸೌಧದಿಂದ(Vidhana Soudha) ಕೂಗಳತೆ ದೂರದಲ್ಲಿ ನಡೆದ ಗಂಧದ ಮರ(Sandalwood Tree) ಕಳ್ಳತನ. ಬೆಂಗಳೂರಿನ ಕೆ.ಆರ್.ಸರ್ಕಲ್ನಲ್ಲಿ ಹಗಲೊತ್ತಲ್ಲಿ ವಾಹನ ದಟ್ಟಣೆ ನಿಮಗೆಲ್ಲ ಗೊತ್ತೇಯಿದೆ. ರಾತ್ರಿ ಹೊತ್ತಲ್ಲೂ ಇಲ್ಲಿ ವಾಹನ ಓಡಾಟ ಇದ್ದೇ ಇರುತ್ತೆ. ಆದ್ರೆ, ಇದೇ ಕೆಆರ್ ಸರ್ಕಲ್ನಲ್ಲಿರುವ ಎಸ್.ಜೆ.ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಆವರಣದಲ್ಲಿನ ಶ್ರೀಗಂಧ ಮರವನ್ನು ಖದೀಮರು ಹೊತ್ತೊಯ್ದಿದ್ದಾರೆ. ರಾತ್ರೋ ರಾತ್ರಿ ಮರವನ್ನು ತುಂಡು ತುಂಡಾಗಿ ಕತ್ತರಿಸಿಕೊಂಡು ಹೊತ್ತೊಯ್ದಿದ್ದಾರೆ. ಕಳೆದ 10 ರಿಂದ 15 ವರ್ಷಗಳಿಂದ ಕಾಲೇಜ್ ಆವರಣದಲ್ಲಿ ಮೂರು ಶ್ರೀಗಂಧ ಮರ ಬೆಳೆದಿದ್ದವು. ಖದೀಮರು ಹಲವು ದಿನದಿಂದ ಕಾದು ಕುಳಿತು ಸಮಯ ಸಾಧಿಸಿ ರಾತ್ರಿ ಹೊತ್ತಲ್ಲಿ ಒಂದು ಶ್ರೀಗಂಧ ಮರ ಕಳ್ಳತನ(Theft) ಮಾಡಿದ್ದಾರೆ.  ಶ್ರೀಗಂಧ ಕಳ್ಳತನ ಬಗ್ಗೆ ಕಾಲೇಜು ಪ್ರಿನಸಿಪಾಲ್ ಸದಾಶಿವಮೂರ್ತಿ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಶ್ರೀಗಂಧ ಕಳ್ಳತನ ಜಾಗದಿಂದ ಕೂಗಳತೆ ದೂರದಲ್ಲಿ ವಿಧಾನಸೌಧ ಇದೆ.. ಮತ್ತೊಂದ್ಕಡೆ ಡಿಜಿಐಜಿ ಕಚೇರಿಯೂ ಇದೆ.. ರಾತ್ರಿ ಹೊತ್ತಲ್ಲೂ ಈ ಭಾಗದಲ್ಲಿ ಕೆಲ ವಾಹನಗಳ ಓಡಾಟವೂ ಇದ್ದೇ ಇರುತ್ತೆ.. ಆದ್ರೆ, ಖದೀಮರು ಯಾವ ಭಯವಿಲ್ಲದೇ ಬೆಲೆ ಬಾಳೋ ಗಂಧದ ಮರ ಕದ್ದು ಪರಾರಿಯಾಗಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡಿರೋ ವಿಧಾನಸೌಧ ಠಾಣೆ ಪೊಲೀಸರು ಗಂಧದ ಚೋರರಿಗೆ ಬಲೆ ಬೀಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬ್ಯಾಂಕ್ ಮ್ಯಾನೇಜರ್ ದೋಖಾ..ರೈತನಿಗೆ ಸಂಕಷ್ಟ: ಏಷ್ಯಾನೆಟ್‌ ಸುವರ್ಣನ್ಯೂಸ್ ವರದಿಯಿಂದ ಸಮಸ್ಯೆ ಇತ್ಯರ್ಥ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more