ವಿಧಾನಸೌಧ ಸಮೀಪದಲ್ಲೇ ಶ್ರೀಗಂಧ ಕಳ್ಳರ ಕೈಚಳಕ: ರಾತ್ರೋ ರಾತ್ರಿ ಮರ ಹೊತ್ತೊಯ್ದ ಖದೀಮರು !

ವಿಧಾನಸೌಧ ಸಮೀಪದಲ್ಲೇ ಶ್ರೀಗಂಧ ಕಳ್ಳರ ಕೈಚಳಕ: ರಾತ್ರೋ ರಾತ್ರಿ ಮರ ಹೊತ್ತೊಯ್ದ ಖದೀಮರು !

Published : Nov 21, 2023, 10:09 AM IST

ವಿಧಾನಸೌಧ ಸಮೀಪದಲ್ಲೇ ಶ್ರೀಗಂಧ ಮರ ಕಳ್ಳತನವಾಗಿರೋ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಕಾದು ಕುಳಿತು ಎಸ್.ಜೆ.ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಆವರಣದಲ್ಲಿ ಶ್ರೀಗಂಧ ಮರ ಕಳವು ಮಾಡಿ ಕದ್ದು ಪರಾರಿಯಾಗಿದ್ದಾರೆ.ಪೊಲೀಸರು ಶ್ರೀಗಂಧ ಕಳ್ಳರಿಗಾಗಿ ಹುಡುಕಾಟ ನಡೆಸಿದ್ದಾರೆ.
 

ರಾತ್ರೋ ರಾತ್ರಿ ಶ್ರೀಗಂಧ ಮರಕ್ಕೆ ಕೊಡಲಿ. ಮೂರರಲ್ಲಿ ಒಂದು ಇಡೀ ಮರ ಕತ್ತರಿಸಿ ಹೊತ್ತೊಯ್ದ ಖದೀಮರು. ಇದು ಶಕ್ತಿ ಕೇಂದ್ರ ವಿಧಾನಸೌಧದಿಂದ(Vidhana Soudha) ಕೂಗಳತೆ ದೂರದಲ್ಲಿ ನಡೆದ ಗಂಧದ ಮರ(Sandalwood Tree) ಕಳ್ಳತನ. ಬೆಂಗಳೂರಿನ ಕೆ.ಆರ್.ಸರ್ಕಲ್ನಲ್ಲಿ ಹಗಲೊತ್ತಲ್ಲಿ ವಾಹನ ದಟ್ಟಣೆ ನಿಮಗೆಲ್ಲ ಗೊತ್ತೇಯಿದೆ. ರಾತ್ರಿ ಹೊತ್ತಲ್ಲೂ ಇಲ್ಲಿ ವಾಹನ ಓಡಾಟ ಇದ್ದೇ ಇರುತ್ತೆ. ಆದ್ರೆ, ಇದೇ ಕೆಆರ್ ಸರ್ಕಲ್ನಲ್ಲಿರುವ ಎಸ್.ಜೆ.ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಆವರಣದಲ್ಲಿನ ಶ್ರೀಗಂಧ ಮರವನ್ನು ಖದೀಮರು ಹೊತ್ತೊಯ್ದಿದ್ದಾರೆ. ರಾತ್ರೋ ರಾತ್ರಿ ಮರವನ್ನು ತುಂಡು ತುಂಡಾಗಿ ಕತ್ತರಿಸಿಕೊಂಡು ಹೊತ್ತೊಯ್ದಿದ್ದಾರೆ. ಕಳೆದ 10 ರಿಂದ 15 ವರ್ಷಗಳಿಂದ ಕಾಲೇಜ್ ಆವರಣದಲ್ಲಿ ಮೂರು ಶ್ರೀಗಂಧ ಮರ ಬೆಳೆದಿದ್ದವು. ಖದೀಮರು ಹಲವು ದಿನದಿಂದ ಕಾದು ಕುಳಿತು ಸಮಯ ಸಾಧಿಸಿ ರಾತ್ರಿ ಹೊತ್ತಲ್ಲಿ ಒಂದು ಶ್ರೀಗಂಧ ಮರ ಕಳ್ಳತನ(Theft) ಮಾಡಿದ್ದಾರೆ.  ಶ್ರೀಗಂಧ ಕಳ್ಳತನ ಬಗ್ಗೆ ಕಾಲೇಜು ಪ್ರಿನಸಿಪಾಲ್ ಸದಾಶಿವಮೂರ್ತಿ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಶ್ರೀಗಂಧ ಕಳ್ಳತನ ಜಾಗದಿಂದ ಕೂಗಳತೆ ದೂರದಲ್ಲಿ ವಿಧಾನಸೌಧ ಇದೆ.. ಮತ್ತೊಂದ್ಕಡೆ ಡಿಜಿಐಜಿ ಕಚೇರಿಯೂ ಇದೆ.. ರಾತ್ರಿ ಹೊತ್ತಲ್ಲೂ ಈ ಭಾಗದಲ್ಲಿ ಕೆಲ ವಾಹನಗಳ ಓಡಾಟವೂ ಇದ್ದೇ ಇರುತ್ತೆ.. ಆದ್ರೆ, ಖದೀಮರು ಯಾವ ಭಯವಿಲ್ಲದೇ ಬೆಲೆ ಬಾಳೋ ಗಂಧದ ಮರ ಕದ್ದು ಪರಾರಿಯಾಗಿದ್ದಾರೆ. ಇದೀಗ ಪ್ರಕರಣ ದಾಖಲಿಸಿಕೊಂಡಿರೋ ವಿಧಾನಸೌಧ ಠಾಣೆ ಪೊಲೀಸರು ಗಂಧದ ಚೋರರಿಗೆ ಬಲೆ ಬೀಸಿದ್ದಾರೆ.

ಇದನ್ನೂ ವೀಕ್ಷಿಸಿ:  ಬ್ಯಾಂಕ್ ಮ್ಯಾನೇಜರ್ ದೋಖಾ..ರೈತನಿಗೆ ಸಂಕಷ್ಟ: ಏಷ್ಯಾನೆಟ್‌ ಸುವರ್ಣನ್ಯೂಸ್ ವರದಿಯಿಂದ ಸಮಸ್ಯೆ ಇತ್ಯರ್ಥ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more