ನಮ್ಮ ನಾಯಕರಾದ ಡಿಕೆ ಶಿವಕುಮಾರ್‌, ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ:ಶ್ರೇಯಸ್ ಪಟೇಲ್

ನಮ್ಮ ನಾಯಕರಾದ ಡಿಕೆ ಶಿವಕುಮಾರ್‌, ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ:ಶ್ರೇಯಸ್ ಪಟೇಲ್

Published : May 07, 2024, 12:43 PM ISTUpdated : May 07, 2024, 12:44 PM IST

ಮೊದಲಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮಾಧ್ಯಮಗಳ ಮುಂದೆ ಬಂದಿದ್ದು, ವಕೀಲ ದೇವರಾಜೇಗೌಡ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ. ನಮ್ಮ ನಾಯಕರಾದ ಡಿಕೆ ಶಿವಕುಮಾರ್ ಹಾಗೂ ನಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ವೈರಲ್ ವಿಚಾರದಲ್ಲಿ ಮೊದಲಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ (Congress candidate Shreyas Patel) ಮಾಧ್ಯಮಗಳ ಮುಂದೆ ಬಂದಿದ್ದಾರೆ. ವಕೀಲ ದೇವರಾಜೇಗೌಡ ಆರೋಪಗಳ ಸುರಿಮಳೆ ಮಾಡಿದ ಹಿನ್ನೆಲೆ, ಬಿಜೆಪಿ ಮುಖಂಡ ದೇವರಾಜೇಗೌಡ (Devarajegowda) ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ, ನಮ್ಮ ನಾಯಕರಾದ ಡಿಕೆ ಶಿವಕುಮಾರ್ (DK Shivakumar) ಹಾಗೂ ನಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ,  ನಾನು ಯಾರನ್ನು ಕೂಡ ಭೇಟಿ ಮಾಡಿಲ್ಲ, ನಾನು ಬಹಿರಂಗ ಚರ್ಚೆಗೆ ಅವರನ್ನು ಆಹ್ವಾನ ಮಾಡುತ್ತೇನೆ ಎಂದಿದ್ದಾರೆ. 

ನಾನು ಭೇಟಿಯಾಗಿರೋದು ನಿಜ ಇದ್ದರೆ ದಾಖಲೆ ನೀಡಲಿ, ನನ್ನ ಪಾತ್ರ ಇದ್ದರೆ ನಾನು ರಾಜಕೀಯದಿಂದ ಹಿಂದೆ ಸರಿಯುತ್ತೇನೆ. ಹಾಗೆಯೇ ಅವರ ಆರೋಪ ನಿಜವಾದರೆ ಜೂನ್ 4 ರಂದು ನಾನು ಗೆದ್ದರೆ ರಾಜೀನಾಮೆ ನೀಡುತ್ತೇನೆ. ಒಬ್ಬರ ತೇಜೋವಧೆ ಮಾಡೋದು ಸರಿಯಲ್ಲ, ಆರು ತಿಂಗಳ ಹಿಂದೆ ಇದೇ ದೇವರಾಜೇಗೌಡ ವಿಡಿಯೋ ಲೀಕ್‌ ಮಾಡುವ ಸವಾಲು ಹಾಕಿದ್ದರು. ತಾನು ತಿಂದು ಬೇರೆಯವರ ಮೇಲೆ ಹೊರಿಸೊ ಕೆಲಸ ಮಾಡ್ತಾ ಇದ್ದಾರೆ, ಎಸ್ ಐ ಟಿ ತನಿಖೆ ವೇಳೆ ಹೀಗೆ ಹೇಳಿಕೆ ನೀಡಿ ತನಿಖೆ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. 

ಅಲ್ಲದೆ ಅವರು ಮಾಡೊ ಆರೋಪಕ್ಕೆ ದಾಖಲೆ ಕೊಡಲಿ, ಇದರ ವಿರುದ್ಧ ನಾನು ಮಾನನಷ್ಠ ಮೊಕದ್ದಮೆ ಹೂಡುತ್ತೇನೆ, ನನ್ನ ಹೆಸರಿಗೆ ಕಳಂಕ ತರುವ ಕೆಲಸವನ್ನು ಈ ವ್ಯಕ್ತಿ ಮಾಡುತ್ತಿದ್ದಾರೆ, ಆ ಪೆನ್ ಡ್ರೈವ್ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತದೆ, ನಾನು ಗೌರವಾನ್ವಿತ ಕುಟುಂಬ ದಿಂದ ಬಂದವನು, ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಯಲಿ, ಈ ದೇವರಾಜೇಗೌಡ ಗೊಜ್ಜೆ ರಾಜಕಾರಣ ಮಾಡುತ್ತಿದ್ದಾರೆ, ನಮ್ಮ ಡಿಸಿಎಂ ಬಗ್ಗೆ ಅವರು ಮಾತನಾಡಿದ್ದು, ಇದು ಖಂಡನೀಯ, ಈ ಪ್ರಕರಣ ದಲ್ಲಿ ಅವರ ಪಾತ್ರ ಏನು ಇಲ್ಲ ಎಂದ  ಶ್ರೇಯಸ್‌ ನನ್ನ ಮೇಲೆ ಯಾಕೆ ಆರೋಪ ಮಾಡುತ್ತಿದ್ದಾರೊ ಗೊತ್ತಿಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಜಕೀಯಕ್ಕೆ ಹೆಣ್ಣು ಮಕ್ಕಳ ಫೋಟೋ ಸೇಲ್‌: ‘ಲುಲು’ಕುಮಾರ ಎಂದು ಸಿಎಂ, ಡಿಸಿಎಂ ವಿರುದ್ಧ ಪೋಸ್ಟರ್‌

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more