ನಮ್ಮ ನಾಯಕರಾದ ಡಿಕೆ ಶಿವಕುಮಾರ್‌, ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ:ಶ್ರೇಯಸ್ ಪಟೇಲ್

ನಮ್ಮ ನಾಯಕರಾದ ಡಿಕೆ ಶಿವಕುಮಾರ್‌, ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ:ಶ್ರೇಯಸ್ ಪಟೇಲ್

Published : May 07, 2024, 12:43 PM ISTUpdated : May 07, 2024, 12:44 PM IST

ಮೊದಲಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮಾಧ್ಯಮಗಳ ಮುಂದೆ ಬಂದಿದ್ದು, ವಕೀಲ ದೇವರಾಜೇಗೌಡ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ. ನಮ್ಮ ನಾಯಕರಾದ ಡಿಕೆ ಶಿವಕುಮಾರ್ ಹಾಗೂ ನಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ವೈರಲ್ ವಿಚಾರದಲ್ಲಿ ಮೊದಲಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ (Congress candidate Shreyas Patel) ಮಾಧ್ಯಮಗಳ ಮುಂದೆ ಬಂದಿದ್ದಾರೆ. ವಕೀಲ ದೇವರಾಜೇಗೌಡ ಆರೋಪಗಳ ಸುರಿಮಳೆ ಮಾಡಿದ ಹಿನ್ನೆಲೆ, ಬಿಜೆಪಿ ಮುಖಂಡ ದೇವರಾಜೇಗೌಡ (Devarajegowda) ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ, ನಮ್ಮ ನಾಯಕರಾದ ಡಿಕೆ ಶಿವಕುಮಾರ್ (DK Shivakumar) ಹಾಗೂ ನಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ,  ನಾನು ಯಾರನ್ನು ಕೂಡ ಭೇಟಿ ಮಾಡಿಲ್ಲ, ನಾನು ಬಹಿರಂಗ ಚರ್ಚೆಗೆ ಅವರನ್ನು ಆಹ್ವಾನ ಮಾಡುತ್ತೇನೆ ಎಂದಿದ್ದಾರೆ. 

ನಾನು ಭೇಟಿಯಾಗಿರೋದು ನಿಜ ಇದ್ದರೆ ದಾಖಲೆ ನೀಡಲಿ, ನನ್ನ ಪಾತ್ರ ಇದ್ದರೆ ನಾನು ರಾಜಕೀಯದಿಂದ ಹಿಂದೆ ಸರಿಯುತ್ತೇನೆ. ಹಾಗೆಯೇ ಅವರ ಆರೋಪ ನಿಜವಾದರೆ ಜೂನ್ 4 ರಂದು ನಾನು ಗೆದ್ದರೆ ರಾಜೀನಾಮೆ ನೀಡುತ್ತೇನೆ. ಒಬ್ಬರ ತೇಜೋವಧೆ ಮಾಡೋದು ಸರಿಯಲ್ಲ, ಆರು ತಿಂಗಳ ಹಿಂದೆ ಇದೇ ದೇವರಾಜೇಗೌಡ ವಿಡಿಯೋ ಲೀಕ್‌ ಮಾಡುವ ಸವಾಲು ಹಾಕಿದ್ದರು. ತಾನು ತಿಂದು ಬೇರೆಯವರ ಮೇಲೆ ಹೊರಿಸೊ ಕೆಲಸ ಮಾಡ್ತಾ ಇದ್ದಾರೆ, ಎಸ್ ಐ ಟಿ ತನಿಖೆ ವೇಳೆ ಹೀಗೆ ಹೇಳಿಕೆ ನೀಡಿ ತನಿಖೆ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. 

ಅಲ್ಲದೆ ಅವರು ಮಾಡೊ ಆರೋಪಕ್ಕೆ ದಾಖಲೆ ಕೊಡಲಿ, ಇದರ ವಿರುದ್ಧ ನಾನು ಮಾನನಷ್ಠ ಮೊಕದ್ದಮೆ ಹೂಡುತ್ತೇನೆ, ನನ್ನ ಹೆಸರಿಗೆ ಕಳಂಕ ತರುವ ಕೆಲಸವನ್ನು ಈ ವ್ಯಕ್ತಿ ಮಾಡುತ್ತಿದ್ದಾರೆ, ಆ ಪೆನ್ ಡ್ರೈವ್ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತದೆ, ನಾನು ಗೌರವಾನ್ವಿತ ಕುಟುಂಬ ದಿಂದ ಬಂದವನು, ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಯಲಿ, ಈ ದೇವರಾಜೇಗೌಡ ಗೊಜ್ಜೆ ರಾಜಕಾರಣ ಮಾಡುತ್ತಿದ್ದಾರೆ, ನಮ್ಮ ಡಿಸಿಎಂ ಬಗ್ಗೆ ಅವರು ಮಾತನಾಡಿದ್ದು, ಇದು ಖಂಡನೀಯ, ಈ ಪ್ರಕರಣ ದಲ್ಲಿ ಅವರ ಪಾತ್ರ ಏನು ಇಲ್ಲ ಎಂದ  ಶ್ರೇಯಸ್‌ ನನ್ನ ಮೇಲೆ ಯಾಕೆ ಆರೋಪ ಮಾಡುತ್ತಿದ್ದಾರೊ ಗೊತ್ತಿಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ರಾಜಕೀಯಕ್ಕೆ ಹೆಣ್ಣು ಮಕ್ಕಳ ಫೋಟೋ ಸೇಲ್‌: ‘ಲುಲು’ಕುಮಾರ ಎಂದು ಸಿಎಂ, ಡಿಸಿಎಂ ವಿರುದ್ಧ ಪೋಸ್ಟರ್‌

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more