ಪ್ರಜ್ವಲ್ ರೇವಣ್ಣ ಹೆದರಿದ್ದು ಕಾನೂನಿಗಾ..ತಾತನ ಎಚ್ಚರಿಕೆಗಾ..? ಕೊನೆಗೂ ಕಾನೂನಿಗೆ ಶರಣಾದ ಪೆನ್‌ಡ್ರೈವ್ ವೀರ..!

ಪ್ರಜ್ವಲ್ ರೇವಣ್ಣ ಹೆದರಿದ್ದು ಕಾನೂನಿಗಾ..ತಾತನ ಎಚ್ಚರಿಕೆಗಾ..? ಕೊನೆಗೂ ಕಾನೂನಿಗೆ ಶರಣಾದ ಪೆನ್‌ಡ್ರೈವ್ ವೀರ..!

Published : May 31, 2024, 05:48 PM ISTUpdated : May 31, 2024, 05:49 PM IST

34 ದಿನಗಳ ನಂತರ ವಾಪಸ್ ಬಂದ ಪ್ರಜ್ವಲ್ ರೇವಣ್ಣ 
ಮಧ್ಯರಾತ್ರಿ ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್‌ ಬಂಧನ
ಪ್ರಜ್ವಲ್ ರೇವಣ್ಣ 1 ತಿಂಗಳ ಕಣ್ಣಾಮುಚ್ಚಾಲೆ ಅಂತ್ಯ 

ಅಶ್ಲೀಲ ವಿಡಿಯೋ ಬಾಂಬ್ ಸ್ಫೋಟಗೊಂಡ ಬೆನ್ನಲ್ಲೇ ದೇಶ ಬಿಟ್ಟು ವಿದೇಶಕ್ಕೆ ಹಾರಿದ್ದ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ(Prajwal Revanna). ಏಪ್ರಿಲ್ 26ರಂದು ಹಾಸನದ ಹೊಳೆನರಸೀಪುರದಲ್ಲಿ ಲೋಕಸಭಾ ಚುನಾವಣೆಗೆ ಮತ ಚಲಾಯಿಸಿ ಅದೇ ದಿನ ಮಧ್ಯರಾತ್ರಿ ಬೆಂಗಳೂರಿಗೆ ಬಂದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜರ್ಮನಿಯ ಮ್ಯೂನಿಚ್‌ಗೆ ಹಾರಿದ್ದ. ಇದೀಗ ಪ್ರಜ್ವಲ್ ರೇವಣ್ಣ ವಾಪಸ್ ಬಂದಿದ್ದು, 34 ದಿನಗಳು.. 816 ಗಂಟೆಗಳು.. 48,960 ನಿಮಿಷಗಳ ಬಳಿಕ ಹಾಸನ ಸಂಸದ ಮತ್ತೆ ಬೆಂಗಳೂರಿಗೆ ವಾಪಸ್ಸಾಗಿದ್ದಾನೆ. ನಾಲ್ಕಾರು ಬಾರಿ ಕಣ್ಣಾಮುಚ್ಚಾಲೆ ಆಟವಾಡಿ, ಬುಕ್ ಆಗಿದ್ದ ಫ್ಲೈಟ್ ಟಿಕೆಟ್‌ಗಳನ್ನು ಕೊನೆ ಕ್ಷಣದಲ್ಲಿ ಕ್ಯಾನ್ಸಲ್ ಮಾಡಿ, ತಾತ-ಚಿಕ್ಕಪ್ಪನಿಂದ ಛೀಮಾರಿ ಹಾಕಿಸಿಕೊಂಡ ನಂತರ, ಅಜ್ಞಾತವಾಸ ಮುಗಿಸಿ ಹೊರ ಬಂದಿರೋ ಪ್ರಜ್ವಲ್ ರೇವಣ್ಣ, ವಾಪಸ್ ಬೆಂಗಳೂರಿಗೆ ಬಂದಿದ್ದಾರೆ. ಪ್ರಜ್ವಲ್ ಪ್ರಯಾಣಿಸುತ್ತಿರುವ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನ ಜರ್ಮನಿಯ ಮ್ಯೂನಿಚ್ ಅಂತಾರಾಷ್ಚ್ರೀಯ ವಿಮಾನ ನಿಲ್ದಾಣದಿಂದ ಭಾರತೀಯ ಕಾಲಮಾನ ಗುರುವಾರ ಸಂಜೆ 4.20ಕ್ಕೆ ಟೇಕಾಫ್ ಆಗಿತ್ತು. ಕೊನೆಗೂ ಎಸ್‌ಐಟಿ(SIT) ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಇದನ್ನೂ ವೀಕ್ಷಿಸಿ:  ಪ್ರಜ್ವಲ್ ರೇವಣ್ಣ ಬಂಧನ..ಹೇಗಿರುತ್ತೆ ತನಿಖೆ..? ಮೊಬೈಲ್ ಮದರ್ ಡಿವೈಸ್ ಬಗ್ಗೆ ಎಸ್‌ಐಟಿ ತನಿಖೆ!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more