ರಸ್ತೆ ಕಾಮಗಾರಿ ಗಲಾಟೆಯಲ್ಲಿ ಕೊಲೆಗೆ ಸ್ಕೆಚ್: ತಾ.ಪಂ. ಮಾಜಿ ಸದಸ್ಯನ ಹತ್ಯೆಗೆ 2 ಲಕ್ಷ ಸುಪಾರಿ !

ರಸ್ತೆ ಕಾಮಗಾರಿ ಗಲಾಟೆಯಲ್ಲಿ ಕೊಲೆಗೆ ಸ್ಕೆಚ್: ತಾ.ಪಂ. ಮಾಜಿ ಸದಸ್ಯನ ಹತ್ಯೆಗೆ 2 ಲಕ್ಷ ಸುಪಾರಿ !

Published : Aug 29, 2023, 11:42 AM IST

ರಾಜಕೀಯದಲ್ಲಿ ಧ್ವೇಷ, ಅಸೂಹೆ ಕಾಮನ್.. ಆದರೆ ಕೊಲೆ ಮಾಡುವ ಹಂತಕ್ಕೆ ದ್ವೇಷ ಬೆಳೆಯುತ್ತೆ ಅಂದರೆ ನೀವೆ ಊಹಿಸಿಕೊಳ್ಳಿ. ಇಲ್ಲೊಂದು ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯ ಹಾದಿ ಹಿಡಿದಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಕೇಸ್ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 2016ರಲ್ಲಿ ನಡೆದ ಮರ್ಡರ್ (Murder)ಕೇಸ್‌ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಈಗಲೂ ಬೇಲ್ ಮೇಲೆ ಇದ್ದಾರೆ. ಇದರ ನಡುವೆ ಈಗ ಕೊಪ್ಪಳದಲ್ಲಿ(Koppal) ತಾಲೂಕು ಪಂಚಾಯತ್ ಮಾಜಿ ಸದಸ್ಯನೊಬ್ಬನ ಹತ್ಯೆಗೆ ಸಂಚು ರೂಪಿಸಿದ್ದರು. ಆದ್ರೆ, ಸುಫಾರಿ ಹಂತಕರ ಪ್ಲಾನ್ ಅದೊಂದು ಆಡಿಯೋ ಸಂಭಾಷಣೆಯಿಂದ ಉಲ್ಟಾ ಹೊಡೆದಿದೆ. ಇದು ಗಂಗಾವತಿಯ ಡಣಾಪುರ ಗ್ರಾಮದ ತಾಲೂಕು ಪಂಚಾಯತ್ ಮಾಜಿ ಸದಸ್ಯ ಫಕೀರಪ್ಪನ ಹತ್ಯೆಗೆ ನಡೆದ ಸಂಚಿನ ರಹಸ್ಯ. ಫಕರೀಪ್ಪನನ್ನು ಮುಗಿಸಲು ಅದೇ ಊರಿನ ಶಶಿಧರ್ ಮಾಲಿ ಪಾಟೀಲ್ ಅಂಡ್ ಗ್ಯಾಂಗ್ ಸ್ಕೆಚ್ ಹಾಕಿತ್ತು. ಅಷ್ಟಕ್ಕೂ ಇದೆಲ್ಲ ನಡೆದಿದ್ದು ಊರಿನ ರಸ್ತೆ ಕಾಮಾರಿ ವಿಚಾರದಲ್ಲಿ. ಊರಿನಲ್ಲಿ ನಿರ್ಮಾಣವಾಗಿದ್ದ ರಸ್ತೆಯನ್ನು ಶಶಿಧರ್ ಪಾಟೀಲ್ ಕಿತ್ತುಹಾಕಿದ್ರು. ಇದನ್ನು ವಿರೋಧಿಸಿ ಫಕೀರಪ್ಪ ಗ್ರಾಮ ಪಂಚಾಯತ್ಗೆ ದೂರು ನೀಡಿದ್ರು.. ಇಷ್ಟೇ.. ಇದಕ್ಕೇ ದ್ವೇಷ ಸಾಧಿಸಿದ ಪಾಟೀಲ್, ಫಕೀರಪ್ಪನ ಕೊಲೆ ಮಾಡಲು ಫಕೀರಪ್ಪನ ಟ್ರ್ಯಾಕ್ಟರ್ ಚಾಲಕ ಮಲ್ಲೇಶ್ ಎಂಬಾತನಿಗೆ ಸುಫಾರಿ ಕೊಟ್ಟಿದ್ದಾನೆ. ವಿಷ ಹಾಕಿದ ಮದ್ಯ ಬಾಟಲನ್ನು ಫಕೀರಪಪಗೆ ನೀಡಲು ಹೇಳಿದ್ದಾನೆ. ಇದಕ್ಕೆ ಮಹೇಶ್ ನಿರಾಕರಿಸಿದಾಗ ಲೈನ್ ಮನ್ (Line man)ಹೆಲ್ಪರ್ ಮಹೇಶ್ ಎಂಬಾತನಿಗೆ ಟಾಸ್ಕ್ ಕೊಟ್ಟಿದ್ದಾನೆ. ಆದ್ರೆ  ಮಹೇಶ್ ಕೂಡ ಧೈರ್ಯ ಸಾಲದೆ ಹಿಂಜರಿದಿದ್ದಾನೆ. ಅಷ್ಟೊತ್ತಿಗಾಗಲೇ ಕೊಲೆಗೆ ಸ್ಕೆಚ್ಹಾಕಿದ್ದ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. 

ಇದನ್ನೂ ವೀಕ್ಷಿಸಿ: ಜೋಗಿ ಮಠದಲ್ಲಿ ಜೋರಾಯ್ತು ‘ವಿಗ್ರಹ’ ವಿವಾದ: ಪೀಠಾಧಿಪತಿ ವಿರುದ್ಧವೇ ತಿರುಗಿಬಿದ್ದ ಸಮುದಾಯ !

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more