ಅಪ್ಪನ ₹30 ಲಕ್ಷ ಇನ್ಸೂರೆನ್ಸ್​​​​ ಹಣಕ್ಕಾಗಿ ಮಗ ಮಾಡಿದ್ದು ಆಕ್ಸಿಡೆಂಟ್ ಪ್ಲಾನ್!

ಅಪ್ಪನ ₹30 ಲಕ್ಷ ಇನ್ಸೂರೆನ್ಸ್​​​​ ಹಣಕ್ಕಾಗಿ ಮಗ ಮಾಡಿದ್ದು ಆಕ್ಸಿಡೆಂಟ್ ಪ್ಲಾನ್!

Published : Dec 31, 2024, 11:17 PM IST

ಟ್ಯಾಂಕ್​ ರಿಪೇರಿಗೆಂದು ಹೋದ ವೃದ್ಧ ಆ್ಯಕ್ಸಿಡೆಂಟ್​​ನಲ್ಲಿ ಸಾವನ್ನಪ್ಪಿದ್ದ. ಆದರೆ, ತನಿಖೆ ನಡೆಸಿದಾಗ ಅದು ಆ್ಯಕ್ಸಿಡೆಂಟ್​​ ಅಲ್ಲ, ಮರ್ಡರ್​​ ಅನ್ನೋದು ಬೆಳಕಿಗೆ ಬಂದಿತ್ತು. ಹಣಕ್ಕಾಗಿ ತಂದೆಯನ್ನೇ ಕೊಂದ ಮಗನ ಪಾಪದ ಕಥೆ ಇದು.

ಅವನು ಸ್ಟವ್​​ ರಿಪೇರಿ ಹಾಗೂ ಪ್ಲಾಸ್ಟಿಕ್​ ರಿಪೇರಿ ಮಾಡುವವನು. ಮೊದಲ ಹೆಂಡತಿ ಸತ್ತ ಮೇಲೆ 2ನೇ ಮದುವೆಯಾಗಿದ್ದ. ಎರಡನೇ ಹೆಂಡತಿ ಮಕ್ಕಳೊಂದಿಗೆ ದೂರದ ಊರಿನಲ್ಲಿದ್ದರೆ ಈತ ಮಾತ್ರ ಮೊದಲ ಹೆಂಡತಿಯ ಮಕ್ಕಳೊಂದಿಗೆ ವಾಸ ಮಾಡುತ್ತಿದ್ದನು. ಅದರೆ, ಆವತ್ತೊಂದು ದಿನ ಟ್ಯಾಂಕ್​​ ರಿಪೇರಿ ಇದೆ ಅಂತ ಹೋದವನು ಮಾರ್ಗ ಮಧ್ಯೆಯೇ ಆ್ಯಕ್ಸಿಡೆಂಟ್​​ ಆಗಿ ಮೃತಪಟ್ಟಿದ್ದನು.

ಪೊಲೀಸರೂ ಕೂಡ ಮೊದಲಿಗೆ ಆ್ಯಕ್ಸಿಡೆಂಟ್​​ ಕೇಸ್​ ದಾಕಲಿಸಿಕೊಂಡಿದ್ದರು. ಆದರೆ, ಕೊಂಚ ಯೋಚಿಸಿದಾಗ ಅದು ಅಪಘಾತವಲ್ಲ ಬದಲಿಗೆ ಮರ್ಡರ್​​ ಅನ್ನೋದು ಗೊತ್ತಾಗಿತ್ತು. ಹಾಗಾದರೆ ಆ ವೃದ್ಧನನ್ನ ಕೊಂದಿದ್ಯಾರು..? ಅವನನ್ನ ಕೊಂದು ಆ್ಯಕ್ಸಿಡೆಂಟ್​​​ನಂತೆ ಬಿಂಬಿಸೋದಕ್ಕೆ ಕಾರಣವೇನು..? ಒಬ್ಬ ಅಮಾಯಕನ ಬರ್ಬರ ಕೊಲೆ ಮತ್ತು ಪೊಲೀಸರ ರೋಚಕ ಇನ್ವೆಸ್ಟಿಗೇಷನ್​​ ಕಥೆಯೇ ಇವತ್ತಿನ ಎಫ್​​.ಐ.ಆರ್​​​​​..

ಮನೆಯಲ್ಲಿ ಟ್ಯಾಂಕ್​ ರಿಪೇರಿ ಕೆಲಸ ಇದೆ ಅಂತ ಕಳಿಸಿದ್ದ ಮಗನೇ ಅಪ್ಪನ ಹೆಣ ಹಾಕಿದ್ದ. ಅಷ್ಟೇ ಅಲ್ಲ ತಂದೆಯ ಹೆಣದ ಮುಂದೆ ನಿಂತು ಕಣ್ಣೀರು ಹಾಕಿದ್ದನು. ಎಲ್ಲ ಮಕ್ಕಳಂತೆ ಆತ ಕೂಡ ತಂದೆಯನ್ನ ಪ್ರೀತಿಯಿಂದ ನೋಡಿಕೊಳ್ತಿದ್ದ. ಅದೇ ಪ್ರೀತಿಯಲ್ಲಿ ತಂದೆಗೆ ಒಂದು ಇನ್ಶುರೆನ್ಸ್​​​ ಮಾಡಿಸಿದ್ದನು. ಆದ್ರೆ ಇತ್ತಿಚೆಗೆ ಆತ ತುಂಬಾನೇ ಸಾಲ ಮಾಡಿಕೊಂಡುಬಿಟ್ಟಿದ್ದ. ಸಾಲಗಾರರ ಕಾಟ ಹೆಚ್ಚಾಯ್ತು. ಏನಪ್ಪ ಮಾಡೋದು ಅಂತ ಯೋಚಿಸುತ್ತಿರುವಾಗ್ಲೇ ಅವನ ನೆನಪಿಗೆ ಬಂದಿದ್ದು ತಾನೇ ಮಾಡಿಸಿದ್ದ ಇನ್ಶುರೆನ್ಸ್​​​.

ತಂದೆ ಸತ್ತರೆ ಅವರ ಹೆಸರಿಗೆ ಮಾಡಿಸಿದ್ದ 12 ಲಕ್ಷ ರೂ. ಬರುತ್ತದೆ. ಒಂದು ವೇಳೆ ಅಪಘಾತದಲ್ಲಿ ಸತ್ತರೆ 30 ಲಕ್ಷ ರೂ. ಬರುತ್ತದೆ ಎಂಬುದನ್ನು ತಿಳಿದ ಮಗ ತಂದೆಯನ್ನೇ ಮುಗಿಸಲು ತೀರ್ಮಾನಿಸಿದ್ದಾನೆ. ಅದರಂತೆ ಪಕ್ಕ ಪ್ಲಾನ್​ ಮಾಡಿ ಆ್ಯಕ್ಸಿಡೆಂಟ್​​ ಆಗಿರುವಂತೆ ಬಿಂಬಿಸಿದ್ದಾನೆ. ಆದರೆ, ಅವನ ಬ್ಯಾಡ್​​ ಟೈಂ ತಂದೆಯ ಚಿತೆಗೆ ಬೆಂಕಿ ಇಡುವ ಮುನ್ನವೇ ಅವನು ಲಾಕ್​​ ಆಗಿದ್ದನು. ಕೇವಲ ಹಣಕ್ಕಾಗಿ ತನ್ನ ತಂದೆಯನ್ನೇ ಕೊಂದ ಮಗ ಇವತ್ತು ಜೈಲು ಸೇರಿದ್ದಾನೆ. ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಿಯೇ ತೀರುತ್ತಾನೆ.. ಆದರೆ ಇಂಥ ಕೆಟ್ಟ ಮಕ್ಕಳಿಂದ ಸಮಾಜಕ್ಕೆ ಕೆಟ್ಟ ಸಂದೇಶಗಳು ಹೋಗುತ್ತವೆ.

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!