ಕೊಲೆಯಾಗಬೇಕಿದ್ದವರೇ ಯಾರೋ..ಸತ್ತವರೇ ಯಾರೋ! ಹೆತ್ತವರನ್ನ ಕೊಲ್ಲಲು ಮಗನೇ ಕೊಟ್ಟಿದ್ದ 65 ಲಕ್ಷಕ್ಕೆ ಸುಪಾರಿ!

ಕೊಲೆಯಾಗಬೇಕಿದ್ದವರೇ ಯಾರೋ..ಸತ್ತವರೇ ಯಾರೋ! ಹೆತ್ತವರನ್ನ ಕೊಲ್ಲಲು ಮಗನೇ ಕೊಟ್ಟಿದ್ದ 65 ಲಕ್ಷಕ್ಕೆ ಸುಪಾರಿ!

Published : Apr 23, 2024, 05:20 PM ISTUpdated : Apr 23, 2024, 05:21 PM IST

ರಾತ್ರಿ ಕೊಂದು ಬೆಳಗ್ಗೆ ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ!
ತಂದೆಯ ಕುಟುಂಬವನ್ನೇ ಮುಗಿಸಲು ನಿರ್ಧರಿಸಿದ ಮಗ..!
ಬರ್ತಡೇ ಪಾರ್ಟಿ ಮಾಡಿ ಮಲಗಿದ್ದವರು ಹೆಣವಾದರು..!

ಆತ ಮಾಜಿ ನಗರ ಸಭೆ ಮಾಜಿ ಆಧ್ಯಕ್ಷ. ಹೆಂಡತಿ ಹಾಲಿ ಉಪಾಧ್ಯಕ್ಷೆ. ಅವರು ಆ ಭಾಗದ ಬಿಜೆಪಿ(BJP) ಮುಖಂಡರು. ಇನ್ನೂ ಆವತ್ತು ಅವರ ಕಿರಿಯ ಮಗನನ್ನ ನೋಡಲು ಹೆಣ್ಣಿನ ಮನೆಯವರು ಬಂದಿದ್ರು. ಅದಕ್ಕಾಗಿ ಸಂಬಂಧಿಕರೂ ಬಂದಿದ್ರು. ಎಲ್ಲಾ ಶಾಸ್ತ್ರ ಮುಗಿದ ಮೇಲೆ ಆವತ್ತು ರಾತ್ರಿ ಸಂಬಂಧಿಕರೊಬ್ಬರ ಬರ್ತಡೇ ಪಾರ್ಟಿಯನ್ನೂ ಮಾಡಿ ಮಾಲಗಿದ್ರು ಅಷ್ಟೇ. ಬೆಳಗಾಗುವಷ್ರಲ್ಲಿ ಆ ಮನೆಯಲ್ಲಿ ನಾಲ್ಕು ಹೆಣಗಳು ಬಿದ್ದಿದ್ವು. ಮಧ್ಯರಾತ್ರಿ ಆ ಮನೆಗೆ ಎಂಟ್ರಿ ಕೊಟ್ಟ ಹಂತಕರು ನಾಲ್ಕು ಹೆಣಗಳನ್ನ ಹಾಕಿ ಎಸ್ಕೇಪ್ ಆಗಿದ್ರು. ಇನ್ನೂ ತನಿಖೆ ನಡೆಸಿದ ಪೊಲೀಸರಿಗೆ(Police) ಒಂದೇ ಒಂದು ಕ್ಲೂ ಕೂಡ ಸಿಕ್ಕಿರಲಿಲ್ಲ. ಆದ್ರೆ ಘಟನೆ ನಡೆದ 72 ಗಂಟೆಗಳಲ್ಲೆ ಪೊಲೀಶರು ಹಂತಕರ ಹೆಡೆಮುರಿ ಕಟ್ಟಿದ್ದಾರೆ. ಯಾವ ಆ್ಯಂಗಲ್ನಲ್ಲಿ ತನಿಖೆ ಮಾಡಿದ್ರೂ ಹಂತಕರ ಸುಳಿವು ಸಿಗದಿದ್ದಾಗ ಪ್ರಕಾಶ್ ಬಾಕಳೆಯವರ ಮೊದಲ ಹೆಂಡತಿ ಮಕ್ಕಳ ಮೇಲೆಯೇ ಪೊಲೀಸರು ಕಣ್ಣು ಹಾಕ್ತಾರೆ. ದತ್ತಾತ್ರೇಯ ಮತ್ತು ವಿನಾಯಕ್ ಇಬ್ಬರೂ ಪ್ರಕಾಶ್ ಬಾಕಳೆ ಮೊದಲ ಹೆಂಡತಿ ಮಕ್ಕಳು. ಮನೆಯಲ್ಲಿ ನಾಲ್ಕು ಹೆಣಗಳು ಬಿದ್ದಾಗ ತಂದೆ. ಮಕ್ಕಳು ಈ ಕೆಲಸ ಮಾಡಿರೋದಕ್ಕೆ ಸಾಧ್ಯವೇ ಇಲ್ಲ ಅಂತ ಅಂದುಕೊಂಡಿದ್ರು. ಆದ್ರೆ ಪೊಲೀಸರು ಅವರಿಬ್ಬರ ಮೇಲೆಯೇ ಕಣ್ಣಿಡ್ತಾರೆ. ಮೊದಲು ಕ್ರೈಂ ಬ್ಯಾಕ್ಗ್ರೌಂಡ್ ಹೊಂದಿದ್ದ ಕಿರಿಯ ಮಗ ದತ್ತಾತ್ರೇಯನ ಹಿಂದೆ ಬೀಳ್ತಾರೆ. ಆದ್ರೆ ಆತ ಕೊಲೆಗಾರನಲ್ಲ(Murder) ಅನ್ನೋದು ಕನ್ಫರ್ಮ್ ಆಗುತ್ತೆ. ಆದ್ರೆ ಯಾವಾಗ ಮೊದಲ ಮಗ ವಿನಾಯಕ್ ಪೋನ್ ಕಾಲ್ ಡಿಟೇಲ್ಸ್ ಪರಿಶೀಲಿಸುತ್ತಾರೋ ಅವನೇ ನಾಲ್ಕು ಹೆಣ ಹಾಕಿದ್ದು ಅಂತ ಗೊತ್ತಾಗುತ್ತೆ.ಕೇವಲ ಆಸ್ತಿಗಾಗೇ ಹೆತ್ತಪನ ಕುಟುಂಬವನ್ನ ಸರ್ವನಾಶ ಮಾಡಲು ಹೋದ ವಿನಾಯಕ ಈಗ ತಗ್ಲಾಕಿಕೊಂಡಿದ್ದಾನೆ.

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more