Murder: ತಾಯಿಯನ್ನ ಕೊಂದು ಠಾಣೆಗೆ ಬಂದು ಶರಣಾದ ಮಗ..! ಊಟ ಹಾಕಲ್ಲ ಎಂದಿದ್ದಕ್ಕೆ ಉಸಿರೇ ನಿಲ್ಲಿಸಿದ ಪಾಪಿ ಪುತ್ರ !

Murder: ತಾಯಿಯನ್ನ ಕೊಂದು ಠಾಣೆಗೆ ಬಂದು ಶರಣಾದ ಮಗ..! ಊಟ ಹಾಕಲ್ಲ ಎಂದಿದ್ದಕ್ಕೆ ಉಸಿರೇ ನಿಲ್ಲಿಸಿದ ಪಾಪಿ ಪುತ್ರ !

Published : Feb 02, 2024, 12:58 PM ISTUpdated : Feb 02, 2024, 12:59 PM IST

ತಾಯಿ ಮಗನಿಗೆ ಬೈದಿದ್ದಕ್ಕೆ ಕೋಪಗೊಂಡ ಆತ ಆಕೆಯನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ ಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 

ತಾಯಿಯನ್ನು ಕೊಂದು ಮಗ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ಕೆ ಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ ನೇತ್ರಾಳನ್ನ ರಾಡ್‌ನಿಂದ ಹೊಡೆದು ಮಗ ಕೊಲೆ(Murder) ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಪವನ್‌ ಡಿಪ್ಲೋಮಾ ಓದುತ್ತಿದ್ದು, ಬೆಳಗ್ಗೆ ಕಾಲೇಜಿಗೆ ರೆಡಿ ಆಗುವಾಗ ತಾಯಿಗೆ(Mother) ಊಟ ಬಡಿಸಲು ಹೇಳಿದ್ದಾನೆ. ಈ ವೇಳೆ ಮಗನಿಗೆ ಬೈದಿದ್ದ ತಾಯಿ ನೇತ್ರಾ, ನೀನು ನನ್ನ ಮಗನೇ(Son) ಅಲ್ಲ..ನಿನಗೆ ಊಟ ಹಾಕಲ್ಲ ಎಂದಿದ್ದಾರೆ. ಅಷ್ಟಕ್ಕೇ ಕೋಪಗೊಂಡು ತಾಯಿಯ ತಲೆಗೆ ರಾಡ್‌ನಿಂದ ಪವನ್‌ ಹೊಡೆದಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡು ನೇತ್ರಾ ಮೃತಪಟ್ಟಿದ್ದಾರೆ. ಕೊಲೆ ಮಾಡಿ ಸೀದಾ ಠಾಣೆಗೆ ಹೋಗಿ ಪವನ್ ಶರಣಾಗಿದ್ದಾನೆ. ಸದ್ಯ ಆರೋಪಿಯನ್ನ ವಶಪಡೆದು ಪೊಲೀಸರು(Police) ವಿಚಾರಣೆ ನಡೆಸುತ್ತಿದ್ದಾರೆ. ಕೆ ಆರ್ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ವೀಕ್ಷಿಸಿ: KS Eshwarappa: ಡಿ.ಕೆ. ಸುರೇಶ್‌ ರಸ್ತೆಯಲ್ಲಿ ಹೋಗುವ ದಾಸಪ್ಪನಂತೆ ಮಾತನಾಡಿದ್ರೆ ಹೇಗೆ? ಕೆ.ಎಸ್‌.ಈಶ್ವರಪ್ಪ

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more