ಹೆತ್ತ ಮಗನೇ ತಾಯಿಯ ಹೆಣ ಹಾಕಿಬಿಟ್ಟನಾ..? ಪುತ್ರನ ನಡವಳಿಕೆ ಪೊಲೀಸರಿಗೆ ಕೊಟ್ಟಿತ್ತು ಸುಳಿವು ..!

ಹೆತ್ತ ಮಗನೇ ತಾಯಿಯ ಹೆಣ ಹಾಕಿಬಿಟ್ಟನಾ..? ಪುತ್ರನ ನಡವಳಿಕೆ ಪೊಲೀಸರಿಗೆ ಕೊಟ್ಟಿತ್ತು ಸುಳಿವು ..!

Published : Dec 01, 2023, 02:20 PM ISTUpdated : Dec 01, 2023, 02:35 PM IST

ತಾಯಿಯ ಕಥೆ ಮುಗಿಸಿ ಹುಡುಕುವ ನಾಟಕ ಮಾಡಿದ್ದ..!
ಅಜ್ಜಿಯನ್ನ ಕೊಂದು ಮನೆ ಬೀಗ ಹಾಕಿ ಹೋಗಿದ್ರು..!
ಸತ್ತು 3 ದಿನವಾದ್ರೂ ಮಕ್ಕಳಿಗೆ ಸುಳಿವೇ ಸಿಕ್ಕಿರಲಿಲ್ಲ..!
ಹಂತಕರು ಪೊಲೀಸರಿಗೆ ತಗ್ಲಾಕಿಕೊಂಡದ್ದೇ ರೋಚಕ..!
 

ಅವಳು 63 ವರ್ಷದ ವೃದ್ಧೆ. ಮಕ್ಕಳಿದ್ರೂ ಒಂಟಿಯಾಗಿ ಜೀವನ ಮಾಡ್ತಿದ್ಲು. ಕೂಲಿ ಮಾಡೋದು ಈಕೆಯ ಫುಲ್ ಟೈಂ ಜಾಬ್ ಆದ್ರೆ ದಾನಮ್ಮ ದೇವಿಯ ದೇವಸ್ಥಾನದ ಅರ್ಚಕಿಯಾಗಿ ಬಂದವರಿಗೆ ಭವಿಷ್ಯ ಹೇಳೋದು ಇವಳ ಪಾರ್ಟ್ ಟೈಂ ಜಾಬ್. ಜ್ಯೋತಿಷಿ ಹೇಳ್ತಿದ್ರಿಂದ ಈಕೆಗೆ ದುಡ್ಡು ಕಾಸಿನ ತೊಂದರೆ ಏನೂ ಇರಲಿಲ್ಲ. ಆದ್ರೆ ಆವತ್ತೊಂದು ದಿನ ಇದೇ ಅಜ್ಜಿ(Grand Mother) ತನ್ನದೇ ಮನೆಯಲ್ಲಿ ಹೆಣವಾಗಿ ಸಿಕ್ಕಿದ್ದಳು. ಒಂಟಿಯಾಗಿ ಜೀವನ ಮಾಡ್ತಿದ್ದವಳನ್ನ ಹಂತಕರು ಕೊಂದು ಎಸ್ಕೇಪ್ ಆಗಿದ್ರು. ಆದರೆ ತನಿಖೆ ನಡೆಸಿದ ಪೊಲೀಸರಿಗೆ(police) ಹಂತಕರ ಸುಳಿವು ಸಿಕ್ಕಿ ಹೆಡೆಮುರಿ ಕಟ್ಟೋ ಹೊತ್ತಿಗೆ ಸಾಕು ಸಾಕಾಗಿ ಹೋಗಿತ್ತು. ದಾನಮ್ಮ ದೇವಿಯ(Danamma Devi) ಪರಮ ಭಕ್ತಿಯಾಗಿದ್ದ, ಜ್ಯೋತಿಷ್ಯ ಹೇಳುತ್ತಿದ್ದ ಅಜ್ಜಿ ರತ್ನಬಾಯಿಯ ಕೊಲೆ(Murder) ಪ್ರಕರಣ ಭೇದಿಸುವಲ್ಲಿ R.G ನಗರ ಪೊಲೀಸರು ಯಶಸ್ವಿಯಾದರು. ತನಿಖೆ ಕೈಗೊಂಡ ಪೊಲೀಸರಿಗೆ, ಹಂತಕರು ಯಾರು ಎನ್ನುವುದು ಗೊತ್ತಾಗಿ ಸ್ವತಃ ಪೊಲೀಸರೇ ಶಾಕ್ ಆಗುವಂತಾಗಿತ್ತು. ಗುಡ್ಡಾಪುರ ದಾನಮ್ಮ ದೇವಿಯ ಪರಮ ಭಕ್ತೆಯಾಗಿದ್ದ ಮತ್ತು  ಕಷ್ಟ ಅಂತ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಜ್ಯೋತಿಷ್ಯ ಹೇಳುತ್ತಿದ್ದ  ಅಜ್ಜಿಯನ್ನ ತನ್ನ ಸ್ವಂತ ಮಗನೇ ಕೊಂದು ಮುಗಿಸಿದ್ದ. ಅಜ್ಜಿಯ ಸ್ನೇಹಿತನೊಂದಿಗೆ ಸೇರಿಕೊಂಡು ಅಮ್ಮನ ಕಥೆ ಮುಗಿಸಿ ನಂತರ ತಾಯಿಯನ್ನ ಹುಡುಕೋ ನಾಟಕವಾಡಿದ್ದ. ನಾವು ಅಲ್ಲಿಗೆ ಹೋದಾಗಲೂ ನಮ್ಮ ಬಳಿ ಅಮ್ಮನ ಬಗ್ಗೆ ಮಾತನ್ನಾಡಿ ಕಣ್ಣೀರು ಹಾಕಿದ್ದ. ಸಲ್ಲದ ಚಟಕ್ಕೆ ದಾಸರಾದರೆ ಆಗಬಾರದ್ದು ಆಗುತ್ತೆ ಅನ್ನೋದಕ್ಕೆ ಈ ಸ್ಟೋರಿ ಉತ್ತಮ ಎಕ್ಸಾಂಪಲ್. ಇನ್ನೂ ತಾಯಿ ಮಗನ ಎದುರಲ್ಲೇ ಕೊಲೆಯಾಗಿ ಹೋದ್ರೆ, ಮಗ ಮತ್ತು ಗೆಳೆಯ ಮಾಡಬಾರದನ್ನ ಮಾಡಿ ಜೈಲು ಸೇರಿದ್ದಾರೆ.

ಇದನ್ನೂ ವೀಕ್ಷಿಸಿ:  ‘ಪಂಚ’ ಫಲಿತಾಂಶ ಲೋಕ ಕದನಕ್ಕೆ ದಿಕ್ಸೂಚಿನಾ..? ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ !

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more