ಕರ್ನಾಟಕ, ಕೇರಳ ಗಡಿಯಲ್ಲಿ ನಡೀತಾ ಇದೆಯಾ ಉಗ್ರರ ಖತರ್ನಾಕ್ ಕೃತ್ಯ.?

ಕರ್ನಾಟಕ, ಕೇರಳ ಗಡಿಯಲ್ಲಿ ನಡೀತಾ ಇದೆಯಾ ಉಗ್ರರ ಖತರ್ನಾಕ್ ಕೃತ್ಯ.?

Published : Jun 08, 2022, 08:52 AM ISTUpdated : Jun 08, 2022, 10:10 AM IST

ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಇದು. ಕೇರಳದ ತಳ್ಳುಗಾಡಿ, ಗೂಡಂಗಡಿಗಳಿಗೆ ನಟೋರಿಯಸ್ ಉಗ್ರರ (Terrorists) ಲಿಂಕ್ ಇದೆ ಎಂಬ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಗುಪ್ತಚರ ಇಲಾಖೆ ಸೂಚನೆಯಂತೆ ಮಂಗಳೂರು (Mangaluru)  ಗಡಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ

ಬೆಂಗಳೂರು (ಜೂ. 08): ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರ ಸಂಪರ್ಕದ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ಕೇರಳ ಪೊಲೀಸರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ ಎಂದು ವರದಿಯಾಗಿದೆ. 

ಈ ವರದಿಯಲ್ಲಿ ಮಂಗಳೂರು ಗಡಿಯತ್ತಲೂ ಹದ್ದಿನ ಕಣ್ಣಿಡಲು ಗುಪ್ತಚರ ಒಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ. ಮಂಗಳೂರು ಗಡಿ ಉಲ್ಲೇಖಿಸಿ ಕೇರಳ ಪೊಲೀಸರಿಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಕೇರಳದ ಕೋವಲಂ ಮತ್ತು ಮಂಗಳೂರು ನಡುವೆ ಐಷಾರಾಮಿ ವಾಹನಗಳ ಅನುಮಾಸ್ಪದ ಓಡಾಟದ ಬಗ್ಗೆ ತಿಳಿಸಲಾಗಿದೆ. ಕೇರಳದ ವಿವಿಧ ಜಿಲ್ಲೆಗಳಿಗೆ ಶಸ್ತ್ರಾಸ್ತ್ರ ಮತ್ತು ನಗದು ಸಾಗಿಸಲು ವಾಹನ ಬಳಕೆ ಶಂಕಿಸಲಾಗಿದ್ದು, ಕೇರಳ ಕರಾವಳಿ ಮತ್ತು ಮಂಗಳೂರು ಗಡಿ ಭಾಗದಲ್ಲಿ ಎಚ್ಚರವಿರಲು ಸೂಚನೆ ನೀಡಲಾಗಿದೆ.

ಉಗ್ರರು ಕಪ್ಪು ಹಣವನ್ನು ಬಿಳಿ ಮಾಡಲು ಹೆದ್ದಾರಿ ಗೂಡಂಗಡಿ ಬಳಸುವ ಶಂಕೆ ಇದ್ದು, ಆಂಬ್ಯುಲೆನ್ಸ್‌ಗಳನ್ನು ಬಳಸಿಕೊಂಡು ಶಸ್ತ್ರಾಸ್ತ್ರ ಮತ್ತು ಹಣ ಕಳ್ಳಸಾಗಣೆ ಬಳಸೋ ಸಾಧ್ಯತೆ ಇದೆ ಎಂದು ಅಲರ್ಟ್ ಮಾಡಲಾಗಿದೆ‌. ಕರಾವಳಿ ಭಾಗದ ಅಂಗಡಿಗಳ ಮೇಲೆ ನಿಗಾ ಇಡಲು ಕೇಂದ್ರ ಗುಪ್ತಚರ ಸೂಚನೆ ನೀಡಿದ್ದು, ಹೆದ್ದಾರಿ ಬದಿಯ ಕೆಲ ಗೂಡಂಗಡಿಗಳಿಗೆ ಭಯೋತ್ಪಾದಕ ಸಂಘಟನೆಗಳ ನಂಟಿನ ಶಂಕೆ ವ್ಯಕ್ತಪಡಿಸಿದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more