Dowry: ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನ ಹೈಡ್ರಾಮಾ! ಅರಿಶಿಣ ಶಾಸ್ತ್ರದ ವೇಳೆ ವರದಕ್ಷಿಣೆಗೆ ಬೇಡಿಕೆಯಿಟ್ಟ ವರ !

Dowry: ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನ ಹೈಡ್ರಾಮಾ! ಅರಿಶಿಣ ಶಾಸ್ತ್ರದ ವೇಳೆ ವರದಕ್ಷಿಣೆಗೆ ಬೇಡಿಕೆಯಿಟ್ಟ ವರ !

Published : Jan 02, 2024, 11:58 AM IST

ಅರಿಶಿನ ಶಾಸ್ತ್ರ ಮಂಟಪದಿಂದ ಎಸ್ಕೇಪ್ ಆಗಲು ವರನ ಯತ್ನ
ಹಳದಿ ಕಾರ್ಯದಲ್ಲಿ ಪಾಲ್ಗೊಳ್ಳಲ್ಲ ಎಂದು ನಾಟಕವಾಡಿದ ಸಚಿನ್
ಮದುವೆಗೆ ನಿರಾಕರಿಸಿದ  ವರನಿಗೆ ಹುಡುಗಿ ಮನೆಯವರಿಂದ ಗೂಸಾ

ಬೆಳಗಾವಿ: ಮದುವೆ ದಿನವೇ ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರ ಹೈಡ್ರಾಮಾ ಮಾಡಿರುವ ಘಟನೆ ಬೆಳಗಾವಿಯಲ್ಲಿ(Belagavi) ನಡೆದಿದೆ.ಅರಿಶಿಣ ಶಾಸ್ತ್ರದ ವೇಳೆ ವರದಕ್ಷಿಣೆಗೆ(Dowry) ವರ ಬೇಡಿಕೆ ಇಟ್ಟಿದ್ದಾನೆ. 200 ಗ್ರಾಂ ಚಿನ್ನಾಭರಣ, 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ಬೆಳಗಾವಿ ಡಿಸಿ ಕಚೇರಿಯಲ್ಲಿ SDA ಆಗಿರುವ ಸಚಿನ್ ಪಾಟೀಲ್. ವರನ ಈ ಡಿಮ್ಯಾಂಡ್‌ಗೆ ವಧುವಿನ ಸಂಬಂಧಿಕರು ತಬ್ಬಿಬ್ಬಾಗಿದ್ದಾರೆ. ನಾವು ಬಡವರು ಹಣ, ಚಿನ್ನ ಎಲ್ಲಿಂದ ಕೊಡೋದು ಎಂದು ಪ್ರಶ್ನೆ ಮಾಡಿದ್ದಾರೆ. ಬಳಿಕ ಅರಿಶಿನ ಶಾಸ್ತ್ರದಿಂದ ವರ(Groom) ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಬಳಿಕ ಆತನನ್ನು ರೂಮ್‌ನಲ್ಲೇ ಲಾಕ್‌ ಮಾಡಿ, ಪೊಲೀಸರಿಗೆ ಒಪ್ಪಿಸಲಾಗಿದೆ. 25 ಸಾವಿರ ವರದಕ್ಷಿಣೆ, 50 ಗ್ರಾಂ‌ ಚಿನ್ನ ಕೊಡುವುದಾಗಿ ಮಾತುಕತೆ ಮಾಡಲಾಗಿತ್ತು. ಮದುವೆ ತಾವೇ ಮಾಡಿಕೊಡುವುದಾಗಿ ಒಪ್ಪಿದ್ದ ಹುಡುಗಿ(Bride) ಪೋಷಕರು. ಮಾತುಕತೆಗೆ ಉಭಯ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದರು. ನಿಶ್ಚಿತಾರ್ಥ ಬಳಿಕ ಯುವತಿ ಜೊತೆ ಯುವಕ ದೈಹಿಕ ಸಂಬಂಧ ಬೆಳೆಸಿದ್ದ ಎಂದು ತಿಳಿದುಬಂದಿದೆ. ನಾಲ್ಕೈದು ಸಲ ಯುವತಿ ಜೊತೆ ದೈಹಿಕ ಸಂಪರ್ಕ ಸಾಧಿಸಿದ್ದ ಎನ್ನಲಾಗ್ತಿದೆ. ಸಚಿನ್ ಪಾಟೀಲನನ್ನು ವಶಕ್ಕೆ ಪಡೆದು  ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸಚಿನ್ ಪಾಟೀಲ್ ವಿರುದ್ಧ ಖಾನಾಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐಪಿಸಿ ಸೆಕ್ಷನ್ 303 (ಕೊಲೆ ಬೆದರಿಕೆ), ಐಪಿಸಿ ಸೆಕ್ಷನ್ 376 (ಅತ್ಯಾಚಾರ), ಐಪಿಸಿ ಸೆಕ್ಷನ್ 420 (ವಂಚನೆ) ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  Belagavi: ಒಂದು ಹುಡುಗಿಗಾಗಿ ಇಬ್ಬರು ಯುವಕ ಮಧ್ಯೆ ಗಲಾಟೆ: ಬುದ್ಧಿ ಹೇಳಿದ ಗ್ರಾಮದ ಮುಖ್ಯಸ್ಥರ ಮನೆ ಧ್ವಂಸ !

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more