Dowry: ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನ ಹೈಡ್ರಾಮಾ! ಅರಿಶಿಣ ಶಾಸ್ತ್ರದ ವೇಳೆ ವರದಕ್ಷಿಣೆಗೆ ಬೇಡಿಕೆಯಿಟ್ಟ ವರ !

Dowry: ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನ ಹೈಡ್ರಾಮಾ! ಅರಿಶಿಣ ಶಾಸ್ತ್ರದ ವೇಳೆ ವರದಕ್ಷಿಣೆಗೆ ಬೇಡಿಕೆಯಿಟ್ಟ ವರ !

Published : Jan 02, 2024, 11:58 AM IST

ಅರಿಶಿನ ಶಾಸ್ತ್ರ ಮಂಟಪದಿಂದ ಎಸ್ಕೇಪ್ ಆಗಲು ವರನ ಯತ್ನ
ಹಳದಿ ಕಾರ್ಯದಲ್ಲಿ ಪಾಲ್ಗೊಳ್ಳಲ್ಲ ಎಂದು ನಾಟಕವಾಡಿದ ಸಚಿನ್
ಮದುವೆಗೆ ನಿರಾಕರಿಸಿದ  ವರನಿಗೆ ಹುಡುಗಿ ಮನೆಯವರಿಂದ ಗೂಸಾ

ಬೆಳಗಾವಿ: ಮದುವೆ ದಿನವೇ ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರ ಹೈಡ್ರಾಮಾ ಮಾಡಿರುವ ಘಟನೆ ಬೆಳಗಾವಿಯಲ್ಲಿ(Belagavi) ನಡೆದಿದೆ.ಅರಿಶಿಣ ಶಾಸ್ತ್ರದ ವೇಳೆ ವರದಕ್ಷಿಣೆಗೆ(Dowry) ವರ ಬೇಡಿಕೆ ಇಟ್ಟಿದ್ದಾನೆ. 200 ಗ್ರಾಂ ಚಿನ್ನಾಭರಣ, 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ಬೆಳಗಾವಿ ಡಿಸಿ ಕಚೇರಿಯಲ್ಲಿ SDA ಆಗಿರುವ ಸಚಿನ್ ಪಾಟೀಲ್. ವರನ ಈ ಡಿಮ್ಯಾಂಡ್‌ಗೆ ವಧುವಿನ ಸಂಬಂಧಿಕರು ತಬ್ಬಿಬ್ಬಾಗಿದ್ದಾರೆ. ನಾವು ಬಡವರು ಹಣ, ಚಿನ್ನ ಎಲ್ಲಿಂದ ಕೊಡೋದು ಎಂದು ಪ್ರಶ್ನೆ ಮಾಡಿದ್ದಾರೆ. ಬಳಿಕ ಅರಿಶಿನ ಶಾಸ್ತ್ರದಿಂದ ವರ(Groom) ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಬಳಿಕ ಆತನನ್ನು ರೂಮ್‌ನಲ್ಲೇ ಲಾಕ್‌ ಮಾಡಿ, ಪೊಲೀಸರಿಗೆ ಒಪ್ಪಿಸಲಾಗಿದೆ. 25 ಸಾವಿರ ವರದಕ್ಷಿಣೆ, 50 ಗ್ರಾಂ‌ ಚಿನ್ನ ಕೊಡುವುದಾಗಿ ಮಾತುಕತೆ ಮಾಡಲಾಗಿತ್ತು. ಮದುವೆ ತಾವೇ ಮಾಡಿಕೊಡುವುದಾಗಿ ಒಪ್ಪಿದ್ದ ಹುಡುಗಿ(Bride) ಪೋಷಕರು. ಮಾತುಕತೆಗೆ ಉಭಯ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದರು. ನಿಶ್ಚಿತಾರ್ಥ ಬಳಿಕ ಯುವತಿ ಜೊತೆ ಯುವಕ ದೈಹಿಕ ಸಂಬಂಧ ಬೆಳೆಸಿದ್ದ ಎಂದು ತಿಳಿದುಬಂದಿದೆ. ನಾಲ್ಕೈದು ಸಲ ಯುವತಿ ಜೊತೆ ದೈಹಿಕ ಸಂಪರ್ಕ ಸಾಧಿಸಿದ್ದ ಎನ್ನಲಾಗ್ತಿದೆ. ಸಚಿನ್ ಪಾಟೀಲನನ್ನು ವಶಕ್ಕೆ ಪಡೆದು  ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸಚಿನ್ ಪಾಟೀಲ್ ವಿರುದ್ಧ ಖಾನಾಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐಪಿಸಿ ಸೆಕ್ಷನ್ 303 (ಕೊಲೆ ಬೆದರಿಕೆ), ಐಪಿಸಿ ಸೆಕ್ಷನ್ 376 (ಅತ್ಯಾಚಾರ), ಐಪಿಸಿ ಸೆಕ್ಷನ್ 420 (ವಂಚನೆ) ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  Belagavi: ಒಂದು ಹುಡುಗಿಗಾಗಿ ಇಬ್ಬರು ಯುವಕ ಮಧ್ಯೆ ಗಲಾಟೆ: ಬುದ್ಧಿ ಹೇಳಿದ ಗ್ರಾಮದ ಮುಖ್ಯಸ್ಥರ ಮನೆ ಧ್ವಂಸ !

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more