ನಾಟಿ ಔಷಧಿ ಸೇವಿಸಿ ಮೂವರು ದುರ್ಮರಣ: ಹನುಮಾನ್ ದೇವಸ್ಥಾನದಲ್ಲಿ ಔಷಧಿ ನೀಡುವ ಫಕಿರಪ್ಪಾ ಎಸ್ಕೇಪ್!

ನಾಟಿ ಔಷಧಿ ಸೇವಿಸಿ ಮೂವರು ದುರ್ಮರಣ: ಹನುಮಾನ್ ದೇವಸ್ಥಾನದಲ್ಲಿ ಔಷಧಿ ನೀಡುವ ಫಕಿರಪ್ಪಾ ಎಸ್ಕೇಪ್!

Published : Aug 07, 2025, 01:07 PM IST

ಇಮಡಾಪುರ ಗ್ರಾಮದಲ್ಲಿ ಫಕೀರಪ್ಪ ಅಲಿಯಾಸ್ ಸಾಯಪ್ಪ ಅವರು ಕುಡಿತದ ಚಟ ಬಿಡಿಸಲು ಔಷಧ ನೀಡುತ್ತಿದ್ದರು. ನಾಲ್ವರು ಔಷಧ ಪಡೆದಿದ್ದರು ಎನ್ನಲಾಗಿದೆ.

ಕಲಬುರಗಿ (ಆ.07): ಸೇಡಂ ತಾಲೂಕಿನ ಇಮಡಾಪುರದಲ್ಲಿ ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ್ದ ಔಷಧ ಸೇವಿಸಿದ್ದ ಮೂವರು ಒದ್ದಾಡಿ, ಒದ್ದಾಡಿ  ಬುಧವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸೇಡಂ ತಾಲೂಕಿನ ಬುರಗಪಲ್ಲಿ ಗ್ರಾಮದ ಲಕ್ಷ್ಮಿ ನರಸಿಂಹಲು ಬಟಗೇರಾ (55), ಮದಕಲ್ ಗ್ರಾಮದ ನಾಗೇಶ (32) ಹಾಗೂ ಶಹಾಬಾದ್ ಬಳಿಯ‌ ಡಕ್ಕಾ ತಾಂಡಾ ಗಣೇಶ ರಾಠೋಡ್ (30) ಮೃತರು. ಲಕ್ಷ್ಮಿ ಅವರ ಮಗ ಲಿಂಗಪ್ಪ ಅವರ ಸ್ಥಿತಿ ಗಂಭೀರವಾಗಿದ್ದು, ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಮಡಾಪುರ ಗ್ರಾಮದಲ್ಲಿ ಫಕೀರಪ್ಪ ಅಲಿಯಾಸ್ ಸಾಯಪ್ಪ ಅವರು ಕುಡಿತದ ಚಟ ಬಿಡಿಸಲು ಔಷಧ ನೀಡುತ್ತಿದ್ದರು. ನಾಲ್ವರು ಔಷಧ ಪಡೆದಿದ್ದರು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಯಂತೆ ಮದ್ಯ ಸೇವನೆ ವ್ಯಸನದಿಂದ ಹೊರಬರಲು ಕೆಲವರು ನಾಟಿ ಔಷಧ ಪಡೆದಿದ್ದರು. ಭಾನುವಾರ ಔಷಧ ಪಡೆದಿದ್ದ ಜನರು ಮತ್ತೆ ಬುಧವಾರವೂ ಬಂದು ಔಷಧ ಪಡೆದಿದ್ದರು. ಆದರೆ, ಔಷಧ ಸೇವಿಸಿದ ಕೆಲವೇ ಗಂಟೆಗಳಲ್ಲಿ ಈ ದುರಂತ ಸಂಭವಿಸಿದೆ. ಈ ಸಂಬಂಧ ಸೇಡಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಔಷಧ ನೀಡಿದ ಫಕೀರಪ್ಪ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ಯಾರು ಈ ಫಕೀರಪ್ಪ?: ತಾತನ ಕಾಲದಿಂದಲೂ ನಾಟಿ ಔಷಧಿ ನೀಡುತ್ತಿರುವ ಕುಟುಂಬ ಇದು.  ತಂದೆಯ ನಂತರ ಇದೀಗ 26 ವರ್ಷದ ಫಕೀರಪ್ಪ ಕಳೆದ ಮೂರ್ನಾಲ್ಕು ವರ್ಷಗಳಿಂದ ನಾಟಿ ಔಷಧಿ ನೀಡುತ್ತಿದ್ದಾನೆ. ಕುಡಿತದ ಚಟ ಬಿಡಿಸಲು, ಮಾಟ ಮಂತ್ರ ಕಾಟ ತಪ್ಪಿಸಲು, ಕಾಮಾಲೆ, ಹಾವು , ಚೇಳು ಕಡಿತ ಸೇರಿದಂತೆ ವಿವಿಧ ಕಾಯಿಲೆಗಳಿಗೆ ಔಷಧಿಯನ್ನು ಫಕೀರಪ್ಪ ನೀಡುತ್ತಿದ್ದ.ಕರ್ನಾಟಕ ಮಾತ್ರವಲ್ಲದೇ ನೆರೆಯ ಆಂದ್ರ, ತೆಲಂಗಾಣದಿಂದ ಸಾಕಷ್ಟು ಜನ ಇಲ್ಲಿಗೆ ಬರುತ್ತಿದ್ದರು.ಇದೇ ಮೊದಲ ಬಾರಿಗೆ ಈ ರೀತಿ ದುರಂತ ನಡೆದಿದೆ ಎನ್ನುತ್ತಾರೆ ಸ್ಥಳಿಯರು. 

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more