ಹುಬ್ಬಳ್ಳಿ ಧಾರವಾಡ ನಗರದಲ್ಲಿ ಹೆಚ್ಚಾದ ಸೈಬರ್ ಅಪರಾಧ: ದಿನಕ್ಕೊಂದು ವರಸೆ, ಮೋಸ..ಕ್ರಿಮಿನಲ್‌ಗಳ ನಾನಾ ವೇಷ!

ಹುಬ್ಬಳ್ಳಿ ಧಾರವಾಡ ನಗರದಲ್ಲಿ ಹೆಚ್ಚಾದ ಸೈಬರ್ ಅಪರಾಧ: ದಿನಕ್ಕೊಂದು ವರಸೆ, ಮೋಸ..ಕ್ರಿಮಿನಲ್‌ಗಳ ನಾನಾ ವೇಷ!

Published : Jul 19, 2024, 03:11 PM IST

ಮೂವರು ವ್ಯಕ್ತಿಗಳಿಗೆ ಹುಬ್ಬಳ್ಳಿಯಲ್ಲಿ  1.4 ಕೋಟಿ ರೂಪಾಯಿ ವಂಚನೆ 
ಕ್ರಿಪ್ಪೋ ಕರೆನ್ಸಿ ಖರೀದಿ ಮಾಡಿದ್ರೆ ಲಾಭ ಪಡೆಯಬಹುದೆಂದು ವಂಚನೆ 
ಹುಬ್ಬಳ್ಳಿ ಉದ್ಯಮಿ ಶಿವಾನಂದ ಪಾವಸ್ಕರ್ , ಇಬ್ಬರು ಸ್ನೇಹಿತರಿಗೆ ವಂಚನೆ
 

ಹುಬ್ಬಳ್ಳಿ-ಧಾರವಾಡ (Hubli-Dharwad)ನಗರದಲ್ಲಿ ಸೈಬರ್‌ ಅಪರಾಧಗಳು(Cyber ​​crimes) ಹೆಚ್ಚಾಗುತ್ತಿದ್ದು, ದಿನಕ್ಕೊಂದು ವರಸೆ, ಮೋಸವನ್ನು ಕ್ರಿಮಿನಲ್‌ಗಳು ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಜನ ಹಣ ಕಳೆದುಕೊಳ್ಳುತ್ತಲೇ ಇದ್ದಾರೆ. ಕ್ರಿಪ್ಪೋ ಕರೆನ್ಸಿ(Crypto currency) ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಲಾಗಿದೆ. ಮೂವರು ವ್ಯಕ್ತಿಗಳಿಗೆ ಬರೋಬ್ಬರಿ 1.4 ಕೋಟಿ ರೂ. ವಂಚನೆ ಮಾಡಲಾಗಿದೆ. ಕ್ರಿಪ್ಪೋ ಕರೆನ್ಸಿ ಖರೀದಿಸಿದ್ರೆ ಹೆಚ್ಚಿನ ಲಾಭ ಪಡೆಯಬಹುದೆಂದು ವಂಚನೆ ಮಾಡಲಾಗಿದೆ. ಹುಬ್ಬಳ್ಳಿ(Hubli) ಉದ್ಯಮಿ ಶಿವಾನಂದ ಪಾವಸ್ಕರ್ ಹಾಗೂ ಇಬ್ಬರು ಸ್ನೇಹಿತರಿಗೆ ವಂಚನೆ ಮಾಡಲಾಗಿದ್ದು, ಗೋಕುಲ ರಸ್ತೆಯ ಶಿವಾನಂದ, ಪ್ರವೀಣ ಕುಲಕರ್ಣಿ, ಸುಜೀತ್ ಕಲಬುರ್ಗಿಗೆ  ವಂಚನೆ ಮಾಡಲಾಗಿದೆ. ಫೇಸ್‌ಬುಕ್‌ನಲ್ಲಿ ಕ್ರಿಪ್ಲೋ ಕರೆನ್ಸಿ ಜಾಹೀರಾತು ನೋಡಿ ವ್ಯಕ್ತಿಗಳು ಮೋಸ ಹೋಗಿದ್ದಾರೆ. ಫೇಸ್‌ ಬುಕ್‌ನಲ್ಲಿದ್ದ ನಂಬ‌ರ್ ಮೂಲಕ ಛಾಯಾಸಿಂಗ್ ಎಂಬ ವ್ಯಕ್ತಿಯ ಪರಿಚಯವಾಗಿದ್ದು, ವೆಬ್‌ಸೈಟ್‌ಗಳ ಲಿಂಕ್ ಕಳಿಸಿ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಲು ಸೂಚನೆ ನೀಡಲಾಗಿದೆ. ಇದನ್ನು ನಂಬಿದ ಮೂವರಿಂದಲೂ ಲಿಂಕ್ ಇನ್‌ಸ್ಟಾಲ್ ಮಾಡಲಾಗಿದೆ. ಮೂವರ ಖಾತೆಗಳಿಂದ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಲಾಗಿದೆ. ಶಿವಾನಂದ ಖಾತೆಯಿಂದ 68.99 ಲಕ್ಷ ರೂ., ಸುಜಿತ್ ಖಾತೆಯಿಂದ 14.85 ಲಕ್ಷ, ಪ್ರವೀಣ್ ಕುಲಕರ್ಣಿ ಖಾತೆಯಿಂದ 21.5 ಲಕ್ಷ ರೂಪಾಯಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್‌ಗೆ ಜೈಲಲ್ಲಿ ಊಟ ಸೇರ್ತಿಲ್ವಾ..? ನಿದ್ರೆ ಬರ್ತಿಲ್ವಾ..? ಪೊಲೀಸರ ಆಕ್ಷೇಪಣೆಯಲ್ಲಿ ಏನಿದೆ..?

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more