ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ PFI ಸಂಪರ್ಕವಿದೆಯಾ..?

ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ PFI ಸಂಪರ್ಕವಿದೆಯಾ..?

Published : Aug 13, 2023, 10:26 AM IST

ಸ್ಥಳ ಮಹಜರು ನಡೆಸಿ ಅಗತ್ಯ ಮಾಹಿತಿ ಸಂಗ್ರಹ
ಡಿವೈಎಸ್ಪಿ ಅಂಜುಮಾಲ ನೇತೃತ್ವದಲ್ಲಿ  ತನಿಖೆ
ಕುತೂಹಲ ಕೆರಳಿರುವ ವಿದ್ಯಾರ್ಥಿನಿಯರ ನಡೆ
ಕೆಲವೇ ದಿನಗಳಲ್ಲಿ FSL ವರದಿ ಬಹಿರಂಗ

ಉಡುಪಿ ವಿಡಿಯೋ ಪ್ರಕರಣ ಸಿಐಡಿಗೆ(CID) ಹಸ್ತಾಂತರವಾಗಿ ಆರು ದಿನಗಳಾದವು. ಒಂದು ಕ್ಷಣವೂ ವಿಳಂಬ ಮಾಡದೆ ಸಿಐಡಿ ಪೊಲೀಸರು ಉಡುಪಿಯಲ್ಲಿ(Udupi) ಬಿಡು ಬಿಟ್ಟು ತನಿಖೆ ನಡೆಸಿದ್ದಾರೆ. ಈ ನಡುವೆ ಎಡಿಜಿಪಿ ಮನೀಶ್ ಕರ್ಬೀಕರ್, ಸಿಐಡಿ- ಎಸ್‌ಪಿ ರಾಘವೇಂದ್ರ ಹೆಗಡೆ ತಮ್ಮ ಕರ್ತವ್ಯ ಮುಗಿಸಿ ವಾಪಸ್ ಆಗಿದ್ದಾರೆ. ಸದ್ಯ ತನಿಖಾಧಿಕಾರಿಯಾಗಿರುವ ಡಿವೈಎಸ್ಪಿ ಅಂಜುಮಾಲ ತನಿಖೆ ತೀವ್ರಗೊಳಿಸಿದ್ದಾರೆ. ತನಿಖೆಯ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ಮನೆಗೆ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ. ಮೂವರ ಮನೆಗಳಲ್ಲಿ ತಲಾಶ್ ನಡೆಸಿದ್ದಾರೆ. ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ತೆರಳಿದ್ದಾರೆ. ವಿಡಿಯೋ ಪ್ರಕರಣಕ್ಕೆ(video case) ಸಂಬಂಧಿಸಿದಂತೆ ಸ್ಥಳ ಮಹಜರು ನಡೆಸಿ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ರೀತಿಯ ಕೃತ್ಯಗಳಲ್ಲಿ ಈ ಹಿಂದೆ ಏನಾದರೂ ಭಾಗಿಯಾಗಿದ್ರಾ ಅನ್ನೋ ಬಗ್ಗೆ ಪರಿಶೀಲಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ಪಿಎಫ್ಐ(PFI) ಮಹಿಳಾ ವಿಂಗ್ ಸಂಪರ್ಕ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿರುವ ಹಿನ್ನೆಲೆಯಲ್ಲಿ ಈ ದಾಳಿ ಕುತೂಹಲ ಕೆರಳಿಸಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿಗೆ ಸಲ್ಲಿಸಿರುವ ತಪ್ಪೊಪ್ಪಿಗೆ ಪತ್ರ, ನ್ಯಾಯಾಲಯದಲ್ಲಿ ನೀಡಿದ ಹೇಳಿಕೆ ಬಗ್ಗೆ ವಿದ್ಯಾರ್ಥಿನಿಯರನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಆರಂಭದಲ್ಲಿ ಒಂದಿಷ್ಟು ಅಸಹಕಾರ ತೋರಿದ ಕಾಲೇಜು ಆಡಳಿತ ಮಂಡಳಿ, ಪೊಲೀಸರ ಎಚ್ಚರಿಕೆಗೆ ಬೆದರಿ ಮಾಹಿತಿ ನೀಡಿರುವ ವಿಚಾರ ಗೊತ್ತಾಗಿದೆ.

ಇದನ್ನೂ ವೀಕ್ಷಿಸಿ: ತೆಲುಗು ನಟಿಯರೂ ಇಂಡಸ್ಟ್ರಿಗೆ ಬರಬೇಕೆಂದ ಸ್ಟೈಲಿಷ್ ಸ್ಟಾರ್: ತೆಲುಗು ನಾಯಕಿಯರೇ ಇಲ್ವಾ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!