ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ PFI ಸಂಪರ್ಕವಿದೆಯಾ..?

ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ PFI ಸಂಪರ್ಕವಿದೆಯಾ..?

Published : Aug 13, 2023, 10:26 AM IST

ಸ್ಥಳ ಮಹಜರು ನಡೆಸಿ ಅಗತ್ಯ ಮಾಹಿತಿ ಸಂಗ್ರಹ
ಡಿವೈಎಸ್ಪಿ ಅಂಜುಮಾಲ ನೇತೃತ್ವದಲ್ಲಿ  ತನಿಖೆ
ಕುತೂಹಲ ಕೆರಳಿರುವ ವಿದ್ಯಾರ್ಥಿನಿಯರ ನಡೆ
ಕೆಲವೇ ದಿನಗಳಲ್ಲಿ FSL ವರದಿ ಬಹಿರಂಗ

ಉಡುಪಿ ವಿಡಿಯೋ ಪ್ರಕರಣ ಸಿಐಡಿಗೆ(CID) ಹಸ್ತಾಂತರವಾಗಿ ಆರು ದಿನಗಳಾದವು. ಒಂದು ಕ್ಷಣವೂ ವಿಳಂಬ ಮಾಡದೆ ಸಿಐಡಿ ಪೊಲೀಸರು ಉಡುಪಿಯಲ್ಲಿ(Udupi) ಬಿಡು ಬಿಟ್ಟು ತನಿಖೆ ನಡೆಸಿದ್ದಾರೆ. ಈ ನಡುವೆ ಎಡಿಜಿಪಿ ಮನೀಶ್ ಕರ್ಬೀಕರ್, ಸಿಐಡಿ- ಎಸ್‌ಪಿ ರಾಘವೇಂದ್ರ ಹೆಗಡೆ ತಮ್ಮ ಕರ್ತವ್ಯ ಮುಗಿಸಿ ವಾಪಸ್ ಆಗಿದ್ದಾರೆ. ಸದ್ಯ ತನಿಖಾಧಿಕಾರಿಯಾಗಿರುವ ಡಿವೈಎಸ್ಪಿ ಅಂಜುಮಾಲ ತನಿಖೆ ತೀವ್ರಗೊಳಿಸಿದ್ದಾರೆ. ತನಿಖೆಯ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ಮನೆಗೆ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ. ಮೂವರ ಮನೆಗಳಲ್ಲಿ ತಲಾಶ್ ನಡೆಸಿದ್ದಾರೆ. ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ತೆರಳಿದ್ದಾರೆ. ವಿಡಿಯೋ ಪ್ರಕರಣಕ್ಕೆ(video case) ಸಂಬಂಧಿಸಿದಂತೆ ಸ್ಥಳ ಮಹಜರು ನಡೆಸಿ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ರೀತಿಯ ಕೃತ್ಯಗಳಲ್ಲಿ ಈ ಹಿಂದೆ ಏನಾದರೂ ಭಾಗಿಯಾಗಿದ್ರಾ ಅನ್ನೋ ಬಗ್ಗೆ ಪರಿಶೀಲಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ಪಿಎಫ್ಐ(PFI) ಮಹಿಳಾ ವಿಂಗ್ ಸಂಪರ್ಕ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿರುವ ಹಿನ್ನೆಲೆಯಲ್ಲಿ ಈ ದಾಳಿ ಕುತೂಹಲ ಕೆರಳಿಸಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿಗೆ ಸಲ್ಲಿಸಿರುವ ತಪ್ಪೊಪ್ಪಿಗೆ ಪತ್ರ, ನ್ಯಾಯಾಲಯದಲ್ಲಿ ನೀಡಿದ ಹೇಳಿಕೆ ಬಗ್ಗೆ ವಿದ್ಯಾರ್ಥಿನಿಯರನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಆರಂಭದಲ್ಲಿ ಒಂದಿಷ್ಟು ಅಸಹಕಾರ ತೋರಿದ ಕಾಲೇಜು ಆಡಳಿತ ಮಂಡಳಿ, ಪೊಲೀಸರ ಎಚ್ಚರಿಕೆಗೆ ಬೆದರಿ ಮಾಹಿತಿ ನೀಡಿರುವ ವಿಚಾರ ಗೊತ್ತಾಗಿದೆ.

ಇದನ್ನೂ ವೀಕ್ಷಿಸಿ: ತೆಲುಗು ನಟಿಯರೂ ಇಂಡಸ್ಟ್ರಿಗೆ ಬರಬೇಕೆಂದ ಸ್ಟೈಲಿಷ್ ಸ್ಟಾರ್: ತೆಲುಗು ನಾಯಕಿಯರೇ ಇಲ್ವಾ?

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!