ಕಾವಾಡಿಗರಹಟ್ಟಿಗೆ ಕೇಂದ್ರ, ರಾಜ್ಯ ಸಚಿವರು ಭೇಟಿ: ಡಿಸಿಗೆ ತಿಮ್ಮಾಪುರ ತರಾಟೆ

ಕಾವಾಡಿಗರಹಟ್ಟಿಗೆ ಕೇಂದ್ರ, ರಾಜ್ಯ ಸಚಿವರು ಭೇಟಿ: ಡಿಸಿಗೆ ತಿಮ್ಮಾಪುರ ತರಾಟೆ

Published : Aug 05, 2023, 11:04 AM IST

ಚಿತ್ರದುರ್ಗ ಕವಾಡಿಗರಹಟ್ಟಿಯಲ್ಲಿ ವಿಷ ಜಲ ಜನರ ಜೀವವನ್ನೇ ತೆಗಯುತ್ತಿದೆ. ಪ್ರತಿನಿತ್ಯ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದರ ಮಧ್ಯೆ ಜಿಲ್ಲಾಡಳಿತ ವಾಟರ್ ಟ್ಯಾಂಕ್ ಕ್ಲೀನ್ ಮಾಡಿಸಿದ್ರೆ. ಇತ್ತ ಕೇಂದ್ರ, ರಾಜ್ಯ ಸಚಿವರು ಭೇಟಿ ಕೊಟ್ಟು ವೈಯಕ್ತಿಕವಾಗಿ ಪರಿಹಾರ ಘೋಷಿಸಿದ್ರು.
 

ಚಿತ್ರದುರ್ಗ ಕವಾಡಿಗರಹಟ್ಟಿಯಲ್ಲಿ( Kavadigarahatti) ವಿಷ ಜಲ ದುರಂತದಲ್ಲಿ ಮರಣಮೃದಂಗ ಮುಂದುವರಿದಿದೆ. ಜೀವ ಜಲ ಸೇವಿಸಿ ಜೀವ ಬಿಟ್ಟವರ ಸಂಖ್ಯೆ ಏರುತ್ತಲೇ ಇದೆ. ಕಲುಷಿತ ನೀರು(Contaminated water) ಕುಡಿದು ಅಸ್ವಸ್ಥರಾಗಿದ್ದ ಮತ್ತಿಬ್ಬರು ಪ್ರಾಣ ಬಿಟ್ಟಿದ್ದಾರೆ. 50 ವರ್ಷದ ರುದ್ರಪ್ಪ, 75 ವರ್ಷದ ಪಾರ್ವತಮ್ಮ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 5ಕ್ಕೆ ಏರಿದೆ. ಇನ್ನು ಮೃತ ಪಾರ್ವತಮ್ಮ ಕುಟುಂಬಸ್ಥರೆಲ್ಲರೂ ಅಸ್ವಸ್ಥರಾಗಿ ಅಸ್ಪತ್ರೆ ಸೇರಿದ್ದಾರೆ. ಈ ಮೂಲಕ ಅಸ್ವಸ್ಥರ ಸಂಖ್ಯೆಯೂ ಹೆಚ್ಚುತ್ತಲೇ ಇದ್ದು ಗ್ರಾಮಸ್ಥರನ್ನು ಆತಂಕಕ್ಕೆ ತಳ್ಳಿದೆ. ಇನ್ನು ಗ್ರಾಮದಲ್ಲೇ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ದುರಂತ ನಡೆದು 5 ದಿನಗಳ ಬಳಿಕಕೇಂದ್ರ ಸಚಿವ ನಾರಾಯಣಸ್ವಾಮಿ(Minister Narayanaswamy)  ಹಾಗೂ ಅಬಕಾರಿ ಸಚಿವ ತಿಮ್ಮಾಪುರ (Minister Timmapura)  ಗ್ರಾಮಕ್ಕೆ ಭೇಟಿ ನೀಡಿದ್ರು. ಅಸ್ವಸ್ಥರ ಆರೋಗ್ಯ ವಿಚಾರಿಸಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ರು. ಇನ್ನು ಮೃತರ ಕುಟುಂಬಕ್ಕೆ ವೈಕ್ತಿಕವಾಗಿ 50 ಸಾವಿರ ಪರಿಹಾರ ಘೋಷಿಸಿದ ನಾರಾಯಣಸ್ವಾಮಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ರು. ಇತ್ತ ಸರ್ಕಾರದ ಪರಿಹಾರದ ಚೆಕ್ ವಿತರಿಸದ  ಡಿಸಿ ದಿವ್ಯಾಪ್ರಭುಗೆ ತಿಮ್ಮಾಪುರ ಕ್ಲಾಸ್ ತೆಗೆದುಕೊಂಡ್ರು. 

ಇದನ್ನೂ ವೀಕ್ಷಿಸಿ:  BBMP Elections: ಬಿಜೆಪಿ ಗೆಲುವಿನ ತಂತ್ರಕ್ಕೆ ತಿರುಮಂತ್ರ ಹಾಕಿದ ಕಾಂಗ್ರೆಸ್‌!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more