ಕಾವಾಡಿಗರಹಟ್ಟಿಗೆ ಕೇಂದ್ರ, ರಾಜ್ಯ ಸಚಿವರು ಭೇಟಿ: ಡಿಸಿಗೆ ತಿಮ್ಮಾಪುರ ತರಾಟೆ

ಕಾವಾಡಿಗರಹಟ್ಟಿಗೆ ಕೇಂದ್ರ, ರಾಜ್ಯ ಸಚಿವರು ಭೇಟಿ: ಡಿಸಿಗೆ ತಿಮ್ಮಾಪುರ ತರಾಟೆ

Published : Aug 05, 2023, 11:04 AM IST

ಚಿತ್ರದುರ್ಗ ಕವಾಡಿಗರಹಟ್ಟಿಯಲ್ಲಿ ವಿಷ ಜಲ ಜನರ ಜೀವವನ್ನೇ ತೆಗಯುತ್ತಿದೆ. ಪ್ರತಿನಿತ್ಯ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದರ ಮಧ್ಯೆ ಜಿಲ್ಲಾಡಳಿತ ವಾಟರ್ ಟ್ಯಾಂಕ್ ಕ್ಲೀನ್ ಮಾಡಿಸಿದ್ರೆ. ಇತ್ತ ಕೇಂದ್ರ, ರಾಜ್ಯ ಸಚಿವರು ಭೇಟಿ ಕೊಟ್ಟು ವೈಯಕ್ತಿಕವಾಗಿ ಪರಿಹಾರ ಘೋಷಿಸಿದ್ರು.
 

ಚಿತ್ರದುರ್ಗ ಕವಾಡಿಗರಹಟ್ಟಿಯಲ್ಲಿ( Kavadigarahatti) ವಿಷ ಜಲ ದುರಂತದಲ್ಲಿ ಮರಣಮೃದಂಗ ಮುಂದುವರಿದಿದೆ. ಜೀವ ಜಲ ಸೇವಿಸಿ ಜೀವ ಬಿಟ್ಟವರ ಸಂಖ್ಯೆ ಏರುತ್ತಲೇ ಇದೆ. ಕಲುಷಿತ ನೀರು(Contaminated water) ಕುಡಿದು ಅಸ್ವಸ್ಥರಾಗಿದ್ದ ಮತ್ತಿಬ್ಬರು ಪ್ರಾಣ ಬಿಟ್ಟಿದ್ದಾರೆ. 50 ವರ್ಷದ ರುದ್ರಪ್ಪ, 75 ವರ್ಷದ ಪಾರ್ವತಮ್ಮ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 5ಕ್ಕೆ ಏರಿದೆ. ಇನ್ನು ಮೃತ ಪಾರ್ವತಮ್ಮ ಕುಟುಂಬಸ್ಥರೆಲ್ಲರೂ ಅಸ್ವಸ್ಥರಾಗಿ ಅಸ್ಪತ್ರೆ ಸೇರಿದ್ದಾರೆ. ಈ ಮೂಲಕ ಅಸ್ವಸ್ಥರ ಸಂಖ್ಯೆಯೂ ಹೆಚ್ಚುತ್ತಲೇ ಇದ್ದು ಗ್ರಾಮಸ್ಥರನ್ನು ಆತಂಕಕ್ಕೆ ತಳ್ಳಿದೆ. ಇನ್ನು ಗ್ರಾಮದಲ್ಲೇ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ದುರಂತ ನಡೆದು 5 ದಿನಗಳ ಬಳಿಕಕೇಂದ್ರ ಸಚಿವ ನಾರಾಯಣಸ್ವಾಮಿ(Minister Narayanaswamy)  ಹಾಗೂ ಅಬಕಾರಿ ಸಚಿವ ತಿಮ್ಮಾಪುರ (Minister Timmapura)  ಗ್ರಾಮಕ್ಕೆ ಭೇಟಿ ನೀಡಿದ್ರು. ಅಸ್ವಸ್ಥರ ಆರೋಗ್ಯ ವಿಚಾರಿಸಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ರು. ಇನ್ನು ಮೃತರ ಕುಟುಂಬಕ್ಕೆ ವೈಕ್ತಿಕವಾಗಿ 50 ಸಾವಿರ ಪರಿಹಾರ ಘೋಷಿಸಿದ ನಾರಾಯಣಸ್ವಾಮಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ರು. ಇತ್ತ ಸರ್ಕಾರದ ಪರಿಹಾರದ ಚೆಕ್ ವಿತರಿಸದ  ಡಿಸಿ ದಿವ್ಯಾಪ್ರಭುಗೆ ತಿಮ್ಮಾಪುರ ಕ್ಲಾಸ್ ತೆಗೆದುಕೊಂಡ್ರು. 

ಇದನ್ನೂ ವೀಕ್ಷಿಸಿ:  BBMP Elections: ಬಿಜೆಪಿ ಗೆಲುವಿನ ತಂತ್ರಕ್ಕೆ ತಿರುಮಂತ್ರ ಹಾಕಿದ ಕಾಂಗ್ರೆಸ್‌!

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more