Police with People : ಮಾಲೀಕರ ಮುಖದಲ್ಲಿ ಸಂತಸ ಉತ್ತರ ಕನ್ನಡ ಪೊಲೀಸರ ಮಹತ್ಕಾರ್ಯ

Police with People : ಮಾಲೀಕರ ಮುಖದಲ್ಲಿ ಸಂತಸ ಉತ್ತರ ಕನ್ನಡ ಪೊಲೀಸರ ಮಹತ್ಕಾರ್ಯ

Published : Dec 17, 2021, 09:08 PM IST

* 2020-21ರ ಸಾಲಿನಲ್ಲಿ 18 ಮರ್ಡರ್  ಸೇರಿದಂತೆ ಬರೋಬ್ಬರಿ 204 ಪ್ರಕರಣ ದಾಖಲು

* 97 ಪ್ರಕರಣಗಳ‌ನ್ನು ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿ

* ಸುಮಾರು 75 ಲಕ್ಷ ರೂ. ಮೌಲ್ಯದ ಸೊತ್ತು ಮಾಲೀಕರಿಗೆ ಹಸ್ತಾಂತರ 

* ಪೊಲೀಸರ ಸಹಾಯದಿಂದ ಸೊತ್ತು ಮತ್ತೆ ಮರಳಿ ಪಡೆದ ಜನರಿಗೆ ಖುಷಿ 

ಕಾರವಾರ(ಡಿ. 17) ಉತ್ತರ ಕನ್ನಡ (Uttara Kannada)  ಜಿಲ್ಲೆಯಲ್ಲಿ 2020-21ರ ಸಾಲಿನಲ್ಲಿ ನಡೆದ ಹಲವು ಪ್ರಕರಣಗಳ ಪೈಕಿ ಶೇ. 50ರಷ್ಟು ಪ್ರಕರಣ ಬೇಧಿಸಿರುವ ಜಿಲ್ಲಾ ಪೊಲೀಸರು, ಕಳ್ಳತನವಾಗಿದ್ದ (Robbery) ಮೌಲ್ಯಯುತ ಸೊತ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಿದ್ದಾರೆ. ಸುಮಾರು 75 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ಹಸ್ತಾಂತರಿಸಿದ್ದು, ಕಳೆದುಕೊಂಡ ಸೊತ್ತುಗಳನ್ನು ಮರಳಿ ಪಡೆದವರು ಪೊಲೀಸರ ಕಾರ್ಯ ಶ್ಲಾಘಿಸಿದ್ದಾರೆ.

Drive Against Drug Menace: ಹೊಸ ವರ್ಷಕ್ಕೂ ಮುನ್ನ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸ್ ಸಮರ

ಉತ್ತರಕನ್ನಡ ಜಿಲ್ಲೆಯಲ್ಲಿ 2020-21ರ ಸಾಲಿನಲ್ಲಿ ನಡೆದ18 ಮರ್ಡರ್ ಪ್ರಕರಣಗಳು ಸೇರಿದಂತೆ ಬರೋಬ್ಬರಿ 204 ಪ್ರಕರಣಗಳ ಪೈಕಿ 97 ಪ್ರಕರಣಗಳ‌ನ್ನು ಭೇದಿಸುವಲ್ಲಿ ಜಿಲ್ಲಾ ಪೊಲೀಸರು ಸಫಲರಾಗಿದ್ದಾರೆ. ವಶಪಡಿಸಿಕೊಂಡ ಚಿನ್ನ, ಬೆಳ್ಳಿಯ ಆಭರಣ, ಇತರ ಸೊತ್ತುಗಳು, ನಗದು ಹಾಗೂ ದ್ವಿಚಕ್ರ ವಾಹನಗಳನ್ನು ಇದೀಗ ಅದರ ಮಾಲಕರಿಗೆ ಹಸ್ತಾಂತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ  ಕಾರವಾರದ ಡಿಎಆರ್ ಪರೇಡ್ ಗ್ರೌಂಡ್‌ನಲ್ಲಿ ಪ್ರಾಪರ್ಟಿ ರಿಟರ್ನ್ ಪರೇಡ್ ಆಯೋಜಿಸಿದ ಪೊಲೀಸ್ ಇಲಾಖೆ ಸಾಂಕೇತಿಕವಾಗಿ 10 ಜನರಿಗೆ ಅವರ ಸೊತ್ತುಗಳನ್ನು ಹಿಂತಿರುಗಿಸಿದೆ. ಸಿದ್ದಾಪುರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 55,000ರೂ., ಶಿರಸಿಯ ಸಿಪಿ ಬಜಾರ್‌ನಲ್ಲಿ ಗ್ರಾಹಕರ ಸೋಗಿನಲ್ಲಿ ಕಳ್ಳರು ಎಗರಿಸಿದ ಎರಡು ಚಿನ್ನದ ಸರ, ಮಾರಿಕಾಂಬಾ ದೇವಸ್ಥಾನದ ಬಳಿ ಉಷಾ ಪೈ ಅವರಿಂದ ಕಳ್ಳರು ಎಗರಿಸಿದ್ದ ಚಿನ್ನದ ಸರ ಹಿಂದಿರುಗಿಸಲಾಗಿದೆ.

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಎಎಸ್‌ಐ ನಾರಾಯಣ ಜೋಗಿ ಮಡಿವಾಳ, ಸಿ.ಹೆಚ್.ಸಿ ರಾಮಾ ಎಮ್. ಕುದ್ರಗಿ, ಸಿ.ಹೆಚ್.ಸಿ ಕರಬಸಪ್ಪ ಇಂಗಳಸೂರ, ಸಿ.ಹೆಚ್.ಸಿ ರಮೇಶ ಕೂಡಲ, ಸಿ.ಪಿ.ಸಿ ಯಶ್ವಂತ ಬಿಳಗಿ, ಸಿ.ಪಿ.ಸಿ ಮೋಹನ ಗಾವಡಿ ಅವರಿಗೆ ನಗದು ಬಹುಮಾನ ಹಾಗೂ ಪ್ರಸಂಶನಾ ಪತ್ರ ನೀಡಿ ಗೌರವಿಸಲಾಯಿತು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more