ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!

ಪ್ರೀತಿಸಲು ನಿರಾಕರಣೆ: ಹಾಡಹಗಲೇ ಕಾಲೇಜು ವಿದ್ಯಾರ್ಥಿನಿಯನ್ನು ಬರ್ಬರ ಕೊಲೆ ಮಾಡಿದ ಆರೋಪಿ ವಿಘ್ನೇಶ್!

Published : Oct 17, 2025, 12:20 PM IST

ಪ್ರೀತಿಗೆ ನಿರಾಕರಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದು ಕಿಡಿಗೇಡಿಯೊಬ್ಬ ಹತ್ಯೆಗೈದು ಪರಾರಿಯಾಗಿರುವ ಘಟನೆ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಬೆಂಗಳೂರು (ಅ.17): ಪ್ರೀತಿಗೆ ನಿರಾಕರಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದು ಕಿಡಿಗೇಡಿಯೊಬ್ಬ ಹತ್ಯೆಗೈದು ಪರಾರಿಯಾಗಿರುವ ಘಟನೆ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಸ್ವತಂತ್ರಪಾಳ್ಯದ ಯಾಮಿನಿ ಪ್ರಿಯಾ (20) ಕೊಲೆಯಾದ ದುರ್ದೈವಿ. ಈ ಕೃತ್ಯ ಎಸಗಿ ಪರಾರಿಯಾಗಿರುವ ಮೃತಳ ನೆರೆ ಮನೆಯ ನಿವಾಸಿ ವಿಘ್ನೇಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕಾಲೇಜು ಮುಗಿಸಿ ಮನೆಗೆ ಮರಳುವಾಗ ಮಂತ್ರಿ ಮಾಲ್ ಸಮೀಪ ರೈಲ್ವೆ ಹಳಿಗಳ ಬಳಿ ಪ್ರಿಯಾಳಿಗೆ ಚಾಕುವಿನಿಂದ ಇರಿದು ಆರೋಪಿ ಕೊಂದಿದ್ದಾನೆ. ಕುಟುಂಬದ ಜತೆ ಸ್ವತಂತ್ರಪಾಳ್ಯದಲ್ಲಿ ನೆಲೆಸಿದ್ದ ಪ್ರಿಯಾ, ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮ್‌ ಓದುತ್ತಿದ್ದಳು.

ಪ್ರತಿ ದಿನ ನಡೆದುಕೊಂಡೇ ಕಾಲೇಜಿಗೆ ಹೋಗಿ ಆಕೆ ಬರುತ್ತಿದ್ದಳು. ಹಲವು ದಿನಗಳಿಂದ ಆಕೆಗೆ ಪ್ರೀತಿಸುವಂತೆ ನೆರೆಮನೆಯ ವಿಘ್ನೇಶ್ ಹಿಂದೆ ಬಿದ್ದಿದ್ದ. ಆದರೆ ಆತನ ಪ್ರಸ್ತಾಪಕ್ಕೆ ಪ್ರಿಯಾ ನಿರಾಕರಿಸಿದ್ದಳು. ಇದರಿಂದ ಕೆರಳಿದ ಆರೋಪಿ, ಕಾಲೇಜು ಮುಗಿಸಿ ಮಧ್ಯಾಹ್ನ ಮನೆಗೆ ಮರಳುತ್ತಿದ್ದ ಆಕೆಯನ್ನು ಅಡ್ಡಗಟ್ಟಿ ಕುತ್ತಿಗೆ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ರಕ್ತದ ಮಡುವಿನಲ್ಲಿ ವಿದ್ಯಾರ್ಥಿನಿ ಮೃತದೇಹ ಕಂಡು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more